ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ತುಮಕೂರು ವಿವಿಯ ಬಿಸಿಯೂಟ ಯೋಜನೆ ಅನ್ನದಾಸೋಹದ ಪ್ರತೀಕ: ವಿ. ಸೋಮಣ್ಣ

Tumkur News: ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ತುಮಕೂರು ವಿವಿಯ ಬಿಸಿಯೂಟ ಯೋಜನೆ ಅನ್ನದಾಸೋಹದ ಪ್ರತೀಕ: ವಿ. ಸೋಮಣ್ಣ

Profile Siddalinga Swamy Apr 10, 2025 7:18 PM

ತುಮಕೂರು: ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna)‌ ಅಭಿಪ್ರಾಯಪಟ್ಟರು. ತುಮಕೂರು(Tumkur News) ವಿಶ್ವವಿದ್ಯಾನಿಲಯದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಅನ್ನಪೂರ್ಣೇಶ್ವರಿ ಯೋಜನೆಯನ್ನು ಬುಧವಾರ ವೀಕ್ಷಿಸಿ, ಮಾತನಾಡಿದ ಅವರು, ನಿಷ್ಕಲ್ಮಶವಾದ ಸೇವೆಯನ್ನು ಮಾಡುವುದಕ್ಕೆ ಇಂತಹದ್ದೇ ಕೆಲಸವೆಂದು ಇಲ್ಲ. ಅಧಿಕಾರವಿದ್ದಾಗ ಎಲ್ಲಾ ವರ್ಗದವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿ, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ದೇಶದಲ್ಲಿ ಸಾವಿರಾರು ಕೋಟಿಯನ್ನು ಗಳಿಸಿ ಅದನ್ನು ಏನು ಮಾಡಬೇಕು ಎಂದು ಯೋಚಿಸುವವರ ನಡುವೆ ಒಂದು ತುತ್ತು ಊಟಕ್ಕೂ ಸಹ ಪರದಾಡುವ ಪರಿಸ್ಥಿತಿಯ ಜನರಿದ್ದಾರೆ. ಪ್ರಧಾನ ಮಂತ್ರಿಯವರ ಆಶಯದಂತೆ ಹತ್ತು ವರ್ಷದಲ್ಲಿ ದೇಶದ 108 ಜಿಲ್ಲೆಗಳ ಸಾವಿರಾರು ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲಕ್ಕೆ ತರಲಾಗಿದೆ ಎಂದು ತಿಳಿಸಿದರು. ತಮ್ಮ ವಿದ್ಯಾಭ್ಯಾಸಕ್ಕೆ ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಇಂತಹ ವಿಭಿನ್ನವಾದ ಯೋಜನೆಯನ್ನು ತುಮಕೂರಿನಲ್ಲಿ ಕಳೆದ ಎರಡು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಸ್ಥಳಕ್ಕೆ ಎಂತಹ ಜಿಪುಣ ಬಂದರೂ ಅವರಿಗೆ ದಾನ ಮಾಡುವ ಮನಸ್ಥಿತಿ ಸೃಷ್ಟಿಯಾಗುತ್ತದೆ ಎಂದರು.

ಈ ಸುದ್ದಿಯನ್ನೂ ಓದಿ | V Somanna: ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏ.12 ರಿಂದ ಹೊಸ ರೈಲು: ವಿ. ಸೋಮಣ್ಣ

ಸಚಿವರು ವಿದ್ಯಾರ್ಥಿಗಳಿಗೆ ಊಟ ಬಡಿಸಿ, ತಾವೂ ಸಹಭೋಜನ ನಡೆಸಿದರು. ಪಾವಗಡ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಜಪಾನಂದ ಸ್ವಾಮೀಜಿ, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್ ಗೌಡ, ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಆಹಾರ ವಿತರಣಾ ಸಮಿತಿ ಸದಸ್ಯರಾದ ಆರ್.ಎಲ್. ರಮೇಶ್ ಬಾಬು, ಎಸ್. ನಾಗಣ್ಣ, ನಟರಾಜ ಶೆಟ್ಟಿ ಉಪಸ್ಥಿತರಿದ್ದರು.