ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Physical abuse: ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

Physical abuse: ಬೆಂಗಳೂರು ನಗರದ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ‌ ಘಟನೆ ನಡೆದಿದೆ. ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿ, ಆಕೆಯನ್ನು ಹೋಟೆಲ್‌ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

Profile Prabhakara R Feb 21, 2025 3:50 PM

ಬೆಂಗಳೂರು: ಇತ್ತೀಚೆಗೆ ಕೆ.ಆರ್‌ ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಅಂತಹುದೇ ಮತ್ತೊಂದು ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ. ತಡರಾತ್ರಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ ನಡೆದಿದೆ. ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು. ಪರಿಚಯಸ್ಥ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಊಟಕ್ಕೆಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋದ ಕಾಮುಕರು, ಬಳಿಕ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಿಳೆಯ ಮೊಬೈಲ್ ಹಾಗೂ ಪರ್ಸ್‌ ಕಿತ್ತುಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪರಿಚಯಸ್ಥ ಮಹಿಳೆಯನ್ನು ಒಬ್ಬ ಹೋಟೆಲ್‌ ಟೆರೇಸ್ ಮೇಲೆ ಕರೆದಿಕೊಂಡು ಹೋಗಿದ್ದಾನೆ. ಈ ವೇಳೆ ಉಳಿದವರು ಅಲ್ಲೇ ಕಾದು ಕುಳಿತು ಆತನೊಂದಿಗೆ ಸೇರಿಕೊಂಡು ಸಾಮೂಹಿಕ ಆತ್ಯಾಚಾರ ಎಸಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗ್ಗೆ 5 ಗಂಟೆಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ, ಮಹಿಳೆಯ ದೂರನ್ನು ಆಧರಿಸಿ ಕೋರಮಂಗಲ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | ರೀಲ್ಸ್‌ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು

ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿ, ಕಣ್ಣು ಗುಡ್ಡೆ ಕಿತ್ತು ಚಿತ್ರಹಿಂಸೆ!

ಚಿಕ್ಕಬಳ್ಳಾಪುರ: ಮಹಿಳೆಯನ್ನು ಕೋಣೆಯಲ್ಲಿ ಕೂಡಿಹಾಕಿ ರಾತ್ರಿಯಿಡೀ ಚಿತ್ರಹಿಂಸೆ ನೀಡಿ, ಕಣ್ಣುಗುಡ್ಡೆ ಕಿತ್ತು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿಯಲ್ಲಿ ನಡೆದಿದೆ. ಹೌದು, ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ತೋಟದ ಮನೆಯಲ್ಲಿ ಕೂಡಿಹಾಕಿ ಬ್ಯಾಟ್, ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮುಖದಲ್ಲಿ ರಕ್ತ ಸುರಿಯುವಂತೆ ದುಷ್ಕರ್ಮಿಗಳು ಮನಬಂದಂತೆ ಥಳಿಸಿದ್ದಾರೆ. ವ್ಯಕ್ತಿಯೊಬ್ಬ ಮೊದಲ ಹೆಂಡತಿ ಇದ್ದರೂ, ಮತ್ತೊಂದು ಮದುವೆ ಮಾಡಿಕೊಂಡಿದ್ದ. ಹೀಗಾಗಿ ಮೊದಲ ಹೆಂಡತಿ ಕಡೆಯವರು ಎರಡನೇ ಹೆಂಡತಿಯನ್ನು ಕಿಡ್ನ್ಯಾಪ್‌ ಮಾಡಿಸಿ ಹಲ್ಲೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜಗನಹಳ್ಳಿ ಗ್ರಾಮದ ಗಂಗರಾಜು ಎಂಬುವವರ ಎರಡನೇ ಪತ್ನಿ ಸಂಗೀತ ಮೇಲೆ ಭೀಕರ ಹಲ್ಲೆ ನಡೆಸಲಾಗಿದೆ. ಮೊದಲ ಪತ್ನಿಯ ಕಡೆಯವರೇ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಸಂಗೀತ ಸಹೋದರಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ತಿಂಗಳ ಹಿಂದೆ ಗಂಗರಾಜು, ಸಂಗೀತ ಅವರನ್ನು ಎರಡನೇ ಮದುವೆ ಆಗಿದ್ದರು. ಹೀಗಾಗಿ ಗಂಗರಾಜು ಸಂಬಂಧಿ ರಾಜಮ್ಮ ಕಡೆಯವರಿಂದ ಸಂಗೀತ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ಸಂಗೀತ ತಂದೆ ಹಾಗೂ ಸಹೋದರಿಯರ ಜತೆಯೂ ಗಲಾಟೆ ಮಾಡಿದ್ದು, ಈ ವೇಳೆ ಸಂಗೀತ ಸಹೊದರಿ ಹಂಸ ಮೇಲೆ ಹಲ್ಲೆ ಮಾಡಲಾಗಿದೆ.

ಸುದ್ದಿ ತಿಳಿದು ಗಂಗರಾಜು ಮತ್ತು ಸಂಗೀತಾ ಗ್ರಾಮಕ್ಕೆ ಬಂದಿದ್ದಾರೆ. ಗ್ರಾಮಕ್ಕೆ ಬಂದಿದ್ದ ಸಂಗೀತ ಮೇಲೆ ದಾಳಿ ನಡೆದಿದೆ. ಹೆಂಡತಿ ಇದ್ದರೂ ಎರಡನೇ ಮದುವೆಯಾಗಿದ್ದ ಗಂಗರಾಜು 9 ವರ್ಷಗಳಿಂದ ಸಂಗೀತ ಜತೆ ಇದ್ದರು. ಹೀಗಾಗಿ ಮೊದಲ ಪತ್ನಿಯ ಕಡೆಯವರು ಸಂಗೀತಾಳನ್ನು ಕಿಡ್ನ್ಯಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.