ಜಾನಪದ ಉಳಿಸಿ ಬೆಳೆಸಬೇಕಾಗಿದೆ: ಮುರುಗೇಂದ್ರ ಶ್ರೀಗಳು

ತಾಲೂಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಪಂಡಿತ ಅವಜಿಯವರು ಮಾತನಾಡಿ ಆಧುನಿಕತೆಯ ಹೆಸರಿನಲ್ಲಿ ನಾವು ನಮ್ಮತನ ಮರೆಯುತ್ತಿರುವ ಕಾಲದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಎಲೆ ಮರೆ ಕಾಯಿಯಂತಿರುವ ಜನಪದ ಕಲಾವಿದರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಶ್ಲಾಘನೀಯ ಎಂದರು

ಇಂಡಿ ತಾಲೂಕಿನ  ಪಿ.ಎಮ್.ಶ್ರೀ ಸರಕಾರಿ ಪ್ರೌಢಶಾಲೆ  ಗೊರನಾಳದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಮುರಗೇಂದ್ರ ಶಿವಾಚಾರ್ಯರರು ಉದ್ಘಾಟಿಸಿ ಮಾತನಾಡಿದರು.
Profile Ashok Nayak Feb 7, 2025 3:22 PM

ಇಂಡಿ: ಮುಂದಿನ ಪೀಳಿಗೆಗೆ ಮಾದರಿಯಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶಿರಶ್ಯಾಡದ ಅಭಿವನ ಮುರಗೇಂದ್ರ ಶಿವಾಚಾರ್ಯರರು ಹೇಳಿದರು. ಕನ್ನಡ ಜಾನಪದ ಪರಿಷತ್ತು ಬೆಂಗಳೂರು, ಜಾನಪದ ಪರಿಷತ್ತು ವಿಜಯಪುರ ಮತ್ತು ಇಂಡಿ ತಾಲೂಕು ಜಾನಪದ ಪರಿಷತ್ತು ಮತ್ತು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ ಗೊರನಾಳ ಇವರ ಸಂಯುಕ್ತ ಆಶ್ರಯದಲ್ಲಿ ಗೊರನಾಳದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಡಾ.ಎಸ್ ಬಾಲಾಜಿ ಮಾತನಾಡಿ ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ. ಬದಲಾಗಿ ಅದು ತಲೆ ಮಾರಿನಿಂದ ತಲೆಮಾರಿಗೆ ಬದಲಾಗುತ್ತಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದರು.

ತಾಲೂಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಪಂಡಿತ ಅವಜಿಯವರು ಮಾತನಾಡಿ ಆಧುನಿಕತೆಯ ಹೆಸರಿನಲ್ಲಿ ನಾವು ನಮ್ಮತನ ಮರೆಯುತ್ತಿರುವ ಕಾಲದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಎಲೆ ಮರೆ ಕಾಯಿಯಂತಿರುವ ಜನಪದ ಕಲಾವಿದರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಶ್ಲಾಘನೀಯ ಎಂದರು.

ಇದನ್ನೂ ಓದಿ: Vijayapura shootout case: ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ಮಾಯವ್ವ ಹಂಜಗಿ, ಜಟ್ಟೆಪ್ಪ ಮಾದರ, ತುಕಾರಾಮ ಸೂರ್ಯವಂಶಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಯಾಗಿ ಜಟ್ಟೆಪ್ಪ ಮಾದರ, ಖಜಾಂಚಿಯಾಗಿ ಮಲ್ಲಿಕಾರ್ಜುನ ಸುಪನೂರ,ಜಂಟಿ ಕಾರ್ಯದರ್ಶಿಯಾಗಿ ಸುಭಾಸಚಂದ್ರ ನಾವಿ, ಪತ್ರಿಕಾ ಪ್ರತಿನಿಧಿ ಖಾಜು ಸಿಂಗೆಗೋಳ, ಸರದಾರ ಮುಲ್ಲಾ ಸಾಗರ ಮಾನೆ, ಗೀತಾ ಹತ್ತಳ್ಳಿ, ಪಾರ್ವತಿ ಸೊನ್ನದ, ತುಳಜಾರಾಮ ನಾಟಿಕಾರ, ಸುಭಾಸ ಕಾಮಾ, ಸುರೇಶ ಚವ್ಹಾಣ, ಸಿ.ಎಸ್.ಮೇತ್ರಿ ಸದಸ್ಯರಾಗಿ ಪದಗ್ರಹಣ ಮಾಡಿದರು. ಬೆಂಗಳೂರಿನ ಮಹೇಂದ್ರ ಜಾಧವ, ವಿಜಯ ವೇದಿಕೆ ಮೇಲಿದ್ದರು.

ವಿಜಯಪುರ ಜಿಲ್ಲಾ ಮಹಿಳಾ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ದ್ರಾಕ್ಷಾಯಣಿ ಆಯ್ಕೆ ಯಾದರು. ಆನಂದ ಕೆಂಬಾವಿ, ಶ್ರೀನಿವಾಸ ಜಮಾದಾರ, ವೀರಣ್ಣ ನಾಯ್ಕೋಡಿ, ಎಂ.ಪಿ.ಚಿಮ್ಮಾಗೋಳ, ಎಂ. ಎಂ.ವಾಲಿಕಾರ, ವೈ.ಟಿ.ಪಾಟೀಲ ಗೊಂದಳಿ ಕಲಾವಿಧರು,ಚೌಡಕಿ ಪದ ಭಜನಾ ತಂಡದವರು ಭಾಗವಹಿಸಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?