Yadagiri News: ಕನಸಿನಲ್ಲಿ ಬಂದ ಹನುಮ, ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ
Yadagiri News: ತಮ್ಮ ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದಾನೆ. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

ಹಿಂದೂ ಧರ್ಮಕ್ಕೆ ಮರಳಿದ ವೆಂಕಟೇಶ್

ಯಾದಗಿರಿ: ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ (Hindu) ಧರ್ಮಕ್ಕೆ ಮರಳಿರುವ ಘಟನೆ ಯಾದಗಿರಿಯಲ್ಲಿ (Yadagari news) ನಡೆದಿದೆ. ಈ ಘರ್ ವಾಪಸಿಗೆ ಪ್ರೇರಣೆ ಕನಸಿನಲ್ಲಿ ಆಂಜನೇಯ (Anjaneya) ದೇವರು ಬಂದು ನೀಡಿರುವ ನಿರ್ದೇಶನ ಎಂದು ಕುಟುಂಬ ಹೇಳಿಕೊಂಡಿದೆ. ಯಾದಗಿರಿಯ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ್ ಎಂಬವರು ತಮ್ಮ ಕುಟುಂಬದ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದರು. ಇದೀಗ ಹಿಂದೂ ಧರ್ಮಕ್ಕೆ ಮರಳಿದ್ದಾರೆ.
ತಮ್ಮ ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದಾನೆ. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ. ಕೈಗೊಂಡ ಕೆಲಸ ಯಾವುದೂ ಕೈಹಿಡಿಯುತ್ತಿರಲಿಲ್ಲವಂತೆ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದರಂತೆ. ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದರಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರಿಶ್ಚಿಯನ್ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.
ಇದನ್ನೂ ಓದಿ: Chakravarthy Sulibele: ಮತಾಂತರ ಮಾಡಲು ಹಿಂದೂಗಳಿಗೆ ಕರೆ ನೀಡಿದ ಚಕ್ರವರ್ತಿ ಸೂಲಿಬೆಲೆ!