ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊಪ್ಪಳ

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ: ಹಲಗೇರಿಯ ಶ್ರೀ ರಾಜರಾಜೇಶ್ವರಿ ಶಿಕ್ಷಣ ಸಂಸ್ಥೆ

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ

ಇಲ್ಲಿ ತರಬೇತಿ ಪಡೆದ ಮಕ್ಕಳು ಅಧಿಕ ಸಂಖ್ಯೆಯಲ್ಲಿ ಪ್ರತಿ ವರ್ಷ ವಿವಿಧ ವಸತಿ ಶಾಲೆಗಳಿಗೆ ಆಯ್ಕೆ ಯಾಗುತ್ತಿರುವುದು ವಿಶೇಷ. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಎತ್ತರಕ್ಕೆ ಬೆಳೆಸುವುದು ಸುಲಭ ದ ಮಾತಲ್ಲ. ಇಲ್ಲಿ ಸಾಕಷ್ಟು ಸವಾಲುಗಳಿರುತ್ತವೆ. ಕಷ್ಟ-ನಷ್ಟಗಳು ಇರುತ್ತವೆ. ಆದರೆ, ಇವುಗಳನ್ನೆಲ್ಲ ಮೆಟ್ಟಿನಿಂತು ದೊಡ್ಡ ಶಿಕ್ಷಣ ಸಂಸ್ಥೆಯನ್ನಾಗಿ ಬೆಳೆಸಿರುವುದು ಪವಾಡವೇ ಸರಿ.

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ಸಾರಿಗೆ ಘಟಕಗಳ ಬಸ್ ಗಳು ಈ ಮಾರ್ಗದಲ್ಲಿ ಕಾರ್ಯಾ ಚರಣೆ ಮಾಡುತ್ತವೆ. ಜೊತೆಗೆ ಕೊಪ್ಪಳ ಜಿಲ್ಲೆಯ ಹೊರತಾಗಿ ಬೇರೆ ಘಟಕದ ಬಸ್ ಕೂಡ ಈ ಮಾರ್ಗ ದಲ್ಲಿ ಓಡಾಡುತ್ತವೆ. ಇದರಿಂದ ಕೊಪ್ಪಳ- ಯಲಬುರ್ಗಾ ಮಾರ್ಗದಲ್ಲಿ ಬಸ್ ಕೊರತೆ ಇಲ್ಲ. ಆದರೆ, ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವ ಬಹುತೇಕ ಬಸ್ ಗಳು ನಾನ್ ಸ್ಟಾಪ್ ಬೋರ್ಡ್ ಹಾಕಿಕೊಂಡೇ ಓಡಾಡುತ್ತವೆ. ಇದರಿಂದ ಹಲಗೇರಿ, ಭಾನಾಪೂರ ಮಸಬಹಂಚಿನಾಳ ಸೇರಿ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.

Koppal Tractor accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿಯಾಗಿ 7 ಮಂದಿ ದುರ್ಮರಣ!

ಕೊಪ್ಪಳದಲ್ಲಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿಯಾಗಿ 7 ಮಂದಿ ದುರ್ಮರಣ!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಲಯನಹಳ್ಳಿ ನಿವಾಸಿಗಳು, ಕೊಪ್ಪಳದ ಹುಲಿಗಮ್ಮ ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಮುನಿರಾಬಾದ್ ಬಳಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ತುಂಗಭದ್ರಾ ಸೇತುವೆಯಿಂದ ಟ್ರ್ಯಾಕ್ಟರ್‌ ಕೆಳಗೆ ಬಿದ್ದು, ದುರಂತ ಸಂಭವಿಸಿದೆ.

Koppal News: ಗಂಗಾವತಿ ಬಿಜೆಪಿ ಮುಖಂಡ  ವೆಂಕಟೇಶ ಹತ್ಯೆ ಪ್ರಕರಣ; 6 ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ; ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

Koppala News: ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಶವ ಪತ್ತೆ, ಕೊಲೆ ಶಂಕೆ

ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕರಿಬ್ಬರ ಶವ ಪತ್ತೆ, ಕೊಲೆ ಶಂಕೆ

ರುದ್ರೇಶ್ ಗಂಗಾವತಿ (23) ಹಾಗೂ ರವಿರಾಮಣ್ಣ ತಟ್ಟಿ (22) ಮೃತ ದುರ್ದೈವಿಗಳು. ಇಬ್ಬರು ಯುವಕರನ್ನು ಬೇರೆಡೆ ಕೊಂದು ಕಾಲುವೆಗೆ ತಂದು ಸುಟ್ಟು ಹಾಕಲಾಗಿದೆ ಎಂದು ಶಂಕಿಸಲಾಗಿದೆ. ಇಬ್ಬರ ವೈಯಕ್ತಿಕ ದ್ವೇಷ ಹೊಂದಿದ್ದವರು, ಇವರು ಕೊನೆಯ ಬಾರಿಗೆ ಕಾಣಿಸಿಕೊಂಡ ಸ್ಥಳಗಳ ಸಿಸಿಟಿವಿ ಕ್ಯಾಮೆರಾ ಇತ್ಯಾದಿ ಪರಿಶೀಲಿಸಲಾಗುತ್ತಿದೆ.

Love Jihad: ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಮೊಬೈಲ್‌ನಲ್ಲಿ ಯುವತಿಯರ 7000ಕ್ಕೂ ಹೆಚ್ಚು ಫೋಟೋ! ಅಂತಾರಾಷ್ಟ್ರೀಯ ಮಟ್ಕಾ ಬುಕ್ಕಿಗಳ ಲಿಂಕ್!

ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಅಂತಾರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್!

ಹಿಂದೂ ಸಂಘಟನೆಗಳ ಕಾರ್ಯಕರ್ತರು ಯುವಕನ ಬಳಿಯಿದ್ದ ಮೊಬೈಲ್‌ ಕಸಿದುಕೊಂಡು ಪರಿಶೀಲಿಸಿದಾಗ ಫೋನ್‌ನಲ್ಲಿ ಮೂರು ಸಾವಿರ ಫೋಟೊಗಳು, ಆರು ಸಾವಿರ ವಿಡಿಯೊಗಳು, ಮತ್ತೊಂದು ಫೋನ್‌ನಲ್ಲಿ ನಾಲ್ಕು ಸಾವಿರ ಯುವತಿಯರ ಫೋಟೊಗಳು ಹಾಗೂ 3,700 ವಿಡಿಯೊಗಳು ಇರುವುದು ಗೊತ್ತಾಗಿದೆ.

Koppal Love Jihad case: ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಫೋಟೊ, ವಿಡಿಯೊಗಳು!

ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ವಶಕ್ಕೆ

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಕಳೆದ ಮೂರು ದಿನಗಳ ಹಿಂದೆ ಹಿಂದೂ ಯುವತಿ ಜತೆ ಓಡಾಡುತ್ತಿದ್ದಾ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

21 ಕ್ಕೂ ಅಧಿಕ ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

21 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 21 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ.

Karianna Sangati: ಪರಿಷತ್‌ ಮಾಜಿ ಸದಸ್ಯ, ಡಿಕೆಶಿ ಆಪ್ತ ಕರಿಯಣ್ಣ ಸಂಗಟಿ ಇನ್ನಿಲ್ಲ

ಪರಿಷತ್‌ ಮಾಜಿ ಸದಸ್ಯ, ಡಿಕೆಶಿ ಆಪ್ತ ಕರಿಯಣ್ಣ ಸಂಗಟಿ ಇನ್ನಿಲ್ಲ

ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Assault Case: ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ವ್ಯಾಪಾರ ಮಾಡುತ್ತಿದ್ದ ವೇಳೆ ಚಂದ್ರಶೇಖರ್‌ಗೆ ಯುವಕರು ಬಂದು ಹಲ್ಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಕೂಡ ಚಂದ್ರಶೇಖರಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಈ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Murder Case: ಊಟಕ್ಕಾಗಿ ಹೋಟೆಲ್‌ಗೆ ಹೋದ ಯುವಕನ ಕೊಲೆ, ಆಕಸ್ಮಿಕವಾಗಿ ಕಾಲು ತುಳಿದದ್ದೇ ಕಾರಣ!

ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಕಾಲು ತುಳಿದ ಯುವಕನ ಕೊಲೆ

ಮನೆ ಸಮೀಪದ ಹೋಟೆಲ್‌ಗೆ ರಾತ್ರಿ ದೋಸೆ ತಿನ್ನಲು ಶಶಿ ಅವರು ಹೋಗಿದ್ದರು. ಅದೇ ವೇಳೆ ಮಂಜುನಾಥ ಸಹ ಹೋಟೆಲ್‌ಗೆ ಹೋಗಿದ್ದ. ದೋಸೆ ತಿನ್ನುವಾಗ ಆಕಸ್ಮಿಕವಾಗಿ ಮಂಜುನಾಥ್ ಕಾಲನ್ನು ಶಶಿ ತುಳಿದಿದ್ದಾನೆ. ಈ ವಿಚಾರಕ್ಕೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಡ್ಯಾಗರ್‌ನಿಂದ ಶಶಿಗೆ ಇರಿಯಲಾಗಿದೆ.

Honour Killing: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಕೊಪ್ಪಳ ತಾಲ್ಲೂಕಿನ ಹಂದ್ರಾಳದಲ್ಲಿ ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. 4 ತಿಂಗಳ ಗರ್ಭಿಣಿಯಾಗಿದ್ದ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ ಅಣ್ಣ ಮಂಜುನಾಥ್ ಯತ್ನಿಸಿದ್ದಾನೆ. ಮೀನಾಕ್ಷಿಯ ಪತಿ ಉದಯನ ಸಹೋದರನ ಮದುವೆಗೆ ದಂಪತಿ ಬಂದಾಗ ಈ ಕೃತ್ಯ ಎಸಗಲಾಗಿದೆ.

Assault Case: ಮುಸ್ಲಿಂ ದಂಪತಿಯ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರಿಂದ ಹಲ್ಲೆ

ದಂಪತಿ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಹಲ್ಲೆ

ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಮುಸ್ಲಿಂ ಯುವಕರು, ಆತ ಮುಸ್ಲಿಂ ಬಾಲಕಿಯನ್ನು ಪ್ರೀತಿಸುತ್ತಿದ್ದಾನೆ ಎಂದು ತಪ್ಪು ಭಾವಿಸಿದ್ದಾರೆ. 'ಇವರು ನಮ್ಮೂರಿನವರು, ನಾನು ಇವರನ್ನು ಮನೆಗೆ ಕರೆದೊಯ್ಯಲು ಬಂದಿದ್ದೇನೆ' ಎಂದು ವೆಂಕಟೇಶ ಎಷ್ಟೇ ಬೇಡಿಕೊಂಡರೂ ಕೇಳದ ಯುವಕರ ಗುಂಪು ಆತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

Gruhalakshmi scheme: ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ.

Heart Attack: ಕೊಪ್ಪಳದಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಕೊಪ್ಪಳದಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. ಒಂದು ತಿಂಗಳ ಹಿಂದೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತದ ಸಾವಿನ ಪ್ರಮಾಣದ ಕಾರಣ ಕಂಡುಹಿಡಿಯಲು ತಜ್ಞರ ಸಮಿತಿಯನ್ನು ಸರಕಾರ ರಚಿಸಿತ್ತು.

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮದಲ್ಲಿ ಹೈಡ್ರಾಮಾ; ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ

ಕೊಪ್ಪಳದಲ್ಲಿ ಕೈ ಕಾರ್ಯಕರ್ತರ ಹೈಡ್ರಾಮಾ; ಸೋಮಣ್ಣ ವಿರುದ್ಧ ಆಕ್ರೋಶ

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಎದುರೇ ಕೈ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ನಮೂದಿಸಿಲ್ಲ ಎಂದು ಕೊಪ್ಪಳದ ಹಿಟ್ನಾಳದಲ್ಲಿ ನಡೆದ ರೈಲ್ವೆ ಕಾಮಗಾರಿ ಶಿಲಾನ್ಯಾಸದ ವೇಳೆ ಹೈಡ್ರಾಮಾ ನಡೆದಿದೆ.

ಮಹಾ ರಥೋತ್ಸವಕ್ಕೆ ಕ್ಷಣಗಣನೆ

ಮಹಾ ರಥೋತ್ಸವಕ್ಕೆ ಕ್ಷಣಗಣನೆ

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೋತ್ಸವದ ಹಿನ್ನೆಲೆ ಭಾನುವಾರ ಸಂಜೆ ಕಂಡು ಬಂದ ದೃಶ್ಯಗಳಿವು. ದಕ್ಷಿಣ ಭಾರತದ ಕುಂಭ ಮೇಳ ಎಂಬ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರೋ ತ್ಸವದ ಪ್ರಮುಖ ಘಟ್ಟ, ಮಹಾ ರಥೋತ್ಸವ ಇಂದು ಸಂಜೆ 5.30ಕ್ಕೆ ಜರುಗಲಿದ್ದು, ಕ್ಷಣ ಗಣನೆ ಆಂಭವಾಗಿದೆ. ರಥ ಬೀದಿಯನ್ನು ಈಗಾಗಲೇ ವೈಜ್ಞಾನಿಕವಾಗಿ ಗಟ್ಟಿಗೊಳಿಸಲಾಗಿದೆ.

ಮಹಾ ಪ್ರಸಾದಕ್ಕೆ ಮೈಸೂರು ಪಾಕ್‌ !

ಗವಿ ಜಾತ್ರೆ ದಾಸೋಹದಲ್ಲಿ ತುಪ್ಪದ ಮೈಸೂರ್‌ಪಾಕ್ ಲಭ್ಯ

ಸಿಂಧನೂರಿನ ಗವಿಸಿದ್ಧೇಶ್ವರ ಆಗ್ರೋ ಫುಡ್ಸ್ ಮತ್ತು ವಿಜಯಕುಮಾರ್ ಗೆಳೆಯರ ಬಳಗ ಈಗಾಗಲೇ ಮಹಾ ದಾಸೋಹದ ಆವರಣದಲ್ಲಿ ಮೈಸೂರ್‌ಪಾಕ್ ಸಿದ್ಧತೆ ಕಾರ್ಯ ಶುರು ಮಾಡಿದೆ. ಕಳೆದ 10 ವರ್ಷದಿಂದ ಈ ತಂಡ ಮಹಾ ದಾಸೋಹಕ್ಕೆ ವಿಶೇಷ ಸಿಹಿ ಮಾಡಿಸಿ ಕೊಂಡು ಬರುತ್ತಿರುವುದು ವಿಶೇಷ. ಈ ಬಾರಿ 10 ಲಕ್ಷ ಭಕ್ತರಿಗೆ ಆಗುವಷ್ಟು ಮೈಸೂರ್‌ಪಾಕ್ ತಯಾರಿ ಮಾಡುತ್ತಿದ್ದಾರೆ

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಶ್ರೀ ಚನ್ನಬಸವ ಶಿವಯೋಗಿಗಳ 80ನೇ ಮಹಾ ರಥೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಬರುವ ಭಕ್ತರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆ ಶ್ರೀಮಠದ ಪಕ್ಕದಲ್ಲಿನ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ದಾಸೋಹ ಮಂಟಪ ಸಿದ್ಧಗೊಂಡಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Huligemma Temple: ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ. ದೇವಾಲಯದ ಆವರಣದಲ್ಲಿ ಶಿಶುವನ್ನು ಬಿಸಾಡಿ ಹೋಗಲಾಗಿದೆ. ಶಿಶುವಿನ ದೇಹ ಹುಳುಗಳಿಂದ ತುಂಬಿತ್ತು. ಮಗು ಅಳುವ ಶಬ್ಧ ಕೇಳಿ ಭಕ್ತರು ಗಮನಿಸಿ ಹೋಂ ಗಾರ್ಡ್ ಸಿಬ್ಬಂದಿಗೆ ತಿಳಿಸಿದ್ದಾರೆ.

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ.

Loading...