#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Laxmi Tombattu: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ಲಕ್ಷ್ಮೀ ತೊಂಬಟ್ಟು

ತೊಂಬಟ್ಟು ಗ್ರಾಮದ ಲಕ್ಷ್ಮೀ ಉಡುಪಿ ಜಿಲ್ಲಾಡಳಿತದ ಎದುರು ಶರಣಾಗಿದ್ದಾಳೆ. ಪೊಲೀಸ್‌ ಭದ್ರತೆಯೊಂದಿಗೆ ಎಸ್‌ ಪಿ ಕಚೇರಿಗೆ ಸಹೋದರ ವಿಠ್ಠಲ್‌ ಪೂಜಾರಿ ಹಾಗೂ ಸಂಬಂಧಿಕರೊಂದಿಗೆ ಲಕ್ಷ್ಮೀ ತೊಂಬಟ್ಟು ಆಗಮಿಸಿದ್ದಳು.2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದಳು.

ಉಡುಪಿಯಲ್ಲಿ ನಕ್ಸಲ್‌  ಲಕ್ಷ್ಮೀ ತೊಂಬಟ್ಟು  ಶರಣಾಗತಿ

Naxal Lakshmi T

Profile Vishakha Bhat Feb 2, 2025 1:17 PM

ಉಡುಪಿ: ನಕ್ಸಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ (Udupi) ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಮವಾಸ್ಯೆ ಬೈಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ (Laxmi Tombattu) ಉಡುಪಿ ಜಿಲ್ಲಾಡಳಿತದ ಎದುರು ಶರಣಾಗಿದ್ದಾಳೆ.

ಉಡುಪಿ ಜಿಲ್ಲಾ ಅಧೀಕ್ಷಕರ ಕಚೇರಿಯಲ್ಲಿ ಶರಣಾಗತಿ ಪ್ರಕ್ರಿಯೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗಿದ್ದಾಳೆ. ಪೊಲೀಸ್‌ ಭದ್ರತೆಯೊಂದಿಗೆ ಎಸ್‌ ಪಿ ಕಚೇರಿಗೆ ಸಹೋದರ ವಿಠ್ಠಲ್‌ ಪೂಜಾರಿ ಹಾಗೂ ಸಂಬಂಧಿಕರೊಂದಿಗೆ ಲಕ್ಷ್ಮೀ ತೊಂಬಟ್ಟು ಆಗಮಿಸಿದ್ದಳು. ಈ ವೇಳೆ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ ಅರುಣ್‌, ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ ಹಾಗೂ ಕುಂದಾಪುರ ಡಿವೈಎಸ್‌ಪಿ ಹಾಗೂ ಉಡುಪಿ ಡಿವೈಎಸ್‌ಪಿ ಹಾಜರಿದ್ದರು. ಲಕ್ಷ್ಮೀ ಮೇಲೆ ಅಮವಾಸ್ಯೆ ಬೈಲಿನ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣಗಳಿವೆ.

2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದಳು. ಕರ್ನಾಟಕದಿಂದ ನಾಪತ್ತೆಯಾಗಿದ್ದಂತ ಲಕ್ಷ್ಮೀ ತೊಂಬಟ್ಟು ಆಂಧ್ರಪ್ರದೇಶದಲ್ಲಿ ನಕ್ಸಲರಾಗಿ ಸಕ್ರೀಯರಾಗಿದ್ದಳು. ನಂತರ ಮಾಜಿ ನಕ್ಸಲ್‌ ಆಗಿದ್ದ ಸಂಜೀವ್ ಎಂಬಾತನನ್ನು ವಿವಾಹವಾಗಿದ್ದಳು. ಆ ಬಳಿಕ ನಕ್ಸಲ್ ತೊರೆದು, ಆಂಧ್ರದಲ್ಲಿ ಸಂಸಾರಿಕ ಜೀವನ ನಡೆಸುತ್ತಿದ್ದರು. ಸದ್ಯ ಸಂಜೀವ್ ಆಲಿಯಾಸ್ ಸಲೀಂ ಹಾಗೂ ಲಕ್ಷ್ಮೀ ನಕ್ಸಲಿಸಮ್‌ ತೊರೆದು, ಮುಖ್ಯವಾಹಿನಿಗೆ ಬಂದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ 6 ನಕ್ಸಲರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ನಂತರ ಶನಿವಾರ ಮತ್ತೋರ್ವ ನಕ್ಸಲ್‌ ಕೋಟೆ ಹೊಂಡ ರವಿ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶರಣಾಗಿದ್ದಾನೆ. ಈತ 18 ವರ್ಷಗಳಿಂದ ಭೂಗತನಾಗಿದ್ದ. ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿರುವ ನೆಮ್ಮಾರ್ ಫಾರೆಸ್ಟ್ ಐಬಿಯಲ್ಲಿ ಪೊಲೀಸರ ಮುಂದೆ ಶರಣಾಗತರಾಗಿದ್ದಾನೆ.

ಈ ಸುದ್ದಿಯನ್ನೂ ಓದಿ: Kote Honda Ravindra: ಇನ್ನುಮುಂದೆ ರಾಜ್ಯ ನಕ್ಸಲ್ ಮುಕ್ತ; ಭೂಗತನಾಗಿದ್ದ ನಕ್ಸಲ್‌ ಕೋಟೆಹೊಂಡ ರವಿ ಶರಣಾಗತಿ

ಈ ಮೂಲಕ ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ. ನಕ್ಸಲ್‌ ಶರಣಾಗತಿ ಆಪರೇಷನ್‌ನಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಪದಕವನ್ನು ಘೋಷಿಸಿದ್ದಾರೆ.