ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ
Sakrebyle Elephant Camp: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ತಮಿಳುನಾಡಿನ ಮಹಿಳೆ ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.