Chakravarthy Sulibele: ಚಕ್ರವರ್ತಿ ಸೂಲಿಬೆಲೆಗೆ ಪೊಲೀಸರಿಂದ ನೋಟಿಸ್; ರಾಜಕೀಯ ಮಾತನಾಡದಂತೆ ಸೂಚನೆ!
Chakravarthy Sulibele: ಪೊಲೀಸರು ನೊಟೀಸ್ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.


ಉಡುಪಿ: ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಬಾರದು ಎಂದು ಷರತ್ತು ವಿಧಿಸಿ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕುಂದಾಪುರ ಪೊಲೀಸರು ನೋಟಿಸ್ ನೀಡಿದ್ದಾರೆ. ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಜೂ. 20, 21 ಮತ್ತು 22 ರಂದು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಪೊಲೀಸ್ ಅಧಿಕಾರಿಗಳು, ರಾಜಕೀಯ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಆಯೋಜಕರಿಗೆ ಹಾಗೂ ಸೂಲಿಬೆಲೆಯವರಿಗೆ ನೀಡಿರುವ ನೋಟಿಸ್ನಲ್ಲಿ ಷರತ್ತು ವಿಧಿಸಿದ್ದಾರೆ.
ತಮಗೆ ನೊಟೀಸ್ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ. ನನಗೆ ನೋಟಿಸ್ ಹೊಸತಲ್ಲ, ಬಹಳ ಕಡೆಗಳಲ್ಲಿ ನೋಟಿಸ್ ಕೊಟ್ಟಿದ್ದಾರೆ. ಈ ಬಾರಿ ರಾಜಕೀಯ ಮಾತನಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದಿದ್ದಾರೆ.
ನೆಹರು, ಇಂದಿರಾ, ರಾಜೀವ್ ಗಾಂಧಿ ಕುರಿತಂತೆ ಮಾತನಾಡಬಾರದು ಎಂದು ಅರ್ಥವೇ? ಘಜ್ನಿ, ಘೋರಿ, ಔರಂಗಜೇಬ್ ಮುಂತಾದ ಕ್ರೂರಿಗಳ ತೇಜೋವಧೆ ಮಾಡಬಾರದೆಂದು ಅರ್ಥವೇ? ಕುಂದಾಪುರ ಪೊಲೀಸರೇ ಮಾಹಿತಿ ಕೊಟ್ಟರೆ ಉತ್ತಮ. ನಾನು ಕುಂದಾಪುರಕ್ಕೆ ಬರಬಾರದೆಂದು ಹೇಳುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ, ನಾನು ಕುಂದಾಪುರಕ್ಕೆ ಹೋಗೇ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಹೇಳುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಯೋಜಕ ನಿರಂಜನ್ ಶೆಟ್ಟಿ, NSUI ನವರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಶ್ಮೀರದ ವಿಚಾರ ಮಾತನಾಡದೇ ಅಖಂಡ ಭಾರತದ ಬಗ್ಗೆ ಉಪನ್ಯಾಸ ಅಸಾಧ್ಯ. ಕಾಶ್ಮೀರ ಕಾಂಗ್ರೆಸ್ ಕಾಲದಲ್ಲಿ ಸಮಸ್ಯೆ ಆಗಿ ಉಳಿದಿತ್ತು. ಈ ವಿಚಾರ ಜನರಿಗೆ ತಿಳಿಯಬಾರದು ಅನ್ನೋದು ಇವರ ಉದ್ದೇಶ ಇರಬಹುದು. ಕಾಂಗ್ರೆಸ್ ಬಣ್ಣ ಬಯಲಾಗುತ್ತೆ ಎನ್ನುವ ಕಾರಣಕ್ಕೆ ತಡೆಯಲು ಮುಂದಾಗಿದ್ದಾರೆ. ನಾವು ಕಾರ್ಯಕ್ರಮ ಮಾಡಿಯೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | Kantara: Chapter 1: ಅನುಮತಿ ಇಲ್ಲದೇ ಶೂಟಿಂಗ್; ಕಾಂತಾರ ಚಿತ್ರತಂಡಕ್ಕೆ ಶಿವಮೊಗ್ಗ ಜಿಲ್ಲಾಡಳಿತದಿಂದ ನೋಟಿಸ್
ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ರೈಡ್, ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್
ಮಂಗಳೂರು: ದಕ್ಷಿಣ ಕನ್ನಡ (dakshina kannada) ಜಿಲ್ಲೆಯಲ್ಲಿ ಕೋಮು ಸಂಘರ್ಷಗಳು (Communla clash) ಪದೇ ಪದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅವುಗಳಿಗೆ ಬ್ರೇಕ್ ಹಾಕಲು ಮಂಗಳೂರು ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ದರು. ಈ ವಿಚಾರ ಇದೀಗ ಪೊಲೀಸರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ ಅವರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ದರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿ ದೂರ ನೀಡಿದ್ದರು. ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.
ಜೂನ್ 1ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರ ಮನೆಗಳಿಗೆ ಪೊಲೀಸರು ಮಧ್ಯರಾತ್ರಿ ತೆರಳಿ ಫೋಟೋ ತೆಗೆದು ಜಿಪಿಎಸ್ ಅಪ್ ಲೋಡ್ ಮಾಡಿದ್ದರು ಎಂದು ಉಪ್ಪಿನಂಗಡಿಯ ಹಿರಿಯ ನಾಗರಿಕರಾದ ಯು.ಜಿ ರಾಧಾ ಹೈಕೋರ್ಟ್ ಮೆಟ್ಟಿಲೇರಿದ್ದರು. ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು.
ಆರೋಪಿಗಳ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ ಮಾನನಷ್ಟ ಪರಿಹಾರ ನೀಡುವಂತೆ ಯು.ಜಿ.ರಾಧಾ ಹೈಕೋರ್ಟ್ಗೆ ದೂರು ನೀಡಿದ್ದರು.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ದೂರುದಾರರ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ಯು.ಜಿ.ರಾಧಾ ಅವರು ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್ಪಿಗೆ ನೋಟಿಸ್ ಜಾರಿ ಮಾಡಿದೆ. ಬೇರೆ ಬೇರೆ ದೂರುಗಳ ಆಧಾರದಲ್ಲಿ ಎಸ್ಪಿಗೆ ನೋಟಿಸ್ ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದೆ. ಮಂಗಳೂರು ಕಮಿಷನರೇಟ್ ಬಳಿಕ ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ಠಾಣೆಗಳ 116 ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. 7 ಎಎಸ್ಐ, 31 ಎಚ್ ಸಿ, 78 ಪಿಸಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯ ಮೇರೆಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಎರಡು ಭೀಕರ ಹತ್ಯೆಗಳ ಬಳಿಕ ದಕ್ಷಿಣ ಕನ್ನಡ ಪೊಲೀಸ್ ಇಲಾಖೆಗೆ ಭಾರಿ ಸರ್ಜರಿ ಆಗಿದೆ. ಹತ್ಯೆಯ ಸುಳಿವಿದ್ದರೂ ಪೊಲೀಸ್ ಇಲಾಖೆಯಿಂದ ನಿರ್ಲಕ್ಷ್ಯ ಎಂದು ರಾಜಕೀಯ ಮುಖಂಡರು ಆರೋಪಿಸಿದ್ದಾರೆ.
ಇದನ್ನೂ ಓದಿ: UT Khader: "ಹೃದಯಗಳು ನೋವಿನಿಂದ ತುಂಬಿವೆ..." ಹಜ್ ಯಾತ್ರೆಯ ಬಳಿಕ ದಕ್ಷಿಣ ಕನ್ನಡದ ಜನತೆಗೆ ಯುಟಿ ಖಾದರ್ ಪತ್ರ
ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಠಾಣೆ ಸಿಬ್ಬಂದಿಗಳ ಮಾಹಿತಿ ಪಡೆದಿದ್ದ ಎಸ್ಪಿ ಅರುಣ್ ಕುಮಾರ್, ಅಧಿಕಾರ ವಹಿಸಿಕೊಂಡ ಕೂಡಲೇ ಆಪರೇಷನ್ಗೆ ಮುಂದಾಗಿದ್ದರು. ನಾಲ್ಕು ವರ್ಷಗಳಿಂದ ಒಂದೇ ಠಾಣೆಯಲ್ಲಿರುವವರ ಬಗ್ಗೆ ಮಾಹಿತಿ ಪಡೆದಿದ್ರು. ಸಾರ್ವಜನಿಕರ ಆರೋಪ ಹಿನ್ನೆಲೆಯಲ್ಲಿ, ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದವರಿಗೆ ವರ್ಗಾವಣೆ ಶಾಕ್ ನೀಡಲಾಗಿದೆ.