ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊಡಗು

ದೆಹಲಿಯಿಂದ ಬೆಂಗಳೂರಿಗೆ ಎಕ್ಸ್‌ʼಪ್ರೆಸ್‌ ರೈಲಿಗಿಂತಲೂ ವೇಗವಾಗಿ ತಲುಪಿದ ಕಾರು !

ದೆಹಲಿಯಿಂದ ಬೆಂಗಳೂರಿಗೆ ಎಕ್ಸ್‌ʼಪ್ರೆಸ್‌ ರೈಲಿಗಿಂತಲೂ ತಲುಪಿದ ಕಾರು !

ಈ ಇಬ್ಬರೂ ಪ್ರಯಾಣಿಸಿದ್ದು ದೆಹಲಿಯಿಂದ ಬೆಂಗಳೂರಿಗೆ. ಒಟ್ಟು 2,075 ಕಿಲೋ ಮೀಟರ್‌ಅಂತರದ ಪ್ರಯಾಣ ಅದು. ಈ ದೂರವನ್ನು ಈ ಈರ್ವರೂ ಚಾಲಕರು ಕೇವಲ 29 ಗಂಟೆಗಳಲ್ಲಿ ಕ್ರಮಿಸಿದ್ದು ನಿಬ್ಬೆರಗಾಗುವ ದಾಖಲೆಯೇ ಹೌದು. ಒಂದು ದೇಶದಲ್ಲಿ ಕಾರಿನಲ್ಲಿ ಅತೀ ದೀರ್ಘದ ನಿರಂತರ ಪ್ರಯಾಣ ಕ್ಕಾಗಿ ಕೇಶವಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಬೈಪಾಡಿ ತ್ತಾಯ ಅವರಿಗೆ ಜಂಟಿಯಾಗಿ ವಿಶ್ವದಾಖಲೆಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರಧಾನ ಮಾಡಲಾಯಿತು.

ಕನ್ನಡ ಸಾಹಿತ್ಯ ಲೋಕಕ್ಕೆ ಹೆಮ್ಮೆ:‌ ಪ್ರತಿಷ್ಠಿತ ಪೋಬ್ಸ್ ಪ್ರಭಾವಿ ಸೆಲೆಬ್ರಿಟಿ ಪಟ್ಟಿಯಲ್ಲಿ ಭಾನು ಮುಷ್ತಾಕ್, ದೀಪಾಭಾಸ್ತಿ, ರಿಷಬ್ ಶೆಟ್ಟಿಗೆ ಸ್ಥಾನ

ಕನ್ನಡ ಸಾಹಿತ್ಯ ಲೋಕಕ್ಕೆ ಹೆಮ್ಮೆ

2025ರ ಜನವರಿಯಿಂದ 2026ರ ಮಾ.31 ರವರೆಗೆ ಭಾರತೀಯರ ಮೇಲೆ ಗಣನೀಯ ಪ್ರಭಾವ ಬೀರಿದ 100 ಮಂದಿಯಲ್ಲಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಕರ್ನಾಟಕದಿಂದ ಮೂವರನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಬಾನು ಮುಷ್ತಾಕ್ ಅವರ ಎದೆಯ ಹಣತೆಯನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಿ ವಿಶ್ವದ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಬೂಕರ್‌ರನ್ನು 2025ನೇ ಸಾಲಿಗೆ ಪಡೆದುಕೊಂಡಿದ್ದ ದೀಪಾಭಾಸ್ತಿ ಈ ಮೂಲಕ ಮತ್ತೊಂದು ಸಾಧನೆಗೆ ಕಾರಣರಾಗಿದ್ದಾರೆ.

Madikeri Accident: ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿಯ ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ರಸ್ತೆ ಬದಿ ಟಿಟಿ ನಿಂತಿದ್ದಾಗ ಲಾರಿ ಉರುಳಿ ಘಟನೆ ಸಂಭವಿಸಿದೆ.

Cauvery Theerthodbhava: ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಕಾವೇರಿ ತೀರ್ಥೋದ್ಭವವು ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ.

Viral Video: ಸಾರ್ವಜನಿಕರ ಮುಂದೆಯೇ ನದಿಗೆ ಕಸ ಎಸೆದ ದಂಪತಿ; ನಾಚಿಕೆಯಿಂದ ತಲೆ ತಗ್ಗಿಸಿದ ನಾಗರಿಕ ಸಮಾಜ

ನದಿಯನ್ನೇ ಡಸ್ಟ್ ಬಿನ್ ಮಾಡಿದ ದಂಪತಿ: ದಂಡ ವಿಧಿಸಲು ನೆಟ್ಟಿಗರ ಆಗ್ರಹ

Viral Video: ಕಾರಿನಲ್ಲಿ ಬಂದ ದಂಪತಿ ತ್ಯಾಜ್ಯವನ್ನು ನದಿಗೆ ಎಸೆದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯವು ಮತ್ತೊಮ್ಮೆ ನಾಗರಿಕ ಪ್ರಜ್ಞೆ ಮತ್ತು ಸಾರ್ವಜನಿಕ ಜವಾಬ್ದಾರಿಯ ಬಗ್ಗೆ ಚರ್ಚೆ ಹುಟ್ಟು ಹಾಕಿದೆ. ಪರಿಸರ ಕಾಳಜಿಯ ಹೊಣೆ ತಮ್ಮದಲ್ಲ ಎಂಬಂತೆ ದಂಪತಿ ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿದ್ದ ತ್ಯಾಜ್ಯವನ್ನು ನದಿಗೆ ಎಸೆದಿದ್ದಾರೆ.

Elephant Attack: ಕೊಡಗಿನ ಹೋಂ ಸ್ಟೇಗೆ ತೆರಳಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ಕೊಡಗಿನ ಹೋಂ ಸ್ಟೇಗೆ ತೆರಳಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

Kodagu News: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಘಟನೆ ನಡೆದಿದೆ. ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ದುರ್ಘಟನೆ ಸಂಭವಿಸಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಡಿಸೆಂನರ್‌ʼನೊಳಗೆ ತಾಪಂ, ಜಿಪಂ ಚುನಾವಣೆ: ಡಿಕೆಶಿ

ಡಿಸೆಂನರ್‌ʼನೊಳಗೆ ತಾಪಂ, ಜಿಪಂ ಚುನಾವಣೆ: ಡಿಕೆಶಿ

ನೀವೆಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮ್ಮ ಶ್ರಮಕ್ಕೆ ತಕ್ಕಂತೆ ನಿಮಗೆ ಅಧಿಕಾರ ನೀಡಬೇಕು ಎನ್ನುವುದು ನಮ್ಮ ಆಸೆ. ಅಧಿಕಾರ ಹಂಚಿಕೆ ಯಾದಾಗ ಮಾತ್ರ ಎಲ್ಲ ಸರಕಾರಿ ಕೆಲಸ ಕಾರ್ಯಗಳಿಗೆ ವೇಗ ಸಿಗಲು ಸಾಧ್ಯ ಎಂದು ಕಾರ್ಯಕರ್ತ ರಲ್ಲಿ ಹುರುಪು ತುಂಬಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ‘ಭಾರತ್ ಜೋಡೋ ಯುವ ಘಟಕ’ಗಳನ್ನು ನಿರ್ಮಾಣ ಮಾಡಲಾಗು ವುದು. ಆ ಮೂಲಕ ಯುವಕರನ್ನು ಸಂಘಟಿಸಿ ಪಕ್ಷದ ಸಿದ್ಧಾಂತಗಳನ್ನು ತಲುಪಿಸಲಾಗುವುದು ಎಂದರು

ʼʼಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕುʼʼ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ಹೇಳಿಕೆ

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

D.K. Shivakumar: ಕೊಡಗಿನ ಭಾಗಮಂಡಲ ಭಗಂಡೇಶ್ವರ ದೇಗುಲದಲ್ಲಿ ಭಾನುವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ʼʼಯಾವುದೇ ಸಂಘಟನೆಯಾಗಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದುʼʼ ಎಂದರು.

ಪೊನ್ನಣ್ಣನಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ

ಪೊನ್ನಣ್ಣನಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ

ಕೊಡಗು ಜಿಲ್ಲೆಗೆ ಈ ಅವಧಿಯಲ್ಲಾದರೂ ಸಚಿವ ಸ್ಥಾನ ದೊರಕೀತು ಎಂಬ ನಿರೀಕ್ಷೆಯಲ್ಲಿದ್ದ ಕೊಡಗಿನ ಜನತೆಗೆ ನಿರಾಸೆ ಉಂಟು ಮಾಡಿದ್ದ ಹೈಕಮಾಂಡ್ ಇದೀಗ ಸಿ.ಎಂ. ರಾಜಕೀಯ ಕಾರ್ಯದರ್ಶಿ ಸ್ಥಾನದ ಮೂಲಕ ಕೊಡಗಿನ ಜನತೆಯ ಅಸಮಧಾನವನ್ನು ನಿವಾರಿಸುವಲ್ಲಿ ಕೊಂಚ ಮಟ್ಟಿಗಿನ ಪ್ರಯತ್ನ ಮಾಡಿದಂತಿದೆ.

ತಲಕಾವೇರಿಯಲ್ಲಿ ಸಿಎಂ 16ರಂದು ವಿಶೇಷ ಪೂಜೆ

ತಲಕಾವೇರಿಯಲ್ಲಿ ಸಿಎಂ 16ರಂದು ವಿಶೇಷ ಪೂಜೆ

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆ.16ರಂದು ಬೆಳಗ್ಗೆ 11 ಗಂಟೆಗೆ ಭಾಗ ಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂ ಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ಕೊಡಗಿನಲ್ಲಿ ದಾರುಣ ಘಟನೆ; ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಗದ್ದೆಯಲ್ಲಿ ಶುಂಠಿ ತೆಗೆದುಕೊಂಡು ಬರಲು ಮಹಿಳೆಯು ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದ ಪರಿಣಾಮ ಅದರೊಳಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಮುಂದಾದ ವ್ಯಕ್ತಿಯೂ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಶಾಲನಗರದಲ್ಲಿ ಘೋರ ಘಟನೆ; ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

Kushalnagar News: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

ʼʼಅಮ್ಮಾ ಏಳಮ್ಮʼʼ: ಮೃತ ತಾಯಿ ಆನೆಯನ್ನು ಎಬ್ಬಿಸಲು ಮರಿಯಾನೆಯ ಪ್ರಯತ್ನ; ಕೊಡಗಿನಲ್ಲೊಂದು ಹೃದಯ ವಿದ್ರಾವಕ ಘಟನೆ

ಮೃತ ತಾಯಿ ಆನೆಯನ್ನು ಎಬ್ಬಿಸಲು ಮರಿಯಾನೆಯ ಪ್ರಯತ್ನ; ವಿಡಿಯೊ ವೈರಲ್‌

Viral Video: ಕೊಡಗು ಜಿಲ್ಲೆಯ ಅಮ್ಮತಿ ಸಮೀಪದ ಆನಂದಪುರದ ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ತಾಯಿ ಆನೆಯೊಂದು ಮೃತಪಟ್ಟಿದ್ದು, ಮರಿಯಾನೆ ಅದನ್ನು ಎಬ್ಬಿಸಲು ಯತ್ನಿಸುತ್ತಿರುವ ವಿಡಿಯೊ ವೈರಲ್‌ ಆಗಿದೆ. ಆನೆ ಮರಿಯ ಗೋಳಾಟವು ಇದೀಗ ಪ್ರಾಣಿಪ್ರಿಯರ ಹೃದಯ ತಟ್ಟಿದೆ.

Interview with MLA Dr. Manthar Gowda: ಕೊಡಗು ಜಿಲ್ಲೆಯ ಅಭಿವೃದ್ದಿಯೇ ನನ್ನ ರಾಜಕೀಯದ ಗುರಿ !

ಕೊಡಗು ಜಿಲ್ಲೆಯ ಅಭಿವೃದ್ದಿಯೇ ನನ್ನ ರಾಜಕೀಯದ ಗುರಿ !

ಕಳೆದ ಮೂರು ವರ್ಷಗಳಿಂದ ಕೊಡಗು ಕ್ಷೇತ್ರದ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು, ತಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧರಾಗಿದ್ದಾರೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ, ಕ್ರೀಡೆಗಳ ಅಭಿವೃದ್ಧಿ ಮತ್ತು ಮಾನವ ಆನೆ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಿದ್ದಾರೆ

Mallalli Falls: ರೀಲ್ಸ್‌ಗಾಗಿ ದುಸ್ಸಾಹಸ; ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ, Video

ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

ಕೊಡಗಿನ ಮಲ್ಲಳ್ಳಿ ಫಾಲ್ಸ್‌ ನೋಡಲು ಸ್ನೇಹಿತರೊಂದಿಗೆ ಬಂದಿದ್ದ ವಿದ್ಯಾರ್ಥಿಗಳು, ಸುರಕ್ಷತಾ ಬೇಲಿಯನ್ನು ಲೆಕ್ಕಿಸದೆ ಹೊಳೆಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ.

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಯಾವುದೇ ಯೋಜನೆ ಹಮ್ಮಿಕೊಳ್ಳಲಾರೆ. ಸ್ಥಳೀಯ ಭೂಮಾಲೀಕರು ತನ್ನನ್ನು ದಾರಿ ತಪ್ಪಿಸಿ ಜಾಗ ಮಾರಾಟ ಮಾಡಿದ್ದರು ಎಂದು ಶ್ರೀ.ಎಂ ನೊಂದು ನುಡಿದಿದ್ದರು. ಈ ನಿಟ್ಟಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.10ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Bomb threat: ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಸಂದೇಶ; ಆತಂಕದ ಸ್ಥಿತಿ ನಿರ್ಮಾಣ

ಹಾವೇರಿ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಆತಂಕಗೊಂಡ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಒಮ್ಮೆಲೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

ಕೊಡಗಿನಲ್ಲಿ ನಿಲ್ಲದ ಕಾಡಾನೆ-ಮಾನವ ಸಂಘರ್ಷ

ಕೊಡಗಿನಲ್ಲಿ ನಿಲ್ಲದ ಕಾಡಾನೆ-ಮಾನವ ಸಂಘರ್ಷ

ಕಾಫಿ ತೋಟಗಳಲ್ಲಿ ದೊರಕುವ ಹಲಸು, ಬಿದಿರು, ಕೆರೆಯಲ್ಲಿನ ನೀರು, ಸೊಪ್ಪು ತಿಂದು ಕುಡಿದು ಕಾಡಿಗಿಂತ ಸುಖವಾದ ಜೀವನವನ್ನು ಆನೆ ಪರಿವಾರ ಕಾಫಿ ತೋಟಗಳಲ್ಲಿ ಕಂಡಿವೆ. ಹೀಗಾಗಿಯೇ ತೋಟ ಬಿಟ್ಟು ಕಾಡಿನತ್ತ ಹೆಜ್ಜೆ ಹಾಕದ ಆನೆಗಳು, ಆಗಿಂದಾಗ್ಗೆ ತಮ್ಮತ್ತ ಬರುವ ಮನುಷ್ಯರ ಮೇಲೆ ಧಾಳಿ ನಡೆಸಿ ಪ್ರಾಣಹರಣಕ್ಕೆ ಕಾರಣವಾಗಿದೆ.

Kodagu Elephant Attack: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ಸಾವು

ಕೊಡಗಿನಲ್ಲಿ ಕಾಡಾನೆ ದಾಳಿಯಿಂದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ಸಾವು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟದಲ್ಲಿ ದುರಂತ ನಡೆದಿದೆ. ಕಾಫಿ ತೋಡ ವೀಕ್ಷಿಸಲು ಸಂಬಂಧಿಕರೊಂದಿಗೆ ತೆರಳಿದ್ದಾಗ, ಐಜಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರ ಮೇಲೆ ಆನೆ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಮೃತಪಟ್ಟಿದ್ದಾರೆ.

ದುಬಾರೆ ಆನೆ ಶಿಬಿರ ದುರಂತ; ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

Sakrebyle Elephant Camp: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ತಮಿಳುನಾಡಿನ ಮಹಿಳೆ ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Elephant Marthanda Dies: ದುಬಾರೆಯಲ್ಲಿ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ʼಮಾರ್ತಾಂಡʼ ಆನೆ ಚಿಕಿತ್ಸೆ ಫಲಿಸದೆ ಸಾವು

ದುಬಾರೆ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ದುಬಾರೆ ಆನೆಗಳ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಕಂಜನ್ ಆನೆಯು ಚೂಪಾದ ದಂತಗಳಿಂದ ಮಾರ್ತಾಂಡನ ಹೊಟ್ಟೆ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ತಿವಿದು ಗಂಭೀರ ಗಾಯಗೊಳಿಸಿತ್ತು. ಇದರಿಂದ ಚಿಕಿತ್ಸೆ ಫಲಿಸದೆ ಮಾರ್ತಾಂಡ ಮೃತಪಟ್ಟಿದೆ.

Dubare Elephant Camp: ಕೊಡಗಿನ ದುಬಾರೆಯಲ್ಲಿ ಘೋರ ಘಟನೆ; ಸಾಕಾನೆಗಳ ಕಾದಾಟದ ವೇಳೆ ಸಿಲುಕಿ ಮಹಿಳೆ ಸಾವು!, Video

ದುಬಾರೆಯಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆ ಸಾವು!

ಕೊಡಗಿನ ದುಬಾರೆಯ ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸಲಾಗುತ್ತಿತ್ತು. ಈ ವೇಳೆ 'ಕಂಜನ್' ಎಂಬ ಆನೆಯು ಮತ್ತೊಂದು ಆನೆಯಾದ 'ಮಾರ್ತಾಂಡ'ನಿಗೆ ಜೋರಾಗಿ ತಿವಿದಿದೆ. ಆನೆಗಳ ನಡುವೆ ಇದ್ದಕ್ಕಿದ್ದಂತೆ ಕಾದಾಟ ಶುರುವಾಗಿದ್ದು, ಈ ವೇಳೆ ಆನೆಯಡಿ ಸಿಲುಕಿ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ.

Kodagu News: ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; ಉದ್ಘಾಟನೆಗೆ ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಮಂದಿ ವಶಕ್ಕೆ

ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; 40 ಮಂದಿ ವಶಕ್ಕೆ

ಕೊಡಗು ಜಿಲ್ಲೆಯ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನರಿಂದ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ತಮಿಳುನಾಡಿನಿಂದ ಜನರನ್ನು ಕರೆಸಲಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Loading...