KSRTC Bus: ಯುಗಾದಿ, ರಂಜಾನ್ ಹಬ್ಬಗಳಿಗೆ 2000 ಹೆಚ್ಚುವರಿ ಬಸ್ ಹೊರಡಿಸಿದ ಕೆಎಸ್ಆರ್ಟಿಸಿ
ಮಾರ್ಚ್ 28ರಿಂದ 30ರವರೆಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸಲು ಅಸ್ತಿತ್ವದಲ್ಲಿರುವ ವೇಳಾಪಟ್ಟಿಗಳ ಜೊತೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್ಗಳನ್ನು ಓಡಿಸಲು ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಯುಗಾದಿ (Ugadi) ಮತ್ತು ರಂಜಾನ್ (ramzan) ಹಬ್ಬಗಳಿಗೆ (festivals) 2,000 ಹೆಚ್ಚುವರಿ ಬಸ್ಗಳನ್ನು ಓಡಿಸುವುದಾಗಿ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC Bus) ಬುಧವಾರ ತಿಳಿಸಿದೆ. ಮಾರ್ಚ್ 30 ಮತ್ತು 31ರಂದು ಕ್ರಮವಾಗಿ ಯುಗಾದಿ ಮತ್ತು ರಂಜಾನ್ (ಈದ್ ಉಲ್-ಫಿತರ್) ಹಬ್ಬಗಳು ನಡೆಯಲಿವೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್ 28ರಿಂದ 30ರವರೆಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸಲು ಅಸ್ತಿತ್ವದಲ್ಲಿರುವ ವೇಳಾಪಟ್ಟಿಗಳ ಜೊತೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್ಗಳನ್ನು ಓಡಿಸಲು ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಇರಲಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಸಾರಿಗೆ ಸಂಸ್ಥೆಯ ಪ್ರತಿಷ್ಠಿತ ಬಸ್ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.
ಮಾರ್ಚ್ 31ರಂದು ರಾಜ್ಯ ಮತ್ತು ಅಂತಾರಾಜ್ಯ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ಗಳನ್ನು ಓಡಿಸಲಾಗುವುದು ಎಂದು ಕೆಎಸ್ಆರ್ ಟಿಸಿ ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳ ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: KSRTC news: ರಾಜ್ಯದ ಹೆಮ್ಮೆಯ ಕೆಎಸ್ಆರ್ಟಿಸಿಗೆ 9 ರಾಷ್ಟ್ರೀಯ ಪ್ರಶಸ್ತಿ!