ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Annabrahma Chaturmasya: ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಭೋಜನವನ್ನು ತಪಸ್ಸೆಂದು ಹೇಳಿದ್ದು, ಆಹಾರದಲ್ಲಿ ಹಿತ - ಮಿತ ಎಂಬುದು ವ್ಯಕ್ತಿಗತವಾಗಿದ್ದು, ವೃತ್ತಿ ಪ್ರವೃತ್ತಿ, ಹಿನ್ನೆಲೆ ಇತ್ಯಾದಿಗಳನ್ನು ಆಧರಿಸಿ ವ್ಯಕ್ತಿಯ ಹಿತ ಮಿತಗಳು ನಿರ್ಧಾರವಾಗುತ್ತದೆ. ಯಜ್ಞಕ್ಕೆ ಯೋಗ್ಯವಾದ ಆಹಾರಕ್ಕೆ ಮೇಧ್ಯಾ ಎಂಬ ಹೆಸರಿದ್ದು, ಅಂತಹ ಉತ್ಕೃಷ್ಟ ಆಹಾರವನ್ನು ಸ್ವೀಕರಿಸುವುದರಿಂದ ನಮ್ಮೊಳಗಿನ ಅಗ್ನಿಯನ್ನು ಜಾಗೃತ ಗೊಳಿಸಬಹುದು. ದೇಹವೆಂಬ ಪೆಟ್ಟಿಗೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳಿಗೂ ಅಗ್ನಿಜಾಗರಣ ಉತ್ತರವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ.

ಗೋಕರ್ಣ, ಆ.08: ಊಟ ಮಾಡದೆಯೇ ಋಷಿಗಳಂತೆ ತಪಸ್ಸನ್ನು ಆಚರಿಸುವುದು ಒಂದು ವಿಧವಾದರೇ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲವನ್ನು ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ (Sri Raghaveshwara Bharathi Swamiji) ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶನಿವಾರ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಪಾಪದ ದಾರಿಗಳಲ್ಲಿ ಆಹಾರವೇ ಪ್ರಧಾನವಾಗಿದ್ದು, ಪಾಪ‌ ನಮ್ಮೊಳಗೆ ಸೇರಿದ ನಂತರ ಬಾಧೆಯನ್ನು ನೀಡಲು ಆರಂಭಿಸುತ್ತದೆ. ಸರಿಯಾದ ಭೋಜನ ಕ್ರಮದಿಂದ ರೋಗ ಹಾಗೂ ಪಾಪ ಎರಡನ್ನೂ ನಾಶ ಮಾಡಬಹುದು. ಯಾವುದು ಒಳ್ಳೆಯದೋ ಅದು ಹಿತ ಹಾಗೂ ಯಾವುದು ಇಷ್ಟವೋ ಅದು ಪ್ರಿಯ. ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ ಎಂದು ಅಭಿಪ್ರಾಯಪಟ್ಟರು.

Shri Raghaveshwara Bharathi Swamiji

ದೇಹದ ಒಳಗೆ ಹೋಗುವ ಶ್ವಾಸ ಹಾಗೂ ಆಹಾರದಿಂದಲೇ ದೇಹದ ಒಳಗಿನ ಪಾಪವನ್ನು ನಾಶಮಾಡಲು ಸಾಧ್ಯ. ವಿಧಿಪೂರ್ವಕವಾದ ಪ್ರಾಣಾಯಾಮ ಹಾಗೂ ಸಮರ್ಪಕ ಆಹಾರ ಕ್ರಮದಿಂದ ದೇಹದ ಪಾಪವನ್ನು ತೊಳೆದುಕೊಳ್ಳಬಹುದು ಎಂದರು.

ಹಿತಿ - ಮಿತ - ಮೇಧ್ಯಾ ಎಂಬ ಸೂತ್ರದ ಮೂಲಕ

ಭೋಜನವನ್ನು ತಪಸ್ಸೆಂದು ಹೇಳಿದ್ದು, ಆಹಾರದಲ್ಲಿ ಹಿತ - ಮಿತ ಎಂಬುದು ವ್ಯಕ್ತಿಗತವಾಗಿದ್ದು, ವೃತ್ತಿ ಪ್ರವೃತ್ತಿ, ಹಿನ್ನೆಲೆ ಇತ್ಯಾದಿಗಳನ್ನು ಆಧರಿಸಿ ವ್ಯಕ್ತಿಯ ಹಿತ ಮಿತಗಳು ನಿರ್ಧಾರವಾಗುತ್ತದೆ. ಯಜ್ಞಕ್ಕೆ ಯೋಗ್ಯವಾದ ಆಹಾರಕ್ಕೆ ಮೇಧ್ಯಾ ಎಂಬ ಹೆಸರಿದ್ದು, ಅಂತಹ ಉತ್ಕೃಷ್ಟ ಆಹಾರವನ್ನು ಸ್ವೀಕರಿಸುವುದರಿಂದ ನಮ್ಮೊಳಗಿನ ಅಗ್ನಿಯನ್ನು ಜಾಗೃತ ಗೊಳಿಸಬಹುದು. ದೇಹವೆಂಬ ಪೆಟ್ಟಿಗೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳಿಗೂ ಅಗ್ನಿಜಾಗರಣ ಉತ್ತರವಾಗಿದೆ ಎಂದು ತಿಳಿಸಿದರು.

Annabrahma Chaturmasya pravachana malike

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಕರ್ಣಾಟಕ ಬ್ಯಾಂಕಿನ COO ಬಿ.ಎಸ್ ರಾಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶ್ರೀಗಳಿಂದ ಆಶೀರ್ವಾದ ಪಡೆದರು. ರಾಮಮೂರ್ತಿ ಕೆ.ಬಿ. ದಂಪತಿಗಳು ಶ್ರೀಗುರುಭಿಕ್ಷಾ ಸೇವೆ ಸಮರ್ಪಿಸಿದರು. ಸುರೇಶ ಕಲ್ಲಬ್ಬೆ, ಉದಯ ಭಟ್, ಕಿರಣ ಹೆಗಡೆ, ದಿನ ಪ್ರಧಾನರಾದ ಗುಂಡಿ ಮಂಜಪ್ಪ ದಂಪತಿಗಳು ಉಪಸ್ಥಿತರಿದ್ದರು.

Gokarna

ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ

ಪರಂಪರಾಗತವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ಹಾಲಕ್ಕಿ ಸಮಾಜದವರು ಸಮರ್ಪಿಸಿದ ಸ್ವರ್ಣಪಾದುಕಾ ಪೂಜೆಯನ್ನು ಸ್ವೀಕರಿಸಿ ಮಾತನಾಡಿದ ಶ್ರೀಗಳು, ಹಾಲಕ್ಕಿ ಸಮಾಜದವರು ಶ್ರೀಮಠದ ಕೆಕ್ಕಾರು ಶಾಖಾ ಮಠಕ್ಕೆ ಪರಂಪರೆಯಿಂದ ತಮ್ಮ ಶ್ರದ್ಧಾಭಕ್ತಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅದರಲ್ಲಿ ತಮ್ಮ ಹಿತವನ್ನು ಕಂಡಿದ್ದಾರೆ. ಹಾಲಕ್ಕಿ ಸಮಾಜದ ಜತೆ ಶ್ರೀಮಠ ಸದಾ ಜತೆಗಿರಲಿದ್ದು, ಸರ್ಕಾರವೂ ಕೂಡ ಈ ಸಮಾಜಕ್ಕೆ ಸಲ್ಲಬೇಕಾದ ಸೌಕರ್ಯಗಳನ್ನು ಒದಗಿಸಬೇಕು. ಅನ್ನಬ್ರಹ್ಮ ಚಾತುರ್ಮಾಸ್ಯದಲ್ಲಿ ಹಾಲಕ್ಕಿ ಸಮಾಜಕ್ಕೆ ಅಕ್ಕಿಯನ್ನು ಆಶೀರ್ವಾದ ಪೂರ್ವಕವಾಗಿ ಕೊಡಲಾಗಿದೆ. ಆ ಸಮಾಜಕ್ಕೆ ಒಳಿತಾಗಲಿ ಎಂದು ಆಶೀರ್ವಾದಿಸಿದರು.

Annabrahma Chaturmasya

ಹಾಲಕ್ಕಿ ಸಮಾಜದ ಪರವಾಗಿ ಮಾತನಾಡಿದ ಡಾ. ಹನುಮಂತ ಗೌಡರು, ನಾವು ತಲೆತಲಾಂತರದಿಂದ ಶ್ರೀಮಠಕ್ಕೆ ನಡೆದುಕೊಳ್ಳುತ್ತಾ ಬಂದಿದ್ದು, ಶ್ರೀಗುರು ಪರಂಪರೆಯ ಆಶೀರ್ವಾದದಿಂದ ನಮ್ಮ ಸಮಾಜ ಉತ್ತಮ ಮಾರ್ಗದಲ್ಲಿ ಸಾಗುತ್ತಿದೆ. ನಾವು ಇದರಲ್ಲಿ ನೆಮ್ಮದಿ ಕಂಡಿದ್ದೇವೆ ಎಂದರು.

Annabrahma Chaturmasya: ಭೋಜನವೆಂಬುದು ಯಜ್ಞ, ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ: ರಾಘವೇಶ್ವರ ಭಾರತೀ ಶ್ರೀ

ಹಾಲಕ್ಕಿ ಜಾನಪದ ಹಾಡಿನ ಮೂಲಕ ಶ್ರೀಗುರು ಪೀಠದ ಕುರಿತಾಗಿ ತಮಗಿರುವ ಭಕ್ತಿಯನ್ನು ಸಮರ್ಪಿಸಿದರು. ಬಿ.ಎಸ್. ಗೌಡರ್, ಎಸ್.ಜಿ. ಗೌಡರ್, ಮಂಜುನಾಥ ಗೌಡರ್ ಕೆಕ್ಕಾರು ಸೇರಿದಂತೆ ನೂರಾರು ಹಾಲಕ್ಕಿ ಗುರು ಬಂಧುಗಳು ಉಪಸ್ಥಿತರಿದ್ದರು.