Anti-Drug Day: "ಮಾದಕ ವಸ್ತುಗಳಿಂದ ದೂರವಿರಿ ನಿಮ್ಮ ಜೀವನ ಕಾಪಾಡಿಕೊಳ್ಳಿ" ; ಶಿರಸಿಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಇಂದಿನ ಯುವ ಜನತೆ ಯಾವುದೇ ದುಶ್ಚಟಕ್ಕೆ ಒಳಗಾಗದೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ಅವರು ಗುರುವಾರ ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ, ಮಾತನಾಡಿದರು.


ಶಿರಸಿ: ಇಂದಿನ ಯುವ ಜನತೆ ಯಾವುದೇ ದುಶ್ಚಟಕ್ಕೆ ಒಳಗಾಗದೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ಅವರು ಗುರುವಾರ ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ (Sirsi News) ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ (Anti-Drug Day) ದಿನಾಚರಣೆಯನ್ನು ಉದ್ಘಾಟಿಸಿ, ಮಾತನಾಡಿದರು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜಕ್ಕೆ ಹಾಗೂ ಕುಟುಂಬಕ್ಕೆ ಉಡುಗೊರೆ ನೀಡಬೇಕು. ದುಶ್ಚಟವನ್ನು ರೂಢಿಸಿಕೊಂಡರೆ ಆ ಜಾಲದಿಂದ ಹೊರ ಬರುವುದು ಕಷ್ಟ ಮಾದಕ ವಸ್ತುಗಳ ಮಾರಾಟ ಅಥವಾ ಸಾಗಾಟ ಕಂಡುಬಂದರೆ ಆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಾದಕ ದ್ರವ್ಯಗಳಿಂದ ಎದುರಾಗುವ ಅಪಾಯದ ಕುರಿತು ರೋಟರಿ ಕಾರ್ಯದರ್ಶಿ ಡಾ.ದಿನೇಶ್ ಹೆಗಡೆ ಮಾತನಾಡಿ, ಮಹಾ ನಗರದಲ್ಲಿ ಮಾತ್ರವಲ್ಲ, ಈಗ ಸಣ್ಣ ಸಣ್ಣ ನಗರಗಳಲ್ಲೂ ಮಾದಕ ದ್ರವ್ಯಗಳ ಹಾವಳಿ ಜಾಸ್ತಿಯಾಗುತ್ತಿದೆ. ಮಾದಕ ವಸ್ತುಗಳ ಜಾಲಕ್ಕೆ ಶಾಲಾ ಮಕ್ಕಳೂ ಬಲಿಯಾಗುತ್ತಿರುವುದು ವಿಪರ್ಯಾಸ. ಇಂತಹ ಚಟಗಳಿಂದ ದೂರ ಉಳಿದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಡಿಎಸ್ಪಿ ಗೀತಾ ಪಾಟೀಲ ಮಾತನಾಡಿದರು.
ಶಿರಸಿ ನಗರ ಠಾಣೆ ಪಿ.ಎಸ್.ಐ ನಾಗಪ್ಪ.ಬಿ ಪ್ರಾಸ್ತಾವಿಕ ಮಾತನಾಡಿ, ಯುವ ಜನತೆ ಈ ದೇಶದ ಸಂಪತ್ತು. ಭವ್ಯ ಭಾರತದ ನಿರ್ಮಾತೃರು ಎಂದು ಅವರನ್ನು ಕರೆಯುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಅಡ್ಡದಾರಿ ಹಿಡಿದು ಮಾದಕ ವ್ಯಸನಕ್ಕೆ ಬಲಿಯಾಗುತ್ತಾರೆ. ಭಾರತದ ಜನಸಂಖ್ಯೆಯಲ್ಲಿ ಸುಮಾರು 7.5 ಕೋಟಿ ಜನರು ವ್ಯಸನಕ್ಕೆ ತುತ್ತಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ ಜನರಲ್ಲಿ 5-6 ಯುವಕರು ಈ ಚಟಕ್ಕೆ ಒಳಗಾಗಿದ್ದಾರೆ ಎಂಬ ಆತಂಕಕಾರಿ ವರದಿ ಹೊರಬಿದ್ದಿದೆ. ಯುವ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಮಾದಕ ವ್ಯಸನಕ್ಕೆ ಬಲಿಯಾಗದಂತೆ ನೋಡಿಕೊಳ್ಳುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮಾದಕ ದ್ರವ್ಯ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಳೆದ ಒಂದು ವಾರಗಳಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ: ಸಂಪುಟ ನಿರ್ಣಯ: ಉತ್ತರ ಕನ್ನಡದ ಅಪ್ಸರಕೊಂಡ-ಮುಗಳಿ ಕಡಲ ವನ್ಯಜೀವಿ ಧಾಮ ಘೋಷಣೆ
ಕಾರ್ಯಕ್ರಮದಲ್ಲಿ ಸ್ಕೊಡ್ವೆಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ ನಾಯ್ಕ, ಸಿಪಿಐ ಶಶಿಕಾಂತ ವರ್ಮಾ, ಗ್ರಾಮೀಣ ಠಾಣೆಯ ಪಿ.ಐ ಮಂಜುನಾಥ ಗೌಡ, ಸಾಮಾಜಿಕ ಕಾರ್ಯಕರ್ತ ವಿ.ಪಿ.ಹೆಗಡೆ ವೈಶಾಲಿ, ಶಿರಸಿ ಅರ್ಬನ ಬ್ಯಾಂಕ್ ನಿರ್ದೇಶಕ ನಿತೀನ ಕಾಸರಕೋಡ ಉಪಸ್ಥಿತರಿದ್ದರು.