ಕೊಪ್ಪಳದಲ್ಲಿ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. ಒಂದು ತಿಂಗಳ ಹಿಂದೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತದ ಸಾವಿನ ಪ್ರಮಾಣದ ಕಾರಣ ಕಂಡುಹಿಡಿಯಲು ತಜ್ಞರ ಸಮಿತಿಯನ್ನು ಸರಕಾರ ರಚಿಸಿತ್ತು.