ಗೂಡ್ಸ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ
Koppal Accident: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಭೀಕರ ಅಪಘಾತ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ʼಶುಭವಾಗಲಿʼ ಎಂದು ಬರೆಯಲು ಪರದಾಡಿದ ವಿಡಿಯೊ ವೈರಲ್ ಆಗಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ. ನನ್ನ ಬಗ್ಗೆ ಟೀಕಿಸಲು ಏನು ಸಿಗ್ತಿಲ್ಲ ಎಂದು ಹತಾಶರಾಗಿ ವಿರೋಧಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.
Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
Pralhad Joshi: 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ₹51,876 ಕೋಟಿ ತೆರಿಗೆ ಹಂಚಿಕೆ ಮಾಡಿದೆ. 2014-15 ರಲ್ಲಿ 24,789.78 ಕೋಟಿ ತೆರಿಗೆ ಹಂಚಿಕೆ ಆಗಿದ್ದರೆ, 2025-26 ರ ಆರ್ಥಿಕ ವರ್ಷ ಇದಕ್ಕಿಂತ ಶೇ.108 ರಷ್ಟು (51876 ಕೋಟಿ ರೂ.) ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
Madhugiri News: ಶಾಸಕ ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಲಿತರನ್ನು ಅಧ್ಯಕ್ಷರಾಗಿ ಮಾಡಿದರೆ ನಿಮಗೆ ಇಷ್ಟೊಂದು ಕೋಪವೇಕೆ? ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಂಎಲ್ಸಿ ರಾಜೇಂದ್ರ ಆಕ್ರೋಶ ಕಿಡಿಕಾರಿದ್ದಾರೆ.
International Gandhada Gudi Award: ಕನ್ನಡದ ಹೆಮ್ಮೆಯ ಸಾಧಕರನ್ನು, ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವಿಸೋ ಒಂದು ಅಂತಾರಾಷ್ಟ್ರೀಯ ಕನ್ನಡ ಸಾಂಸ್ಕೃತಿಕ ಅಲೆಯನ್ನು ದುಬೈನಲ್ಲಿ ಹುಟ್ಟು ಹಾಕೋ ಆಕಾಂಕ್ಷೆಯಿಂದ ʼಅಂತಾರಾಷ್ಟ್ರೀಯ ಗಂಧದ ಗುಡಿ ಪ್ರಶಸ್ತಿ - 2025” ಪ್ರದಾನ ಸಮಾರಂಭವನ್ನು ಆಯೋಜಿಸಿದ್ದೇವೆ ಎಂದು ಆಯೋಜಕ ಪೀಟರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ರಾಜ್ಯದಲ್ಲಿ ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರು ಬಿ.ಆರ್.ಪಾಟೀಲ್ ಬಳಿ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಂದಾಲೋಚನೆ ಮಾಡದೇ ಗ್ಯಾರೆಂಟಿ ರೂಪಿಸಿದ್ದೇ ಇಂಥ ಸ್ಥಿತಿಗೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.