SIRA (Tumkur) News: ಜೂ.19ಕ್ಕೆ ಶಿರಾ ನಗರಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮನ; ಸತ್ಯಪ್ರಕಾಶ್
ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನಾ ಉದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡು ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸೇರಿದಂತೆ ಪಕ್ಷದ ಸಮಾವೇಶದಲ್ಲಿ ಭಾಗವಹಿಸ ಲಿದ್ದಾರೆ. ಈಗಾಗಲೇ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಚಾಲನೆ ನೀಡಿದ್ದಾರೆ. ಜೂ.19ರಂದು ಶಿರಾಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವೀಗೊಳಿಸಿ ಎಂದರು.

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ, ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್ ಉಗ್ರೇಶ್ ಸೇರಿದಂತೆ ಹಲವರು ಹಾಜರಿದ್ದರು.

ಶಿರಾ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನತೆಗೆ ತಿಳಿಸಲು ಹಾಗೂ 2028ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುವ ಉದ್ದೇಶದಿಂದ ಪಕ್ಷ ಸಂಘಟಿಸಲು ಜನರೊಂದಿಗೆ ಜನತಾದಳ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಅವರು ಜೂ.19 ಶಿರಾ ನಗರಕ್ಕೆ ಆಗಮಿಸಲಿದ್ದಾರೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್ ಹೇಳಿದರು.
ಅವರು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನಾ ಉದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡು ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸೇರಿದಂತೆ ಪಕ್ಷದ ಸಮಾವೇಶದಲ್ಲಿ ಭಾಗವಹಿಸ ಲಿದ್ದಾರೆ. ಈಗಾಗಲೇ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಚಾಲನೆ ನೀಡಿದ್ದಾರೆ. ಜೂನ್ ೧೯ ರಂದು ಶಿರಾಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವೀಗೊಳಿಸಿ ಎಂದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಮಾತನಾಡಿ ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ರಸ್ತೆಗಳು ಹದಗೆಟ್ಟಿವೆ, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಆದರೆ ಸರಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನು ಜನರಲ್ಲಿ ಬಿಂಬಿಸಿದ್ದಾರೆ. ಆದ್ದರಿಂದ ರಾಜ್ಯದ ಆಡಳಿತಕ್ಕೆ ಹೊಸ ರೂಪ ಕೊಡಬೇಕು. ಆಡಳಿತದಲ್ಲಿ ಚುರುಕು ಮುಟ್ಟಿಸಬೇಕು ಎಂಬ ಉದ್ದೇಶ ದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಜೂ.19ಕ್ಕೆ ರಾಜ್ಯ ಯುವ ಜನತಾದಳ ಅಧ್ಯಕ್ಷರಾದ ನಿಖಿಲ್ ಕುಮಾರ ಸ್ವಾಮಿ ಆಗಮಿಸಲಿದ್ದಾರೆ. ಜೆಡಿಎಸ್ ಪಕ್ಷದ ಎಲ್ಲಾ ಯುವ ಶಕ್ತಿಗೆ ಚೈತನ್ಯ ನೀಡಲು ಆಗಮಿಸುತ್ತಿದ್ದು, ಎಲ್ಲರೂ ಭಾಗವಹಿಸಿ ಎಂದರು.
ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್ ಉಗ್ರೇಶ್ ಮಾತನಾಡಿ, ರಾಜ್ಯ ಯುವ ಜನತಾದಳದ ಅಧ್ಯಕ್ಷರಾದ ನೀಖಿಲ್ ಕುಮಾರಸ್ವಾಮಿ ಅವರು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿ ದ್ದಾರೆ. ಜನರೊಂದಿಗೆ ಜನತಾದಳ ಎಂಬ ಕಾರ್ಯಕ್ರಮ ಹಮ್ಮಿಕೊಂಡು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಶಿರಾ ನಗರಕ್ಕೆ ಜೂ. ೧೯ರಂದು ಆಗಮಿಸುತ್ತಿದ್ದಾರೆ. ಅಂದು ತಾಲೂಕಿನ ಎಲ್ಲಾ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿ ಪಂ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಅಂಜಿನಪ್ಪ, ನಗರಸಭೆ ಸದಸ್ಯ ಆರ್.ರಾಮು, ಮಾಜಿ ಸದಸ್ಯ ಆರ್. ರಾಘವೇಂದ್ರ, ಮಾಜಿ ತಾ.ಪಂ. ಉಪಾಧ್ಯಕ್ಷ ರಂಗನಾಥ್ ಗೌಡ, ಮಾಜಿ ಗ್ರಾ.ಪಂ. ಅಧ್ಯಕ್ಷ ಟಿ ಡಿ ನರಸಿಂಹಮೂರ್ತಿ, ನಗರ ಜೆಡಿಎಸ್ ಅಧ್ಯಕ್ಷ ಶ್ರೀರಂಗ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಮ್ಮ, ಮುಖಂಡರಾದ ಉದಯ ಶಂಕರ್, ಭುವನಹಳ್ಳಿ ನಟರಾಜು, ಶ್ರೀಧರ್, ಸುನಿಲ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.