ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕೊಪ್ಪಳ

Heart Attack: ಕೊಪ್ಪಳದಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಕೊಪ್ಪಳದಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. ಒಂದು ತಿಂಗಳ ಹಿಂದೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತದ ಸಾವಿನ ಪ್ರಮಾಣದ ಕಾರಣ ಕಂಡುಹಿಡಿಯಲು ತಜ್ಞರ ಸಮಿತಿಯನ್ನು ಸರಕಾರ ರಚಿಸಿತ್ತು.

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮದಲ್ಲಿ ಹೈಡ್ರಾಮಾ; ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ

ಕೊಪ್ಪಳದಲ್ಲಿ ಕೈ ಕಾರ್ಯಕರ್ತರ ಹೈಡ್ರಾಮಾ; ಸೋಮಣ್ಣ ವಿರುದ್ಧ ಆಕ್ರೋಶ

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಎದುರೇ ಕೈ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ನಮೂದಿಸಿಲ್ಲ ಎಂದು ಕೊಪ್ಪಳದ ಹಿಟ್ನಾಳದಲ್ಲಿ ನಡೆದ ರೈಲ್ವೆ ಕಾಮಗಾರಿ ಶಿಲಾನ್ಯಾಸದ ವೇಳೆ ಹೈಡ್ರಾಮಾ ನಡೆದಿದೆ.

ಮಹಾ ರಥೋತ್ಸವಕ್ಕೆ ಕ್ಷಣಗಣನೆ

ಮಹಾ ರಥೋತ್ಸವಕ್ಕೆ ಕ್ಷಣಗಣನೆ

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೋತ್ಸವದ ಹಿನ್ನೆಲೆ ಭಾನುವಾರ ಸಂಜೆ ಕಂಡು ಬಂದ ದೃಶ್ಯಗಳಿವು. ದಕ್ಷಿಣ ಭಾರತದ ಕುಂಭ ಮೇಳ ಎಂಬ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರೋ ತ್ಸವದ ಪ್ರಮುಖ ಘಟ್ಟ, ಮಹಾ ರಥೋತ್ಸವ ಇಂದು ಸಂಜೆ 5.30ಕ್ಕೆ ಜರುಗಲಿದ್ದು, ಕ್ಷಣ ಗಣನೆ ಆಂಭವಾಗಿದೆ. ರಥ ಬೀದಿಯನ್ನು ಈಗಾಗಲೇ ವೈಜ್ಞಾನಿಕವಾಗಿ ಗಟ್ಟಿಗೊಳಿಸಲಾಗಿದೆ.

ಮಹಾ ಪ್ರಸಾದಕ್ಕೆ ಮೈಸೂರು ಪಾಕ್‌ !

ಗವಿ ಜಾತ್ರೆ ದಾಸೋಹದಲ್ಲಿ ತುಪ್ಪದ ಮೈಸೂರ್‌ಪಾಕ್ ಲಭ್ಯ

ಸಿಂಧನೂರಿನ ಗವಿಸಿದ್ಧೇಶ್ವರ ಆಗ್ರೋ ಫುಡ್ಸ್ ಮತ್ತು ವಿಜಯಕುಮಾರ್ ಗೆಳೆಯರ ಬಳಗ ಈಗಾಗಲೇ ಮಹಾ ದಾಸೋಹದ ಆವರಣದಲ್ಲಿ ಮೈಸೂರ್‌ಪಾಕ್ ಸಿದ್ಧತೆ ಕಾರ್ಯ ಶುರು ಮಾಡಿದೆ. ಕಳೆದ 10 ವರ್ಷದಿಂದ ಈ ತಂಡ ಮಹಾ ದಾಸೋಹಕ್ಕೆ ವಿಶೇಷ ಸಿಹಿ ಮಾಡಿಸಿ ಕೊಂಡು ಬರುತ್ತಿರುವುದು ವಿಶೇಷ. ಈ ಬಾರಿ 10 ಲಕ್ಷ ಭಕ್ತರಿಗೆ ಆಗುವಷ್ಟು ಮೈಸೂರ್‌ಪಾಕ್ ತಯಾರಿ ಮಾಡುತ್ತಿದ್ದಾರೆ

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಶ್ರೀ ಚನ್ನಬಸವ ಶಿವಯೋಗಿಗಳ 80ನೇ ಮಹಾ ರಥೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಬರುವ ಭಕ್ತರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆ ಶ್ರೀಮಠದ ಪಕ್ಕದಲ್ಲಿನ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ದಾಸೋಹ ಮಂಟಪ ಸಿದ್ಧಗೊಂಡಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Huligemma Temple: ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ. ದೇವಾಲಯದ ಆವರಣದಲ್ಲಿ ಶಿಶುವನ್ನು ಬಿಸಾಡಿ ಹೋಗಲಾಗಿದೆ. ಶಿಶುವಿನ ದೇಹ ಹುಳುಗಳಿಂದ ತುಂಬಿತ್ತು. ಮಗು ಅಳುವ ಶಬ್ಧ ಕೇಳಿ ಭಕ್ತರು ಗಮನಿಸಿ ಹೋಂ ಗಾರ್ಡ್ ಸಿಬ್ಬಂದಿಗೆ ತಿಳಿಸಿದ್ದಾರೆ.

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ.

ಚಳಿಯ ಅಬ್ಬರಕ್ಕೆ ಕೊಪ್ಪಳ ಜನ ʼಥಂಡಾʼ !

ಚಳಿಯ ಅಬ್ಬರಕ್ಕೆ ಕೊಪ್ಪಳ ಜನ ʼಥಂಡಾʼ !

ತಾಪಮಾನ ಪ್ರಮಾಣ ದಾಖಲೆ ಪ್ರಮಾಣದಲ್ಲಿ ಇಳಿಕೆ ಆಗಿದ್ದು, ಜನ ಜೀವನ ಅಸ್ವಸ್ಥಗೊಂಡಿದೆ. ಬೆಳಗ್ಗೆ ವಾಕಿಂಗ್ ಮಾಡುವವರು ಚಳಿಯಿಂದ ರಕ್ಷಿಸಿಕೊಳ್ಳಲು ವಿಶೇಷ ಧರಿಸುಗಳ ಮೊರೆ ಹೋಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕನಿಷ್ಠ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗು ತ್ತಿದ್ದು, ಇದು ಸಾಮಾನ್ಯಕ್ಕಿಂತ ತೀರಾ ಕಡಿಮೆ ಆಗಿದೆ. ಇದರಿಂದ ಬೆಳಗ್ಗೆ 6 ರಿಂದ 7 ಗಂಟೆ ವರೆಗೆ ದಟ್ಟ ಮಂಜು ಕವಿದಿರುತ್ತದೆ.

Koppala news: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

Road Accident: ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.

Shivasharanappa Gouda Patil: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಶಿವಶರಣಪ್ಪಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿದ್ದ ಇವರು, ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು.

Koppal News: ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕೇಸ್‌ ದಾಖಲು

ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಈ ಸ್ಥಿತಿಗೆ ಕಾರಣವಾದ ಆರೋಪಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿವೆ.

Koppala News: ಹಣ ಮರಳಿ ಕೊಡುತ್ತೇವೆಂದು ಕರೆಸಿಕೊಂಡು ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

ಹಣ ಮರಳಿ ಕೊಡುತ್ತೇವೆಂದು ಕರೆಸಿ ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

Koppala News: ಸಂತ್ರಸ್ತೆ ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ, ಆರೋಪಿ ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ದು ಮದ್ಲೂರ ಗ್ರಾಮದ ಬಳಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇನ್ನು ಮೂವರು ಸೇರಿಕೊಂಡಿದ್ದಾರೆ. ಅವರು ಮಹಿಳೆಗೆ ಜ್ಯೂಸ್ ಎಂದು ಹೇಳಿ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ನಂತರ ನಾಲ್ವರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುಷ್ಟಗಿ ಮತ್ತು ಮದ್ಲೂರ ಸೀಮೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯವೇ ತಲೆ ತಗ್ಗಿಸುವ ಘಟನೆ; ಅಪ್ರಾಪ್ತೆ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

Koppal News: ಕೊಪ್ಪಳದಲ್ಲಿ 21 ವರ್ಷದ ಯುವಕನೊಬ್ಬ ತನ್ನ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸುಮಾರು 8 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಸಹೋದರನಿಂದ ಗರ್ಭ ಧರಿಸಿದ ಸಂತ್ರಸ್ತೆ ಅಕ್ಟೋಬರ್‌ 30ರಂದು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಕಾಮುಕ ಸಹೋದರನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

Koppala news: ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

Koppala news: ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ, ರಸ್ತೆ ಬದಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು.

CM Siddaramaiah: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ಅನುದಾನ: ಸಿಎಂ

CM Siddaramaiah: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತಾರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Yellalinga Murder case: ಯಲ್ಲಾಲಿಂಗ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟ; ಎಲ್ಲಾ ಆರೋಪಿಗಳೂ ಖುಲಾಸೆ

ಯಲ್ಲಾಲಿಂಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳೂ ಖುಲಾಸೆ

Koppal News: ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದೆ. ಯಲ್ಲಾಲಿಂಗನ ಕೊಲೆ ಪ್ರಕರಣ ಈ ಹಿಂದೆ ಶಿವರಾಜ ತಂಗಡಗಿ ಸಚಿವರಾಗಿದ್ದಾಗ ಅವರ ರಾಜೀನಾಮೆಗೂ ಕಾರಣವಾಗಿತ್ತು. ಇದೀಗ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಂದ ಕೋರ್ಟ್ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

Basanagouda Patil Yatnal: ದಲಿತ ಮಹಿಳೆಯರಿಗೆ ಅಪಮಾನ ಆರೋಪ; ಶಾಸಕ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್‌

ದಲಿತ ಮಹಿಳೆಯರಿಗೆ ಅಪಮಾನ; ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

Basanagouda Patil Yatnal: ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಶಾಸಕ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದ್ದರಿಂದ ಯತ್ನಾಳ್‌ ವಿರುದ್ಧ ಕೇಸ್‌ ದಾಖಲಾಗಿದೆ.

Lokayukta Raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

Koppala: ಗಳಿಕೆಗೆ ಮೀರಿದ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಈ ಅಧಿಕಾರಿಗಳ ಬಗ್ಗೆ ಹಲವು ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದವು. ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಎಲ್ಲ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

POCSO case: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

Koppla: ತಮ್ಮ ಮಗಳು ಅಪ್ರಾಪ್ತಳಾಗಿದ್ದು, ಕೊಲೆಯಾದ ಗವಿನಾಯಕ ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ. ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ನನಗೆ ಜೀವಬೆದರಿಕೆ ಹಾಕಿದ್ದ. ಮಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಬಗ್ಗೆ ಆತನ ತಂದೆ, ತಾಯಿ, ಪಾಲಕರಿಗೆ ತಿಳಿಸಿದರೂ ಅವರೂ ಜೀವ ಬೆದರಿಕೆ ಹಾಕಿದ್ದರೆಂದು ದೂರಲಾಗಿದೆ.

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌ ಘೋಷಣೆ

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌

Koppala: ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿಕಾರಿದರು.

Murder Case: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

Koppala: ಕುರುಬರ ಓಣಿಯ ನಿವಾಸಿ 30 ವರ್ಷದ ಗವಿಸಿದ್ದಪ್ಪ ನಾಯಕ ಅನ್ಯಕೋಮಿನ ಯುವತಿಯೊಬ್ಭಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಹುಡುಗಿಯ ಕಡೆಯವರಿಗೂ ಈತನಿಗೂ ಬಿಸಿಬಿಸಿ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಮೂರು ಜನರು ಮಾರಕಾಸ್ತ್ರಗಳನ್ನು ಬಳಸಿ ಗವಿಸಿದ್ದಪ್ಪನ ಮೇಲೆ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

Loading...