ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊಪ್ಪಳ

KPSC Recruitment Scam: ಕೆಪಿಎಸ್‌ಸಿಯನ್ನೂ ಮೀರಿಸಿದೆ ಕೊಪ್ಪಳ ವಿವಿ, ನೇಮಕಾತಿ ಅಕ್ರಮ, ಲಂಚವೇ ಪರಪಂಚ

ಕೆಪಿಎಸ್‌ಸಿಯನ್ನೂ ಮೀರಿಸಿದೆ ಕೊಪ್ಪಳ ವಿವಿ

ಯಲಬುರ್ಗಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಪುತ್ರನೊಬ್ಬ ಇಲ್ಲಿ ಹೊರಗುತ್ತಿಗೆ ನೌಕರನಾಗಿದ್ದು, ಇಡೀ ಅಕ್ರಮದ ಸೂತ್ರಧಾರ ಆತನೇ ಎಂದು ಆರೋಪಿಸಲಾಗಿದೆ. ಇಷ್ಟೆಲ್ಲ ಗೊತ್ತಿದ್ದರೂ ಸ್ವತಃ ತಮ್ಮ ಸ್ವಗ್ರಾಮ ದಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದ ದಯನೀಯ ಸ್ಥಿತಿಯ ಬಗ್ಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಸಂಪೂರ್ಣ ನಿರ್ಲ ಕ್ಷ್ಯ ವಹಿಸಿದ್ದಾರೆ ಎಂದು ಜನ ಬೇಸರ ವ್ಯಕ್ತಪಡಿಸಿದ್ದಾರೆ.

Koppal University: ಯುಜಿಸಿ ನಿಯಮದ ಹೆಸರಿನಲ್ಲಿ ಸ್ವಹಿತಾಸಕ್ತಿ ಸಾಧನೆ ಆರೋಪ: ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ

ಕೊಪ್ಪಳ ವಿವಿಯಲ್ಲಿ ಅಪರಾತಪರ ?

ಯಡವಟ್ಟು, ಅವಾಂತರಗಳ ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯ ಈಗ ಮತ್ತೇ ಸುದ್ದಿಯಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ನಿಯಮ ಉಲ್ಲಂಘಿಸಿ, ಮನಸೋ ಇಚ್ಛೇ ಮೆರಿಟ್ ಲಿಸ್ಟ್ ಸಿದ್ಧತೆ ಮಾಡಿರುವ ಆರೋಪ ಕೇಳಿ ಬಂದಿದೆ. ಯುಜಿಸಿ ನಿಯಮಾವಳಿ ಒಂದೆಡೆ ಇರಲಿ, ಕೊಪ್ಪಳ ವಿಶ್ವವಿದ್ಯಾಲಯದ ಒಂದು ವಿಭಾಗದ ನೇಮಕಾತಿಗೆ ಇದ್ದ ನಿಯಮ ಮತ್ತೊಂದು ವಿಭಾಗಕ್ಕೆ ಅನ್ವಯ ಆಗಿಲ್ಲ

Padayatra reached 6th day: ಗಡಿನಾಡು ಬಳ್ಳಾರಿಗೆ ಕಾಲಿಟ್ಟ ವಿಜಯೇಂದ್ರ ದುಂದುಬಿ

ಗಡಿನಾಡು ಬಳ್ಳಾರಿಗೆ ಕಾಲಿಟ್ಟ ವಿಜಯೇಂದ್ರ ದುಂದುಬಿ

ವಿಜಯೇಂದ್ರ ತಮ್ಮ 6ನೇ ದಿನದ ಪಾದಯಾತ್ರೆಯ ದಿನಚರಿಯನ್ನು ಕುರಿಗಾಯಿಗಳ ಜೊತೆಗೆ ಸಂವಾದ ಮಾಡುವ ಮೂಲಕ ಆರಂಭಿಸಿದರು. ಬೆಳಗ್ಗೆ 7 ಗಂಟೆಗೆ ನೇರವಾಗಿ ಗಂಗಾವತಿ ತಾಲೂಕು ಮರಳಿ ಗ್ರಾಮದ ಬಳಿ ನೆಲೆಸಿದ್ದ ಸಂಚಾರಿ ಕುರಿಗಾಯಿಗಳ ಟೆಂಟ್‌ಗೆ ಭೇಟಿ ನೀಡಿ, ಸಂವಾದ ನಡೆಸಿ, ಸಮಸ್ಯೆ ಆಲಿಸಿ, ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು.

ಹೆಲಿಕಾಪ್ಟರ್‌ನಲ್ಲಿ ಓಡಾಡಿ ಬಣ್ಣದ ಮಾತನಾಡಿದರೆ ಪ್ರಜಾಸೇವಕರಾಗಲು ಹೇಗೆ ಸಾಧ್ಯ? ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಬಳ್ಳಾರಿ ಚಲೋ ಪಾದಯಾತ್ರೆ; ಸಿಎಂ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಬಳ್ಳಾರಿ ಚಲೋ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ಕರ್ನಾಟಕದ ಪ್ರವಾಸದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವ್ಯಂಗ್ಯವಾಡಿದರು. ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ನಿನ್ನೆ ‘ನಾಡಿನ ದೊರೆ’ ಎಂದು ಕರೆಯಬೇಡಿ, ‘ಪ್ರಜಾಸೇವಕ’ ಎಂದು ಕರೆಯಿರಿ ಎಂದು ಹೇಳಿದ್ದಾರೆ.

Padayatra reached 5th Day: ಬಿರು ಬಿಸಿಲಲ್ಲೂ ಬಿಜೆಪಿ ಜಾಥಾ, ಶಿಕ್ಷಕರ ದಿನಾಚರಣೆಯಲ್ಲಿ ಬಿವೈವಿ ಭಾಗಿ: ಪಾದಯಾತ್ರೆ ಮಧ್ಯೆ ರೈತರ ಜತೆ ಸಂವಾದ

ಪಾದಯಾತ್ರೆ ಮಧ್ಯೆ ರೈತರ ಜತೆ ಸಂವಾದ

ಮರಳಿ ಗ್ರಾಮದಲ್ಲಿ ನವಲಿ ಜಲಾಶಯ ನಿರ್ಮಾಣದ ಸಾಧಕ- ಬಾಧಕಗಳ ಕುರಿತು ರೈತ ಸಂಘಟನೆ ಮುಖಂಡರೊಂದಿಗೆ ಸಂವಾದ ನಡೆಸಿದರು. ಶನಿವಾರ ಬೆಳಗ್ಗೆ ಪಾದಯಾತ್ರೆ ಆರಂಭಕ್ಕೂ ಮೊದಲು ಎಪಿಎಂಸಿ 1ನೇ ಗೇಟ್ ನ ಶಿವಕಿರಣ ಟ್ರೇಡಿಂಗ್ ಸಮೀಪ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗಿಯಾದ ರಾಜ್ಯಾಧ್ಯಕ್ಷ ಬಿವೈವಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು.

BJP Padayatra: ಮತ್ತೆ ಅಧಿಕಾರಕ್ಕೆ ಬರುತ್ತೇವೆಂಬ ಭ್ರಮೆಯಲ್ಲಿದೆ ಕಾಂಗ್ರೆಸ್: ಬಿ.ವೈ. ವಿಜಯೇಂದ್ರ

ಮತ್ತೆ ಅಧಿಕಾರಕ್ಕೆ ಬರುತ್ತೇವೆಂಬ ಭ್ರಮೆಯಲ್ಲಿದೆ ಕಾಂಗ್ರೆಸ್: ವಿಜಯೇಂದ್ರ

BY Vijayendra: ಮುಂದಿನ ಬಾರಿ ತಮ್ಮದೇ ಸರ್ಕಾರ ಬರುತ್ತೆ ಎಂದು ಕಾಂಗ್ರೆಸ್ ಭ್ರಮೆಯಲ್ಲಿದೆ. ಎಲ್ಲ ವರ್ಗದ ಜನರಿಗೆ ಈ ಸರ್ಕಾರ ಅನ್ಯಾಯ ಮಾಡಿದೆ. ಆಡಳಿತ ಪಕ್ಷದ ಶಾಸಕರೇ ತಮ್ಮ ಸರ್ಕಾರ ಟೇಕಾಪ್ ಆಗಿಲ್ಲ ಅಂತಿದ್ದಾರೆ. ಇನ್ನಾದರೂ ಈ ಸರ್ಕಾರ ಎಚ್ಚೆತ್ತು ಬಡವರ, ರೈತರ ಬಗ್ಗೆ ಕಾಳಜಿಯನ್ನು ಸರ್ಕಾರ ತೋರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

Padayatra reached 4th day: ರಾಯಚೂರು ಗಡಿ ದಾಟಿ ಕೊಪ್ಪಳಕ್ಕೆ ಆಗಮಿಸಿದ ಬಿಜೆಪಿ ಪಾದಯಾತ್ರೆ: ಜನ ಸಾಗರದ ನಡುವೆ ಕಾಲ್ನಡಿಗೆ ಬಿರುಸು

ಜನ ಸಾಗರದ ನಡುವೆ ಕಾಲ್ನಡಿಗೆ ಬಿರುಸು

ಶ್ರೀ ಕೃಷ್ಣಾಜನ್ಮಾಷ್ಟಮಿ ಅಂಗವಾಗಿ ಗೋ ಪೂಜೆ, ಶ್ರೀ ಕೃಷ್ಣನಿಗೆ ಮಹಾ ಮಂಗಳಾರತಿ ನೆರವೇರಿಸ ಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಂಗವಿಕಲರ, ವಯೋ ವೃದ್ಧರ ವೇತನವನ್ನು ಆರು ತಿಂಗಳಿನಿಂದ ಕೊಟ್ಟಿಲ್ಲ. ರಾಜ್ಯದ ಜನತೆ ಸರಕಾರದ ವಿರುದ್ಧ ಶಾಪ ಹಾಕುತ್ತಿದ್ದಾರೆ. ಜನರ ಸಂಕಷ್ಟ ಪರಿಹಾರಕ್ಕಾಗಿ ಸರಕಾರದ ಮೇಲೆ ಒತ್ತಡ ಹಾಕುವುದಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP Padayatra: ಬರಗಾಲ; 5 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಿ: ಬಿ.ವೈ.ವಿಜಯೇಂದ್ರ ಆಗ್ರಹ

ಬರಗಾಲ; 5 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಿ: ಬಿವೈ ವಿಜಯೇಂದ್ರ

BY Vijayendra: ನಾಡಿನ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು, ಬರಗಾಲದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕು. ಬರಗಾಲದ ಕಾರಣ 5 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನಡೆ ಅನುಮಾನಕ್ಕೆ ಎಡೆ: 'ಕುಡಾ' ಕಚೇರಿಯಲ್ಲಿ ರಾತ್ರಿ ಇಡೀ ಕೆಲಸವೇ?

'ಕುಡಾ' ಕಚೇರಿಯಲ್ಲಿ ರಾತ್ರಿ ಇಡೀ ಕೆಲಸವೇ?

ಕಂಪ್ಯೂಟರ್‌ ಆಪರೇಟರ್‌ ಜೊತೆಗೂಡಿ ತಮ್ಮ ಚೇಂಬರ್ ನಲ್ಲಿ ಇದ್ದಿದ್ದು ಕಂಡು ಬಂದಿದೆ. ಪ್ರಾಧಿಕಾರದ ಕಚೇರಿಯಲ್ಲಿ ಇಡೀ ದಿನ ಮಾಡಿದರೂ ಮುಗಿಯದ ಕೆಲಸವಾದರೂ ಏನಿದೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಮೂಡಿದೆ. ಪ್ರತ್ಯೇಕ ಬ್ಯಾಂಕ್ ಖಾತೆ ಸೃಷ್ಟಿಸಿ ಬರೋಬ್ಬರಿ 8 ಕೋಟಿ ರು. ಭ್ರಷ್ಟಾಚಾರ ಮಾಡಿರುವ ಪ್ರಕರಣ ತನಿಖೆ ನಡೆದಿರುವಾಗಲೇ ಅಧಿಕಾರಿಗಳು ರಾತ್ರಿ ಡ್ಯೂಟಿ ಮಾಡು ತ್ತಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಸವಾರರ ದುರ್ಮರಣ

ಕೊಪ್ಪಳದಲ್ಲಿ ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರ ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಅಪಘಾತ ನಡೆದಿದೆ. ಈದ್ ಮಿಲಾದ್ ಸಂಭ್ರಮದಲ್ಲಿ ಭಾಗಿಯಾಗಲು ನೆರೆಯ ಗದಗ ಜಿಲ್ಲೆಯ ನರಗುಂದದಿಂದ ಕೊಪ್ಪಳಕ್ಕೆ ಯುವಕರು ತೆರಳುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್‌ ಡಿಕ್ಕಿ ಹೊಡೆದು, ದುರಂತ ಸಂಭವಿಸಿದೆ.

ಸರಕಾರಿ ಭೂಮಿಯಲ್ಲೂ ಮರಳು ಎತ್ತುವಳಿ ಆರೋಪ : ಕೃಷಿ ಭೂಮಿಗೂ ಬಿಡದ ಮರಳುಗಾರಿಕೆ!

ಕೃಷಿ ಭೂಮಿಗೂ ಬಿಡದ ಮರಳುಗಾರಿಕೆ!

ಕೆಲ ಪ್ರಭಾವಿಗಳು ಸೇರಿ ಮಾಡುವ ಮರಳು ಗಣಿಗಾರಿಕೆಯಿಂದ ಅವರಂತೆ ಸರಕಾರದಿಂದ ಭೂಮಿ ಪಡೆದು ಕೃಷಿ ಮಾಡಿಕೊಂಡು ಜೀವನ ಮಾಡುವ ಅಮಾಯಕ ರೈತರು ಸಂಕಷ್ಟ ಎದುರಿಸು ವಂತಾಗಿದೆ. ಇದಕ್ಕೆ ಸದ್ಯ ಕಾರಟಗಿ ತಾಲೂಕು ಸಿದ್ಧಾಪೂರ ಗ್ರಾಮದಲ್ಲಿ ನಡೆದಿರುವ ಮರಳು ಗಣಿಗಾರಿಕೆ ತಾಜಾ ಉದಾಹರಣೆಯಂತಿದೆ.

ಕೊಪ್ಪಳ ಸೇರಿ ಉತ್ತರ ಕರ್ನಾಟಕದಲ್ಲಿ ಆರೋಗ್ಯಸೇವೆ ವಿಸ್ತರಣೆ: ಸದ್ಗುರು ಶ್ರೀ ಮಧುಸೂದನ ಸಾಯಿ

ಉತ್ತರ ಕರ್ನಾಟಕದಲ್ಲಿ ಆರೋಗ್ಯಸೇವೆ ವಿಸ್ತರಣೆ: ಸದ್ಗುರು

ಕೊಪ್ಪಳ ನಗರದಲ್ಲಿ ನಡೆದ "ದಿವ್ಯ ಸಂಜೆ" ಸಂವಾದ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಮಾತನಾಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಸೇರಿದಂತೆ ಹಲವು ಸೇವಾ ಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದುಕೊಂಡಿದ್ದೇವೆ ಎಂದು ಸದ್ಗುರು ತಿಳಿಸಿದ್ದಾರೆ.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 1350 ಕೋಟಿ ರು. ಅಗತ್ಯ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 1350 ಕೋಟಿ ರು. ಅಗತ್ಯ

ಕೊಪ್ಪಳ ಜಿಲ್ಲೆಯ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟ(Anjanadri Hill)ದ ದೇವಸ್ಥಾನ ಪ್ರದೇಶದ ಸಮಗ್ರ ಅಭಿವೃದ್ಧಿಗೆ 1350 ಕೋಟಿ ರು.ಗಳ ಅಗತ್ಯವಿದ್ದು, ವಿಶೇಷ ಅನುದಾನ ಮಂಜೂರಿಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್(Tourism Minister K.J. George) ತಿಳಿಸಿದ್ದಾರೆ.

ಅವ್ಯವಸ್ಥೆಯ ಆಗರವಾದ ಕುಷ್ಟಗಿಯ ತಾಯಿ-ಮಕ್ಕಳ ಆಸ್ಪತ್ರೆ: ಹೊಸ ಕಟ್ಟಡದಲ್ಲೂ ಅದೇ ಹಳೇ ಸಮಸ್ಯೆ

ಅವ್ಯವಸ್ಥೆಯ ಆಗರವಾದ ಕುಷ್ಟಗಿಯ ತಾಯಿ-ಮಕ್ಕಳ ಆಸ್ಪತ್ರೆ

ಒಟ್ಟು 100 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹೊಸ ಕಟ್ಟಡದಲ್ಲೇ ಮೂಲ ಸೌಲಭ್ಯ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕನಿಷ್ಠ ಸೌಲಭ್ಯಗಳಾದ ಶುದ್ಧ ಕುಡಿವ ನೀರು, ಬಾಣಂತಿರಿಗೆ ಬೇಕಾದ ಬಿಸಿ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲ. ಆಸ್ಪತ್ರೆ ಮೇಲ್ಚಾವಣಿ ಮೇಲೆ ಅಳವಡಿಸಿರುವ ಸೋಲಾರ್‌ವಾಟರ್ ಹೀಟರ್‌ನ ಟೂಬ್ ಗಳು ಹಾಳಾಗಿವೆ.

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಮೂವರು ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

Baldota Steel Factory: ಬಲ್ಡೋಟಾ ವಿರುದ್ಧ ಮತ್ತೆ ಭುಗಿಲೆದ್ದ ರೈತರ ಆಕ್ರೋಶ; ಕಾರ್ಖಾನೆ ಗೇಟ್‌, ಕಾಂಪೌಂಡ್‌ ಛಿದ್ರ

ಬಲ್ಡೋಟಾ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ; ಬೃಹತ್‌ ಪ್ರತಿಭಟನೆ

Farmers protest in Koppal: ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಬಲ್ಡೋಟಾ ಕಾರ್ಖಾನೆ ಬಳಿ 46ನೇ ರೈತ ಹುತಾತ್ಮ ದಿನಾಚರಣೆಯ ಪ್ರಯುಕ್ತ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ನೂರಾರು ರೈತರು, ಕಾರ್ಖಾನೆ ಆವರಣಕ್ಕೆ ನುಗ್ಗಿ, ಆಕ್ರೋಶ ವ್ಯಕ್ತಪಡಿಸಿದರು. ರೈತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಬೇಡಿಕೆಗೆ ತಕ್ಕಷ್ಟು ಪ್ರಶ್ನೆ ಪತ್ರಿಕೆ ಪೂರೈಸದ ಕೊಪ್ಪಳ ವಿವಿ

ಬೇಡಿಕೆಗೆ ತಕ್ಕಷ್ಟು ಪ್ರಶ್ನೆ ಪತ್ರಿಕೆ ಪೂರೈಸದ ಕೊಪ್ಪಳ ವಿವಿ

ಪರಿಕ್ಷಾರ್ಥಿಗಳಿಗೆ ಸಮರ್ಪಕ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಪೂರೈಕೆ ಮಾಡದ ಕೊಪ್ಪಳ ವಿಶ್ವ ವಿದ್ಯಾಲಯದ ಸ್ಥಿತಿ ಈ ಮೇಲಿನ ಮಾತಿಗೆ ಪುಷ್ಠಿ ನೀಡಿದೆ. ಇತ್ತೀಚೆಗಷ್ಟೇ ಕೊಪ್ಪಳ ವಿಶ್ವ ವಿದ್ಯಾಲಯ ಡಿಜಿಟಲ್ ಮೌಲ್ಯಮಾಪನಕ್ಕೆ ಮುಂದಾಗಿರುವ ಬಗ್ಗೆ ವರದಿ ಆಗಿತ್ತು. ಆದರೆ, ಗುರುವಾರ ನಡೆದ ವಿವಿಧ ಓಪನ್ ಎಲೆಕ್ಟಿವ್ ವಿಷಯಗಳ ಪರೀಕ್ಷೆಯಲ್ಲಿ ಸಾಕಷ್ಟು ಅಪರಾತಪರ ಆಗಿದೆ.

Koppal News: ಕೊಪ್ಪಳದಲ್ಲಿ ಘೋರ ಘಟನೆ; ಪತ್ನಿ, ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಚಿನ್ನದ ವ್ಯಾಪಾರಿ

ಕೊಪ್ಪಳದಲ್ಲಿ ಪತ್ನಿ, ಮಗನೊಂದಿಗೆ ಚಿನ್ನದ ವ್ಯಾಪಾರಿ ಆತ್ಮಹತ್ಯೆ

ಪ್ರಾಥಮಿಕ ತನಿಖೆಯ ಪ್ರಕಾರ, ವ್ಯವಹಾರದಲ್ಲಿ ಉಂಟಾಗಿದ್ದ ವಿಪರೀತ ಸಾಲಬಾಧೆಯಿಂದ ಚಿನ್ನದ ವ್ಯಾಪಾರಿಯ ಕುಟುಂಬದ ಈ ತೀವ್ರ ನಿರ್ಧಾರ ತೆಗೆದುಕೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಓಮ್ನಿ ಕಾರಿಗೆ ಲಾರಿ ಡಿಕ್ಕಿ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ

ಕೊಪ್ಪಳದಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ಹೋಗುತ್ತಿದ್ದ ಐವರ ಸಾವು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಸ್ತೆ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ರಸ್ತೆ ವಿಭಜಕ ದಾಟಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ; ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ

CM DK Shivakumar: ತುಂಗಭದ್ರಾ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

New Tungabhadra gate: ತುಂಗಭದ್ರೆ ಹೊಸ ಗೇಟ್‌ʼಗಳು ಇಂದು ಲೋಕಾರ್ಪಣೆ

ತುಂಗಭದ್ರೆ ಹೊಸ ಗೇಟ್‌ʼಗಳು ಇಂದು ಲೋಕಾರ್ಪಣೆ

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಜನರ ಜೀವನಾಡಿ, ತುಂಗಭದ್ರಾ ಜಲಾಶಯದ 33 ನೂತನ ಸ್ಪಿಲ್ ವೇ ಗೇಟ್‌ಗಳ ಲೋಕಾರ್ಪಣೆ ಗುರುವಾರ ನಡೆಯಲಿದೆ. ಐತಿಹಾಸಿಕ ಕ್ಷಣಕ್ಕೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರಪ್ರದೇಶ, ತೆಲಂಗಾಣದ ಮುಖ್ಯಮಂತ್ರಿಗಳು ಸಾಕ್ಷಿಯಾಗ ಲಿದ್ದಾರೆ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹುತೇಕ ಖಚಿತವಾಗಿದೆ.

ಬಾಲಕ ಸಿಗರೇಟ್ ಸೇದಿದ ವಿಡಿಯೊ ತೋರಿಸಿ ಬ್ಲ್ಯಾಕ್‌ಮೇಲ್; 120 ಗ್ರಾಂ ಚಿನ್ನ ವಸೂಲಿ ಮಾಡಿದ ಖದೀಮರು!

ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ವಸೂಲಿ!

Koppal Blackmail Case: ತಾನು ಸಿಗರೇಟ್‌ ಸೇದುವ ವಿಚಾರ ಮನೆಯಲ್ಲಿ ತಿಳಿದರೆ ತಂದೆ ಹೊಡೆಯುತ್ತಾರೆ ಎಂಬ ಭಯದಿಂದ ಕಂಗಾಲಾದ ಬಾಲಕ, ಆರೋಪಿಗಳ ಬ್ಲ್ಯಾಕ್‌ಮೇಲ್‌ಗೆ ಹೆದರಿ, ಚಿನ್ನಾಭರಣಗಳನ್ನು ಕೊಟ್ಟಿದ್ದಾನೆ. ಮನೆಯಲ್ಲಿ ಚಿನ್ನದ ಒಡವೆಗಳು ನಾಪತ್ತೆ ಆಗಿರೋದನ್ನು ಗಮನಿಸಿದ ಪೋಷಕರು ಪೊಲೀಸರಿಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Koppal Horror: ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು; ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಾಲಕ ಮೊಬೈಲ್ ದಾಸನಾಗಿದ್ದ. ಆನ್‌ಲೈನ್ ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕನ ತಾತ ನೀಡಿದ ದೂರಿನ ಮೇರೆಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಗೇಮ್‌ ಆಡಬೇಡ ಎಂದಿದ್ದಕ್ಕೆ ಅಪ್ಪ, ಅಕ್ಕನನ್ನೇ ಕೊಂದ  ದ್ವಿತೀಯ ಪಿಯುಸಿ ವಿದ್ಯಾರ್ಥಿ

ಅಪ್ಪ, ಅಕ್ಕನನ್ನೇ ಕೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ

ವಿದ್ಯಾರ್ಥಿಯೊಬ್ಬನಿಗೆ ಮೊಬೈಲ್ ನಲ್ಲಿ ಆನ್ ಲೈನ್ ಗೇಮ್ ಆಡದಂತೆ ಬುದ್ದಿವಾದ ಹೇಳಿದ್ದಕ್ಕೆ ತಂದೆ ಹಾಗೂ ಅಕ್ಕನನ್ನೇ ಕೊಲೆ ಮಾಡಿದ ಘಟನೆ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಅಯೋಧ್ಯೆ ಗ್ರಾಮದ ಸರಕಾರಿ ಶಾಲೆಯ ಸಮೀಪದ ಮನೆಯೊಂದರಲ್ಲಿ ಘಟನೆ ಜರುಗಿದೆ.

Loading...