ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತಾಜಾ ಸುದ್ದಿ
Haveri News: ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ವಿರಾಟ್‌ ಕೊಹ್ಲಿ ನೀಡಿದ್ದ ವಿಶೇಷ ಗಿಫ್ಟ್‌ ರಿವೀಲ್‌ ಮಾಡಿದ ನಿತೀಶ್‌ ರೆಡ್ಡಿ!

ವಿರಾಟ್‌ ಕೊಹ್ಲಿ ನೀಡಿದ್ದ ಗಿಫ್ಟ್‌ ರಿವೀಲ್‌ ಮಾಡಿದ ನಿತೀಶ್‌ ರೆಡ್ಡಿ!

ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಇನಿಂಗ್ಸ್‌ನಲ್ಲಿ ವಿರಾಟ್‌ ಕೊಹ್ಲಿಯ ಶೂ ಧರಿಸಿ ಬ್ಯಾಟ್‌ ಮಾಡಿದ್ದೆ ಎಂದು ನಿತೀಶ್‌ ರೆಡ್ಡಿ ಬಹಿರಂಗಪಡಿಸಿದ್ದಾರೆ. 2025ರ ಐಪಿಎಲ್‌ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಯುವ ಬ್ಯಾಟ್ಸ್‌ಮನ್‌ ಎದುರು ನೋಡುತ್ತಿದ್ದಾರೆ.

Disha Salian:  ದಿಶಾ ಸಾಲಿಯಾನ್ ಆತ್ಮಹತ್ಯೆ ಪ್ರಕರಣಕ್ಕೆ ತಳುಕು ಹಾಕಿಕೊಂಡ ಆದಿತ್ಯ ಠಾಕ್ರೆ ಹೆಸರು; ಮರು ತನಿಖೆಗೆ ಆಗ್ರಹ

ಆದಿತ್ಯ ಠಾಕ್ರೆಗೂ ಮೃತ ದಿಶಾ ಸಾಲಿಯಾನ್‌ಗೂ ಏನು ಸಂಬಂಧ?

Disha Salian: ದಿಶಾ ಸಾಲಿಯಾನ್ ಅವರ ತಂದೆ ತನ್ನ ಮಗಳ ಸಾವಿನ ಬಗ್ಗೆ ಮತ್ತೆ ಮರು ತನಿಖೆ ಮಾಡುವಂತೆ ಆಗ್ರಹಿಸಿ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ಹೆಸರು ಕೇಳಿ ಬಂದಿದೆ.

ಸ್ಮಾರ್ಟ್ ಫೋನ್ ಉದ್ಯಮದಲ್ಲಿ ಭಾರತದ ಸ್ಮಾರ್ಟ್ ವರ್ಕ್, 2032ರ ವೇಳೆಗೆ USD 77.23 ಶತಕೋಟಿ ಮೌಲ್ಯದ ಸ್ಮಾರ್ಟ್ ಫೋನ್ ರಫ್ತು ನಿರೀಕ್ಷೆ

ಸ್ಮಾರ್ಟ್ ಫೋನ್ ಉದ್ಯಮದಲ್ಲಿ ಭಾರತದ ಸ್ಮಾರ್ಟ್ ವರ್ಕ್

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಗಾತ್ರ 2023ರಲ್ಲಿ USD 41.31 ಶತಕೋಟಿ ಮೌಲ್ಯದ್ದಾಗಿತ್ತು. ಆದರೀಗ ಬಹು ವಿಸ್ತರಣೆ ಕಂಡಿದೆ. 2032ರ ವೇಳೆಗೆ USD 77.23 ಶತಕೋಟಿ ತಲುಪುವ ನಿಟ್ಟಿನಲ್ಲಿ ಬೃಹತ್ತಾಗಿ ಬೆಳೆಯುತ್ತಿದೆ. ಇದೇ ಪ್ರಗತಿಯಲ್ಲಿ ಸಾಗಿದರೆ ಭವಿಷ್ಯದಲ್ಲಿ ಭಾರತದ ಐ ಫೋನ್, ಸ್ಮಾರ್ಟ್ ಫೋನ್‌ಗಳು ವಿಶ್ವವನ್ನೇ ಅವರಿಸಲಿವೆ.

DK Shivakumar: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಾ. 21ರಂದು ಕಾವೇರಿ ಆರತಿ, ಸಾರ್ವಜನಿಕರಿಗೆ ಮುಕ್ತ ಪ್ರವೇಶ: ಡಿಕೆಶಿ

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾವೇರಿ ಆರತಿ: ಡಿಕೆಶಿ

DK Shivakumar: ʼʼಬೆಂಗಳೂರಿನ ಇತಿಹಾಸದಲ್ಲಿ ಎಂದೂ ಕಾವೇರಿ ಆರತಿ ನಡೆದಿಲ್ಲ. ಮುಂದೆ ಇದಕ್ಕಿಂತ ದೊಡ್ಡ ಕಾರ್ಯಕ್ರಮ ನಡೆಯಬಹುದು. ಆದರೆ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರಿನಲ್ಲಿ ಮುಂದೆಂದೂ ನೀರಿಗೆ ತೊಂದರೆ ಆಗಬಾರದು, ಅಂತರ್ಜಲ ಹೆಚ್ಚಿಸಬೇಕು ಎಂದು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ನಾವು ಪ್ರಾರ್ಥನೆ ಮೂಲಕ ಒಂದು ಪ್ರಯತ್ನ ಮಾಡುತ್ತಿದ್ದೇವೆʼʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮಾ.22, 23ರಂದು ಬೆಂಗಳೂರಿನಲ್ಲಿ ಸೌತ್ ಏಷ್ಯಾ ಇಂಟರ್ನ್ಯಾಷನಲ್ ಪೀಸ್ ಕಾನ್ಫರೆನ್ಸ್/ ಎಸ್ಎಐಪಿಸಿ

22, 23ರಂದು ದಕ್ಷಿಣ ಏಷ್ಯಾ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನ

ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸಲು ವೈವಿಧ್ಯಮಯ ಪಾಲುದಾರರನ್ನು ಒಟ್ಟುಗೂಡಿಸುತ್ತದೆ ಹಾಗೇ ಸಂವಾ ದ, ಸಹಯೋಗ ಮತ್ತು ನೂತನ ಪರಿಹಾರಗಳ ಮೂಲಕ ಶಾಂತಿ ಮತ್ತು ಸಾಮರಸ್ಯದ ಸಮರ್ಪಿತ ಅನ್ವೇಷಣೆಯಲ್ಲಿ ದಕ್ಷಿಣ ಏಷ್ಯಾದಾದ್ಯಂತ ನಾಯಕರು, ಸಮುದಾಯ ಗಳು ಮತ್ತು ನಾವೀನ್ಯ ಕಾರರನ್ನು ಒಗ್ಗೂಡಿಸುವ ಗುರಿಯನ್ನು ಎಸ್ಎಐಪಿಸಿ 2025 ಹೊಂದಿದೆ.

H.D.Kumaraswamy: ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ; ಹೆಸರೇಳದೆ ಕುಮಾರಸ್ವಾಮಿ ಟೀಕಿಸಿದ್ದು ಯಾರನ್ನು?

ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ: ಎಚ್‌ಡಿಕೆ ವಾಗ್ದಾಳಿ

H.D.Kumaraswamy: ʼʼಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!ʼʼ- ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಪೋಸ್ಟ್‌ ಮಾಡಿದ್ದಾರೆ.

Ramdurg news: ಜಗದ್ಗುರು ರೇಣುಕಾಚಾರ್ಯ ಗುರುಕುಲ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿ

ತಾಲೂಕಿನ ಗೊಡಚಿ ಗ್ರಾಮದ ಹತ್ತಿರ ನಿರ್ಮಿಸಲಿರುವ ಶ್ರೀ ಜಗದ್ಗುರು ರೇಣುಕಾ ಚಾರ್ಯ ಗುರುಕುಲ ನಿರ್ಮಾಣಕ್ಕೆ ಕಟಕೋಳ ಎಂ.ಚಂದರಗಿಯ ಶ್ರೀ ವೀರಭದ್ರ ಶಿವಯೋಗಿ ಶಿವಾ ಚಾರ್ಯ ಸ್ವಾಮೀಜಿ ಭೂಮಿಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗುರುಕುಲ ನಿರ್ಮಾಣದಿಂದ ಈ ಭಾಗದಲ್ಲಿ ಹಲವು ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿಯಾಗಲಿದೆ

IPL 2025: ಹಾರ್ದಿಕ್‌ ಪಾಂಡ್ಯ ಬಚಾವ್‌? ಹೊಸ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ!

2025ರ ಐಪಿಎಲ್‌ ಟೂರ್ನಿಗೆ ಹೊಸ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ!

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ನಿಮಿತ್ತ ತನ್ನ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ನಾಯಕರನ್ನು ನಿಷೇಧಿಸಲಾಗುವುದಿಲ್ಲ. ಬಿಸಿಸಿಐ ಇದೀಗ ಹೊಸ ನಿಯಮವನ್ನು ತಂದಿದ್ದು, ಇದರೊಂದಿಗೆ ತಂಡಗಳ ನಾಯಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಬಚಾವ್‌ ಆಗಿದ್ದಾರೆ.

Ramdurg Crime News: ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಮರ ಕಡಿಯುವ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ತಾಲೂಕಿನ ಚೆನ್ನಾ ಪೂರ ಗ್ರಾಮದ ತೋಟದಲ್ಲಿ ನಡೆದಿದೆ. ಘಟನೆಯಲ್ಲಿ ಬಾಗಲಕೋಟ ಜಿಲ್ಲೆ ಲೋಕಾಪೂರ ಗ್ರಾಮದ ನಿವಾಸಿ ಶರೀಫ ಮೈಬುಸಾಬ ಅತ್ತಾರ (47) ಮೃತ ದುರ್ದೈವಿಯಾಗಿದ್ದು, ಮರ ಕಡಿಯುವ ಸಂದರ್ಭ ದಲ್ಲಿ ಹೆಜ್ಜೇನು ಗೂಡು ಕಾಣಿಸಿದೆ.

Karnataka Bandh: ಮಾ. 22ರ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ; ಬೆಳಗಿನ ಶೋ ಇಲ್ಲ

ಮಾ. 22ರ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ

Film Chamber of Commerce: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾ. 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಅಂದು ಬೆಳಗಿನ ಶೋ ರದ್ದಾಗಲಿದೆ.

IPL 2025: ಆರ್‌ಸಿಬಿಯಿಂದ ಹೊರಬಂದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಮೊಹಮ್ಮದ್‌ ಸಿರಾಜ್‌!

ಆರ್‌ಸಿಬಿಯಿಂದ ಹೊರಬಂದ ಬಗ್ಗೆ ಮೊಹಮ್ಮದ್‌ ಸಿರಾಜ್‌ ಭಾವುಕ!

Mohammed Siraj emotional on leaving RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ತೊರೆದಿರುವ ಬಗ್ಗೆ ಗುಜರಾತ್‌ ಟೈಟನ್ಸ್‌ ವೇಗಿ ಮೊಹಮ್ಮದ್‌ ಸಿರಾಜ್‌ ಭಾವುಕರಾಗಿದ್ದಾರೆ. ಆರ್‌ಸಿಬಿ ತಂಡದಲ್ಲಿ ಕಠಿಣ ಸಂದರ್ಭಗಳಲ್ಲಿ ವಿರಾಟ್‌ ಭಾಯ್‌ ನನಗೆ ಸಾಕಷ್ಟು ಬೆಂಬಲ ನೀಡಿದ್ದರು. ಆದರೆ, ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ಕೂಡ ಅತ್ಯುತ್ತಮವಾಗಿದೆ ಎಂದು ಮೊಹಮ್ಮದ್‌ ಸಿರಾಜ್‌ ಹೇಳಿದ್ದಾರೆ.

IPL 2025: ಆರ್‌ಸಿಬಿ vs ಕೆಕೆಆರ್‌ ನಡುವಣ ಪಂದ್ಯಕ್ಕೆ ಮಳೆ ಭೀತಿ! ಹವಾಮಾನ ವರದಿ ಹೇಗಿದೆ?

IPL 2025: ಕೆಕೆಆರ್‌ ವಿರುದ್ಧ ಆರ್‌ಸಿಬಿ ಪಂದ್ಯಕ್ಕೆ ಮಳೆ ಭೀತಿ!

RCB vs KKR Weather Report: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಮಾರ್ಚ್‌ 22 ರಂದು ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೋಲ್ಕತಾದ ಹವಾಮಾನ ವರದಿಯನ್ನು ಇಲ್ಲಿ ವಿವರಿಸಲಾಗಿದೆ.

Summer Travel Fashion: ಉಲ್ಲಾಸ ನೀಡುವಂತಹ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ ನಿಮ್ಮದಾಗಲಿ

ಉಲ್ಲಾಸ ನೀಡುವಂತಹ ಸಮ್ಮರ್‌ ಟ್ರಾವೆಲ್‌ ಫ್ಯಾಷನ್‌ ನಿಮ್ಮದಾಗಲಿ

Summer Travel Fashion: ಬೇಸಿಗೆಯಲ್ಲಿ ಮಾನಿನಿಯರು ಪ್ರಯಾಣ ಮಾಡಬೇಕಾದ ಸಂದರ್ಭ ಬಂದಾಗ ಆದಷ್ಟೂ ಬಿಸಿಲ ಝಳಕ್ಕೆ ಹೊಂದುವಂತಹ ಕಂಫರ್ಟಬಲ್‌ ಕೂಲ್‌ ಫ್ಯಾಷನ್‌ ತಮ್ಮದಾಗಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆರಾಮದಾಯಕವಲ್ಲದ ಪ್ರಯಾಣ ನಿಮ್ಮದಾಗಬಹುದು. ಇದಕ್ಕಾಗಿ ಯಾವ ಬಗೆಯ ಫ್ಯಾಷನ್‌ವೇರ್ಸ್‌ ಚೂಸ್‌ ಮಾಡಬೇಕು? ಯಾವುದನ್ನು ಆವಾಯ್ಡ್‌ ಮಾಡಬೇಕು? ಎಂಬುದರ ಬಗ್ಗೆ ಫ್ಯಾಷನ್‌ ಎಕ್ಸ್‌ಪರ್ಟ್ಸ್‌ ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.

Pralhad Joshi: ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯಕ್ಕೆ ಕರ್ನಾಟಕ ಪ್ರಯೋಗಾಲಯ: ಜೋಶಿ ಆರೋಪ

ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯಕ್ಕೆ ಕರ್ನಾಟಕ ಪ್ರಯೋಗಾಲಯ: ಜೋಶಿ

Pralhad Joshi: ಸಂವಿಧಾನದ 15(1)ರ ಅಡಿಯಲ್ಲಿ ಗುತ್ತಿಗೆಯಲ್ಲಿ ಧರ್ಮಾಧಾರಿತ ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದೆ. ಆದರೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತೀರಾ ತುಷ್ಟೀಕರಣ ರಾಜಕೀಯಕ್ಕೆ ಇಳಿದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

K.N. Rajanna: 48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ: ಸಚಿವ ರಾಜಣ್ಣ ಶಾಕಿಂಗ್‌ ಹೇಳಿಕೆ

48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ: ಸಚಿವ ರಾಜಣ್ಣ

Honey Trap: ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು ಸದನದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಜತೆಗೆ ಈ ಬಗ್ಗೆ ಸೂಕ್ತ ತನಿಖೆ ಆಗಬೇಕು, ಸತ್ಯಾಸತ್ಯತೆ ಹೊರಬರಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ್​​ ಅವರಲ್ಲಿ ಮನವಿ ಮಾಡಿದ್ದಾರೆ.

RR vs SRH: ಜೋಫ್ರಾ ಆರ್ಚರ್‌ ಇನ್‌! ರಾಜಸ್ಥಾನ್‌ ರಾಯಲ್ಸ್‌ ಸಂಭಾವ್ಯ ಪ್ಲೇಯಿಂಗ್‌ XI ವಿವರ!

ಎಸ್‌ಆರ್‌ಎಚ್‌ ಪಂದ್ಯಕ್ಕೆ ರಾಜಸ್ಥಾನ್‌ ರಾಯಲ್ಸ್‌ ಸಂಭಾವ್ಯ ಪ್ಲೇಯಿಂಗ್‌ XI

Rajasthan Royals Predicted Playing XI: ನಿರೀಕ್ಷಿತ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಮಾರ್ಚ್‌ 22 ರಂದು ಆರಂಭವಾಗಲಿದೆ. ಆದರೆ, ರಾಜಸ್ಥಾನ್‌ ರಾಯಲ್ಸ್‌ ತಂಡ ಮಾರ್ಚ್‌ 23 ರಂದು ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ಕಾದಾಟ ನಡೆಸಲಿದೆ. ಈ ಪಂದ್ಯಕ್ಕೆ ಆರ್‌ಆರ್‌ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಅನ್ನು ವಿವರಿಸಲಾಗಿದೆ.

Exam Anxiety: ನಾಳೆಯಿಂದ SSLC ಎಕ್ಸಾಂ; ಪರೀಕ್ಷೆ ಬಗ್ಗೆ ಭಯ, ಆತಂಕವೇ? ಈ ಟಿಪ್ಸ್ ಫಾಲೋ ಮಾಡಿ

ನಾಳೆಯಿಂದ SSLC ಎಕ್ಸಾಂ-ಪರೀಕ್ಷೆ ಬಗ್ಗೆ ಭಯ, ಆತಂಕ ಬಿಟ್ಟು ಬಿಡಿ?

ಪರೀಕ್ಷೆಯ ಭಯ ಕಾಡಿದಾಗ ಮಕ್ಕಳಲ್ಲಿ ಏಕಾಗ್ರತೆ ಕೊರತೆ, ನಿದ್ರಾಹೀನತೆ, ಉಸಿರಾಟದ ತೊಂದರೆ‌ ಇತ್ಯಾದಿ ಹಲವು ಸಮಸ್ಯೆಗಳು ಕಾಡುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಭಯ ಪಡದೇ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಪರೀಕ್ಷೆಗೂ ಮೊದಲು ವಿದ್ಯಾರ್ಥಿಗಳು ಶಾಂತತೆ ಕಾಪಾಡಿಕೊಳ್ಳಲು ಮತ್ತು ಭಾವನೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಕೆಲವೊಂದು ಟಿಪ್ಸ್‌ ಪಾಲಿಸಬೇಕು.

BBMP Amendment Bill 2025: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

ʼಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ʼಕ್ಕೆ ಅಂಗೀಕಾರ

BBMP Amendment Bill 2025: ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು ಸಹ ಅಭಿವೃದ್ದಿ ಮಾಡಿದ್ದೇವೆ. ನಿವೇಶನಗಳನ್ನು ಮಾಡಿ ಹಂಚಿದ್ದರೂ ಸಹ ಕಂದಾಯ ದಾಖಲೆಗಳಲ್ಲಿ ಇನ್ನೂ ಭೂ ಮಾಲೀಕರ ಹೆಸರು ನಮೂದಾಗಿಯೇ ಇದೆ. ಈ ಭೂ ದಾಖಲೆಗಳನ್ನು ನವೀಕರಣ ಮಾಡಬೇಕಿದೆ. ಖಾಸಗಿ ಬಡಾವಣೆಗಳ ರಸ್ತೆಗಳನ್ನು ಸರ್ಕಾರಿ ರಸ್ತೆಗಳೆಂದು ಘೋಷಣೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

IPL 2025: ಸಿಎಸ್‌ಕೆಯನ್ನು ಹೊರಗಿಟ್ಟು ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬಲ್ಲ 4 ತಂಡಗಳನ್ನು ಆರಿಸಿದ ಎಬಿಡಿ!

IPL 2025: ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವ 4 ತಂಡಗಳನ್ನು ಆರಿಸಿದ ಎಬಿಡಿ!

ABD Picks 4 Favourites To Reach IPL 2025 Playoffs: ಮುಂಬರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬಲ್ಲ ನಾಲ್ಕು ತಂಡಗಳನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ಆರ್‌ಸಿಬಿ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಆಯ್ಕೆ ಮಾಡಿದ್ದಾರೆ. ಆದರೆ, ಐದು ಬಾರಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕಡೆಗಣಿಸುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.

DK Shivakumar: ಕೃಷ್ಣಾ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಕೋಟಿ ರೂ. ಬೇಕು: ಡಿ.ಕೆ.ಶಿವಕುಮಾರ್

ಕೃಷ್ಣಾ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಕೋಟಿ ರೂ. ಬೇಕು: ಡಿಕೆಶಿ

ಬೊಮ್ಮಾಯಿ ಅವರ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣಾ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು87,818 ಕೋಟಿ ರೂ. ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

PES University: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಪ್ರೊ. ಜವಾಹರ್ ದೊರೆಸ್ವಾಮಿ ನೇಮಕ

ಪ್ರೊ. ಜವಾಹರ್ ದೊರೆಸ್ವಾಮಿ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ

Prof. Jawahar Doreswamy: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಪ್ರೊ. ಜವಾಹರ್ ದೊರೆಸ್ವಾಮಿ ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ. ಅವರು ಮಾ. 21ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಪೂರ್ಣ ಗುಣಮಟ್ಟದ ಶಿಕ್ಷಣದ ಪ್ರಬಲ ಪ್ರತಿಪಾದಕ ಪ್ರೊ. ಜವಾಹರ್ ದೊರೆಸ್ವಾಮಿ, ಪ್ರಮುಖ ಕಾರ್ಯಕ್ಷಮತೆ ಸೂಚಕ ಆಧಾರಿತ ನಿರ್ವಹಣೆ ಮತ್ತು ಮಾನದಂಡದ ಮೇಲೆ ಗಮನ ಹರಿಸುವ ಮೂಲಕ ಶೈಕ್ಷಣಿಕ ಅನುಭವವನ್ನು ಹೆಚ್ಚಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Murder Case: ಲವ್ವರ್‌ ಜತೆಗೂಡಿ ಪತಿಗೇ ಮುಹೂರ್ತ ಫಿಕ್ಸ್‌ ಮಾಡಿದ ಪತ್ನಿ; ಬೈಕ್‌ನಲ್ಲಿ ಡೆಡ್‌ಬಾಡಿ ಸಾಗಿಸಿದ ಪಾಪಿಗಳು- ವಿಡಿಯೊ ಇದೆ

ಪತಿಯನ್ನು ಕೊಂದು ಬೈಕ್‌ನಲ್ಲಿ ಹೆಣ ಸಾಗಿಸಿದ ಪಾತಕಿ

ಅನೈತಿಕ ಸಂಬಂಧದ ಬಗ್ಗೆ ಪತಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು (Murder Case) ಗೋಣಿಚೀಲದಲ್ಲಿ ಶವವನ್ನು ಕಟ್ಟಿಕೊಂಡು ಬೈಕಿನಲ್ಲಿ ಸಾಗಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಪರಾರಿಯಾದ ಪ್ರಿಯಕರನಿಗಾಗಿ ಹುಡುಕಾಟ ಶುರುಮಾಡಿದ್ದಾರೆ.

Honey Trap: ರಾಜ್ಯ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್‌ ಪ್ರಯತ್ನ: ಬಾಂಬ್‌ ಸಿಡಿಸಿದ ಸತೀಶ್‌ ಜಾರಕಿಹೊಳಿ

ರಾಜ್ಯ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್‌ ಪ್ರಯತ್ನ: ಸತೀಶ್‌ ಜಾರಕಿಹೊಳಿ

Satish Jarkiholi: ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಪ್ರಯತ್ನ ನಡೆಸಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ''ಪ್ರಭಾವಿ ಸಚಿವರ ಮೇಲೆ 2 ಬಾರಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ. ಆ ಮೂಲಕ ಸಚಿವರ ತೇಜೋವಧೆ ಮಾಡಲು ಯತ್ನಿಸಲಾಗಿದೆ. ಆದರೆ ಇದನ್ನು ಸಕಾಲದಲ್ಲಿ ವಿಫಲಗೊಳಿಸಲಾಗಿದೆʼʼ ಎಂದು ತಿಳಿಸಿದ್ದಾರೆ.