Actor Darshan: ರೆಬೆಲ್ ಸ್ಟಾರ್ ಅಂಬರೀಶ್ ಬರ್ತ್ಡೇಗೆ ಭಾವುಕ ರೀತಿಯಲ್ಲಿ ವಿಶ್ ಮಾಡಿದ ನಟ ದರ್ಶನ್
ಈ ಹುಟ್ಟುಹಬ್ಬದ ದಿನದಂದು (Ambareesh birthday) ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್ ಸ್ಟಾರ್ ಎಂದಿದ್ದಾರೆ ನಟ ದರ್ಶನ್ (Actor Darshan).

ಅಂಬರೀಶ್, ದರ್ಶನ್

ಬೆಂಗಳೂರು: ಇಂದು ರೆಬೆಲ್ಸ್ಟಾರ್ ಅಂಬರೀಶ್ (Ambareesh birthday) ಅವರ ಹುಟ್ಟುಹಬ್ಬವಾಗಿದ್ದು, ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ವಿಶ್ ಮಾಡಿ ನಟ ದರ್ಶನ್ (Actor Darshan) ಟ್ವೀಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ದರ್ಶನ್ ಜೈಲುಪಾಲಾದ ಬಳಿಕ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೂ ದರ್ಶನ್ ಅವರಿಗೂ ಬಾಂಧವ್ಯ ಅಷ್ಟೇನೂ ಚೆನ್ನಾಗಿಲ್ಲವಾದರೂ, ತಮ್ಮನ್ನು ಮನೆಮಗನೆಂದೇ ಭಾವಿಸಿದ್ದ ಅಂಬರೀಶ್ ಅವರನ್ನು ನೆನೆಯುವುದನ್ನು ದರ್ಶನ್ ಮರೆತಿಲ್ಲ.
‘ತಂದೆ ಸಮಾನರಾದ ಅಂಬಿ ಅಪ್ಪಾಜಿರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ. ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್ ಸ್ಟಾರ್’ ಎಂದಿದ್ದಾರೆ ನಟ ದರ್ಶನ್.
ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ.
— Darshan Thoogudeepa (@dasadarshan) May 29, 2025
ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್… pic.twitter.com/9YEG3umrQ9
ಅಂಬರೀಶ್ ಇದ್ದಾಗ ಅವರ ಹುಟ್ಟುಹಬ್ಬವನ್ನು ಬಲು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು, ದರ್ಶನ್ ಸಹ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು. ಅಂಬರೀಶ್ ಹಾಗೂ ದರ್ಶನ್ ಪರಸ್ಪರ ಬಹಳ ಆತ್ಮೀಯರಾಗಿದ್ದರು. ದರ್ಶನ್ ಹಾಗೂ ಅಂಬರೀಶ್ ಕೆಲವಾರು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ ಸಹ. ಅಂಬರೀಶ್ ಅವರ ‘ಉತ್ತರಾಧಿಕಾರಿ’ ಎಂಬಂತೆ ದರ್ಶನ್ ಅವರನ್ನು ಕಾಣಲಾಗುತ್ತಿತ್ತು.
ಅಂಬರೀಶ್ ಕಾಲವಾದ ಬಳಿಕವೂ ಅವರ ಕುಟುಂಬದೊಟ್ಟಿಗೆ ಆತ್ಮೀಯ ಬಂಧವನ್ನು ದರ್ಶನ್ ಮುಂದುವರಿಸಿದ್ದರು. ಅಭಿಷೇಕ್ ಅಂಬರೀಶ್ ಅವರ ಮೊದಲ ಸಿನಿಮಾಕ್ಕೆ ಸಾಕಷ್ಟು ಸಹಾಯ ಮಾಡಿದ್ದರಲ್ಲದೆ, ಅತಿಥಿ ಪಾತ್ರದಲ್ಲಿಯೂ ನಟಿಸಿದ್ದರು. ಸುಮಲತಾ ಅವರು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಮುಖ ಪಾತ್ರ ವಹಿಸಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲು ಸುಮಲತಾ ಅವರ ರಾಜಕೀಯ ಕಾರ್ಯಕ್ರಮಗಳಲ್ಲಿಯೂ ದರ್ಶನ್ ಕಾಣಿಸಿಕೊಂಡಿದ್ದರು. ಆದರೆ ರೇಣುಕಾ ಸ್ವಾಮಿ ಪ್ರಕರಣದ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಹೇಳಲಾಗಿದೆ.