ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕೊಪ್ಪಳ
Self Harming: ಪತಿ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ!

ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

Self Harming: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ಘಟನೆ ನಡೆದಿದೆ. ಪತಿ ನಿತ್ಯ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆತನ ಹಿಂಸೆಗೆ ಮನನೊಂದು ಪತ್ನಿ, ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vastu Tips: ವಾಸ್ತು ಪ್ರಕಾರ ಮನೆ ಮುಂದೆ ಗುಲಾಬಿ ಗಿಡಗಳನ್ನು ನೆಡಬಹುದಾ...?

ಮನೆಯ ಈ ದಿಕ್ಕಿಗೆ ಗುಲಾಬಿ ಗಿಡ ನೆಡಿ

Vastu Tips: ಮನೆಯಲ್ಲಿ ಗುಲಾಬಿ ಹೂವಿನ ಗಿಡ ನೆಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಮತ್ತು ಪೂಜಿಸಿದರೆ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಸಾಲ ತೀರಿಸಲು ಸಹ ಇದು ಸಹಾಯಕವಾಗುತ್ತದೆ

DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

DK Shivakumar: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು.

Basanagouda Patil Yatnal: ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

Basanagouda Patil Yatnal: ಯತ್ನಾಳ್‌ ಕಾಂಗ್ರೆಸ್‌ ಸೇರ್ತಾರಾ ಅಥವಾ ಹೊಸ ಪಕ್ಷ ಕಟ್ಟುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಕಾಂಗ್ರೆಸ್ ಪಕ್ಷಕ್ಕೆ ಈ ಜನ್ಮದಲ್ಲೂ ಹೋಗಲ್ಲ, ಮುಂದಿನ ಜನ್ಮದಲ್ಲೂ ಹೋಗಲ್ಲ. ಅದು ಮುಸ್ಲಿಮರ ಪಕ್ಷ. ವಿಜಯೇಂದ್ರನ ಟೀಂ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಶ್ನೆಗಳನ್ನು ಕೇಳುವ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್ ಔಟ್ ಎಂದು ಪತ್ರಕರ್ತರ ವಿರುದ್ಧ ಯತ್ನಾಳ್‌ ಕಿಡಿಕಾರಿದ್ದಾರೆ.

SSLC exam: ತಾಯಿ ಅಗಲಿಕೆಯ ನೋವಿನ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ತಾಯಿ ಅಗಲಿಕೆಯ ನೋವಿನ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿ

SSLC exam: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ನೋವಿನ ಮಧ್ಯೆ ವಿದ್ಯಾರ್ಥಿ, 10ನೇ ತರಗತಿ ಪರೀಕ್ಷೆ ಬರೆದು, ನಂತರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.

Road Accident: ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಸಾವನ್ನಪ್ಪಿರುವ ಇಬ್ಬರು ಯುವಕರು ಕೊಪ್ಪಳ ಜಿಲ್ಲೆಯ ಕನಕಗಿರಿ‌ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.

Hampi Horror: ಹಂಪಿ ಗ್ಯಾಂಗ್‌ರೇಪ್ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಹಂಪಿ ಪಾತಕಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇಲೆ ಮೂವರನ್ನೂ ಬಂಧಿಸಿದ್ದರು. ಇವರಲ್ಲಿ ಒಬ್ಬಾತ ತಮಿಳುನಾಡಿಗೆ ಪರಾರಿಯಾಗಿದ್ದ. ಆತನನ್ನು ಹಿಡಿತರಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Hampi Horror: ಹಂಪಿ ಅತ್ಯಾಚಾರ ಕೇಸ್‌​: ಹೋಮ್ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸ್‌ ದಾಳಿ

ಹಂಪಿ ಅತ್ಯಾಚಾರ ಕೇಸ್‌​: ಹೋಮ್ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸ್‌ ದಾಳಿ

ಹೋಮ್‌ ಸ್ಟೇ, ರೆಸಾರ್ಟ್​ಗಳು ಇಲ್ಲಿ ಬಂದು ಉಳಿಯುತ್ತಿರುವ ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ರಾಮ್​ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

Shocking News: ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಸುಟ್ಟರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ನಂಬಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ.

Journalism Awards: ಪತ್ರಿಕೋದ್ಯಮ ದೊಡ್ಡ ಪ್ರಮಾಣದಲ್ಲಿದ್ದರೂ ಸಣ್ಣ ಬದಲಾವಣೆಯೂ ಆಗುತ್ತಿಲ್ಲ: ಕೆ.ವಿ.ಪ್ರಭಾಕರ್

ಇಂದಿನ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆಯೂ ಆಗುತ್ತಿಲ್ಲ: ಕೆ.ವಿ.ಪ್ರಭಾಕರ್

Journalism Awards: ಕೊಪ್ಪಳದಿಂದ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಮಾತನಾಡಿದ್ದಾರೆ. ಮಹನೀಯರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿರುವ ಈ ಹೊತ್ತಿನಲ್ಲಿ ಪತ್ರಿಕೋದ್ಯಮ ವಿಪರೀತ ದೊಡ್ಡದಾಗಿ ಬೆಳೆದಿದೆ. ಆದರೆ ಸಣ್ಣ ಪ್ರಮಾಣದ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

Koppala News: ರಾಜ್ಯವೇ ತಲೆತಗ್ಗಿಸುವ ಘಟನೆ; ಗಂಗಾವತಿಯಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ

ಗಂಗಾವತಿಯಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ

ಗಂಗಾವತಿಯಲ್ಲಿ ಇಡೀ ರಾಜ್ಯವೇ ನಾಚಿಕೆಯಿಂದ ತಲೆತಗ್ಗಿಸುವಂತ ಘಟನೆಯೊಂದು ಮಾ. 6ರ ರಾತ್ರಿ ನಡೆದಿದೆ. ಪ್ರವಾಸ ಬಂದಿದ್ದ ವಿದೇಶಿಗರೂ ಸೇರಿ ಐವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಸದ್ಯ ತಲೆಮರೆಸಿಕೊಂಡಿರುವ ದುಷ್ಕರ್ಮಿಗಳಿಗಾಗಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Koppal News: ಪಿಡಿಒ ಮೇಲೆ ದರ್ಪ ಮೆರೆದ ಗ್ರಾಪಂ ಸದಸ್ಯೆ; ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ

ಪಿಡಿಒ ಮೇಲೆ ಗ್ರಾಪಂ ಸದಸ್ಯೆಯಿಂದ ಹಲ್ಲೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಪಿಡಿಒ ರತ್ನಮ್ಮ ಗುಂಡಣ್ಣವರ್ ಅವರ ಮೇಲೆ ಸದಸ್ಯೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ವಿಡಿಯೊ ನೋಡಿದವರು ಗ್ರಾಪಂ ಸದಸ್ಯೆಯ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Assault Case: ಟಿಕೆಟ್ ಬೆಲೆ ಏರಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!

ಟಿಕೆಟ್ ಬೆಲೆ ಏರಿಕೆಗೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!

ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ.

Self Harming: ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Drowned: ಹಂಪಿಯಲ್ಲಿ ಈಜಲು ನದಿಗೆ ಹಾರಿದ್ದ ವೈದ್ಯೆ ಶವವಾಗಿ ಪತ್ತೆ

ಹಂಪಿಯಲ್ಲಿ ಈಜಲು ನದಿಗೆ ಹಾರಿದ್ದ ವೈದ್ಯೆ ಶವವಾಗಿ ಪತ್ತೆ

ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು.

Koppal News: ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಶ್ರೀಗಳು ಬೆಂಬಲ

ಕೊಪ್ಪಳದಲ್ಲಿ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟ: ಗವಿಶ್ರೀ ಬೆಂಬಲ

Koppal News: ಕೊಪ್ಪಳಕ್ಕೆ ಹೊಂದಿಕೊಂಡಿರುವ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.‌ ಕೊಪ್ಪಳದ ಸುಪ್ರಸಿದ್ಧ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಕಾರ್ಖಾನೆ ವಿರೋಧಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Koppala News: ಈಜಲು ಹೋದ ವೈದ್ಯೆ ನೀರು ಪಾಲು

ಈಜಲು ಹೋದ ಹೈದರಾಬಾದ್‌ ವೈದ್ಯೆ ಕೊಪ್ಪಳದಲ್ಲಿ ನೀರು ಪಾಲು

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೈದ್ಯೆ ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಅನನ್ಯ ರಾವ್ ​(26) ನೀರಿನಲ್ಲಿ ಕೊಚ್ಚಿ ಹೋದ ವೈದ್ಯೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

Shocking News: ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಅಂಗನವಾಡಿ ಬಾಲಕಿ ಸಾವು

ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಅಂಗನವಾಡಿ ಬಾಲಕಿ ಸಾವು

ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು ತಿಳಿದುಬಂದಿದೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

Koppal Accident: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಭೀಕರ ಅಪಘಾತ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.

Shivaraj Tangadagi: 'ಶುಭವಾಗಲಿ' ಬರೆಯಲು ಪರದಾಡಿದ ವಿಡಿಯೊ ಟ್ರೋಲ್‌; ಸಚಿವ ತಂಗಡಗಿ ಹೇಳಿದ್ದೇನು?

'ಶುಭವಾಗಲಿ' ಬರೆಯಲು ಪರದಾಡಿದ ವಿಡಿಯೊ ಟ್ರೋಲ್‌; ಸಚಿವ ತಂಗಡಗಿ ನೀಡಿದ ಸ್ಪಷ್ಟನೆ ಇದು

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ʼಶುಭವಾಗಲಿʼ ಎಂದು ಬರೆಯಲು ಪರದಾಡಿದ ವಿಡಿಯೊ ವೈರಲ್‌ ಆಗಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ. ನನ್ನ ಬಗ್ಗೆ ಟೀಕಿಸಲು ಏನು ಸಿಗ್ತಿಲ್ಲ ಎಂದು ಹತಾಶರಾಗಿ ವಿರೋಧಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.