Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.7: ರಾಜ್ಯದಲ್ಲಿ ಮುಂದಿನ 6 ದಿನ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಡಿ.7ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ (Karnataka Weather) ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.
ಡಿ.7ರಿಂದ 12ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.
ಬೀದರ್ನಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಬೀದರ್ನಲ್ಲಿ ಶನಿವಾರ ಬೆಳಗ್ಗೆ ಅತಿ ಕನಿಷ್ಠ ತಾಪಮಾನ 13.5 °C ದಾಖಲಾಗಿದೆ. ಇನ್ನು ದಕ್ಷಿಣ ಕೇರಳ ಕರಾವಳಿ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 0.9 ಕಿ.ಮೀ. ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಟ್ವಾಳದ ಬಾಳೆಪುಣಿಯಲ್ಲಿ ಗರಿಷ್ಠ ಮಳೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (KSNDMC) ರಾಜ್ಯದಾದಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಲಾಗಿರುವ ದೂರಸ್ಥ ಮಳೆ ಮಾಪನ ಕೇಂದ್ರಗಳಲ್ಲಿ ಡಿ.6 ಬೆಳಗ್ಗೆ 8.30ರ ಅನ್ವಯ ದಾಖಲಾದ ಮಳೆ ಪ್ರಮಾಣದ ಅನ್ವಯ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯದಲ್ಲೇ ಗರಿಷ್ಠ 9.5. ಮಿ.ಮೀ. ಮಳೆ ಸುರಿದಿದೆ.
Health Tips: ಕಿವಿಯಲ್ಲಿ ಏನೇನೊ ಶಬ್ದ ಕೇಳಿಸುತ್ತಿದೆಯಾ? ಕಾರಣ ಇಲ್ಲಿದೆ
ಇನ್ನುಳಿದಂತೆ ರಾಜ್ಯದ ಚಿಕ್ಕಬಳ್ಳಾಪುರ, ಬಳ್ಳಾರಿ, ಬೆಳಗಾವಿ, ಯಾದಗಿರಿ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಶಿವಮೊಗ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಕೊಡಗು, ಹಾಸನ, ಮಂಡ್ಯ, ಬೀದರ್, ಧಾರವಾಡ ಬಾಗಲಕೋಟೆ, ದಾವಣಗೆರೆ, ವಿಜಯಪುರ, ಗದಗ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ ಮತ್ತು ಹಾವೇರಿ ಸೇರಿ 26 ಜಿಲ್ಲೆಗಳಲ್ಲಿ ಅತ್ಯಲ್ಪ ಮಳೆ ದಾಖಲಾಗಿದೆ.