ಕುಮಟಾ: ʼಬಿಜೆಪಿಯಿಂದ ಟಿಕೆಟ್ ಸಿಗದೇ ಇದ್ದಾಗ ಡಿ.ಕೆ. ಶಿವಕುಮಾರ್ ಕರೆ ಮಾಡಿ ಕಾಂಗ್ರೆಸ್ಗೆ ಸೇರುವಂತೆ ಕೇಳಿಕೊಂಡಿದ್ದರು. ಇದಕ್ಕೆ ಒಪ್ಪದೇ ತಿರಸ್ಕರಿಸಿದ್ದೇನೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ವಿಶ್ವಾಸದಂತೆ ವಿಧಾನಸೌಧ ಪ್ರವೇಶ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಆಯೋಜಿಸಲಾಗಿದ್ದ ಸಾಧನಾ ಸೌರಭ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ರಾಷ್ಟ್ರೀಯ ಸೌರಭ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಮಾತನಾಡಿ, ತಾನು ಬಡತನದಿಂದ ಮೇಲೆ ಬಂದವನು. ಹೋಟೆಲ್ಗೆ ಹಾಲು ಹಾಕುತ್ತಿದ್ದ ಬಾಲಕನಾಗಿದ್ದ ತಾನು ಇಂದು ಬರಹಗಾರನಾಗಿ ಗುರುತಿಸಲು ವಿಶ್ವೇಶ್ವರ ಭಟ್ ಅವರ ಮಾರ್ಗದರ್ಶನವೇ ಕಾರಣ. ಪತ್ರಿಕೋದ್ಯಮ ಮಾತ್ರವಲ್ಲದೆ ರಾಜಕಾರಣದಲ್ಲೂ ನನ್ನ ಕೈಹಿಡಿದು ನಡೆಸಿದರು ಎಂದು ಸ್ಮರಿಸಿದರು.