Koppal Murder: ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
Koppal Murder: ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್ನಲ್ಲಿ ಘಟನೆ ನಡೆದಿದೆ. ಬೇಕರಿಯಲ್ಲಿ ಸಿನಿಮಾ ಸ್ಟೈಲ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಪ್ರಕರಣ ಸಂಬಂಧ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.


ಕೊಪ್ಪಳ: ಜಿಲ್ಲೆಯ ತಾವರಗೇರಾ ಪಟ್ಟಣದಲ್ಲಿ ಭಾನುವಾರ ಚೆನ್ನಪ್ಪ ನಾರಿನಾಳ ಎಂಬುವವರ ಭೀಕರ ಹತ್ಯೆ ನಡೆದಿತ್ತು. ಕೇವಲ ಎರಡೇ ನಿಮಿಷದಲ್ಲಿ ದುಷ್ಕರ್ಮಿಗಳು ಬಂದು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದರು. ಈ ಕೊಲೆಯ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಹಳೇ ದ್ವೇಷ ಹಾಗೂ ಆಸ್ತಿ ವಿಚಾರ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತು. ಲಾಂಗ್, ಮಚ್ಚಿನಿಂದ ಅಟ್ಟಾಡಿಸಿಕೊಂಡು ಹೋಗಿ ಆರೋಪಿಗಳು ಚೆನ್ನಪ್ಪನನ್ನು ಕೊಲೆ ಮಾಡಿದ್ದರು. ಈ ಪ್ರಕರಣ ಸಂಬಂಧ 10 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಬೇಕರಿಯಲ್ಲಿ ಸಿನಿಮಾ ಸ್ಟೈಲ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್ನಲ್ಲಿ ಈ ಘಟನೆ ನಡೆದಿದೆ. ಎಲ್ ಜೆ ಅಯ್ಯಂಗಾರ್ ಬೇಕರಿಯಲ್ಲಿ ಮುಂಭಾಗದಲ್ಲಿ ಕೊಲೆ ನಡೆದಿದ್ದು, ಬೇಕರಿಯ ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ.
ಚೆನ್ನಪ್ಪ ನಾರಿನಾಳನನ್ನು ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಿರುವುದು ಬೇಕರಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇವಲ ಎರಡೇ ನಿಮಿಷದಲ್ಲಿ ಆರೋಪಿಗಳು ಆತನನ್ನು ಮರ್ಡರ್ ಮಾಡಿ ಪರಾರಿಯಾಗಿದ್ದಾರೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ರಕ್ಷಣೆಗಾಗಿ ಚೆನ್ನಪ್ಪ ನಾರಿನಾಳ ಬೇಕರಿಗೆ ಬಂದಿದ್ದಾರೆ. ಆದರೂ ಆತನನ್ನು ಬಿಡದ ದುಷ್ಕರ್ಮಿಗಳು ಚೆನ್ನಪ್ಪನನ್ನ ಬೆನ್ನುಹತ್ತಿ ಬಂದು ಹತ್ಯೆ ಮಾಡಿದ್ದಾರೆ.
ಮೃತ ಚನ್ನಪ್ಪ ಹುಸೇನಪ್ಪ ನಾರಿನಾಳ ಕುಟುಂಬಸ್ಥರ ದೂರಿನನ್ವಯ 10 ಜನರ ವಿರುದ್ಧ FIR ದಾಖಲಿಸಲಾಗಿತ್ತು. ರವಿ ನಾರಿನಾಳ, ಪ್ರದೀಪ ನಾರಿನಾಳ, ಮಂಜುನಾಥ ನಾರಿನಾಳ, ನಾಗರಾಜ ನಾರಿನಾಳ್, ಶ್ಯಾಮಣ್ಣ ನಾರಿನಾಳ್ ಸೇರಿ ಹತ್ತು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಇದರಲ್ಲಿ ಹಳೇ ದ್ವೇಷ ಮತ್ತು ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದರು. ನಂತರ ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ, ತಾವರಗೇರಾ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಸದ್ಯ ಕೊಲೆ ಪ್ರಕರಣದಲ್ಲಿ 7 ಮಂದಿ ಬಂಧನವಾಗಿದೆ. ಎ1 ರವಿ, ಎ2 ಪ್ರದೀಪ್ , ಎ3 ಮಂಜುನಾಥ್ , ಎ4 ನಾಗರಾಜ್ , ಎ5 ಮಂಜುನಾಥ್, ಎ6 ಗೌತಮ, ಎ7 ಪ್ರಮೋದ್ ಎಂಬ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸುದ್ದಿಯನ್ನು ಓದಿ | Harassment: ಹಿಂದೂ ಕಾರ್ಯಕರ್ತನಿಂದ ಯುವತಿಗೆ ಕಿರುಕುಳ, ಮದುವೆಗೆ ಅಡ್ಡಿ: ದೂರು