ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Davanagere News: ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಬಿಟ್ಟು 55 ವರ್ಷದ ಅತ್ತೆ ಜತೆ ಅಳಿಯ ಎಸ್ಕೇಪ್‌!

Davanagere News: ಮಗಳಿಗೆ ಮದುವೆ ಮಾಡಿಕೊಟ್ಟ 15 ದಿನಕ್ಕೆ 25ರ ಅಳಿಯನ ಜತೆ 55 ವರ್ಷದ ಅತ್ತೆ ಅಕ್ರಮ ಸಂಬಂಧ ಬಯಲಾಗಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮಗೆ ನ್ಯಾಯ ಬೇಕು ಎಂದು ಸಂತ್ರಸ್ತ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಬಿಟ್ಟು ಅತ್ತೆ ಜತೆ ಅಳಿಯ ಎಸ್ಕೇಪ್‌!

Profile Prabhakara R Jun 27, 2025 3:50 PM

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಪತ್ನಿಯನ್ನು ಬಿಟ್ಟು ಅತ್ತೆ ಜತೆ ಅಳಿಯ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ (Davanagere News) ನಡೆದಿದೆ. ಮಗಳಿಗೆ ಮದುವೆ ಮಾಡಿಕೊಟ್ಟ 15 ದಿನಕ್ಕೆ 25ರ ಅಳಿಯನ ಜತೆ 55 ವರ್ಷದ ಅತ್ತೆ ಅಕ್ರಮ ಸಂಬಂಧ ಬಯಲಾಗಿದೆ. ಹೀಗಾಗಿ ಅತ್ತೆಯೊಂದಿಗೆ ಅಳಿಯ ಪರಾರಿಯಾಗಿದ್ದು, ಪತ್ನಿ ಪೊಲೀಸ್‌ ಠಾಣೆಯಲ್ಲಿ ಕಣ್ಣೀರಿಟ್ಟಿದ್ದಾಳೆ. ಶಾಂತಾ (55) ಎಂಬ ಮಹಿಳೆ ಜತೆ ಗಣೇಶ್‌ (25) ಎಸ್ಕೇಪ್‌ ಆಗಿದ್ದಾನೆ. ಗಣೇಶ್‌ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದವನು. ಮೇ 2ರಂದು ಚನ್ನಗಿರಿ ಬಸ್ ನಿಲ್ದಾಣದಲ್ಲಿ ಪತ್ನಿಯನ್ನು ಬಿಟ್ಟು ಅತ್ತೆಯ ಜತೆ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಶಾಂತಾ ಎಂಬ ಮಹಿಳೆ 13 ವರ್ಷಗಳ ಹಿಂದೆ ನಾಗರಾಜ್ ಎಂಬಾತನನ್ನು 2ನೇ ಮದುವೆ ಆಗಿದ್ದಳು. ನಾಗರಾಜ್ ಮೊದಲ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಅವರಲ್ಲಿ ಒಬ್ಬಳಿಗೆ ಮದುವೆ ಮಾಡಿದ್ದಾರೆ. ಮಲತಾಯಿ ಶಾಂತಾಳೇ ಹುಡುಗನನ್ನು ಹುಡುಕಿ ಮದುವೆ ಮಾಡಿದ್ದಳು. ಬೇಡ ಎಂದರೂ ಬಿಡದೆ ಅದೇ ಹುಡುಗನ ಜತೆ ಮದುವೆ ಮಾಡಿಸಿದ್ದಳು.

ಆ ಹುಡುಗ ಬೇಡ, ನಾನು ಓದಲು ಹಾಸ್ಟೆಲ್​ಗೆ ಹೋಗುವೆ ಎಂದರೂ ಬಿಡದ ಶಾಂತಾ, ಮಲ ಮಗಳನ್ನು ಒಪ್ಪಿಸಿ ಗಣೇಶ್ ಎಂಬ ಯುವಕನ ಜತೆ ಮದುವೆ ಮಾಡಿಸಿದ್ದಳು ಎನ್ನಲಾಗಿದೆ. ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಗಣೇಶ್ ಜತೆ ನಾಗರಾಜ್​ ಮಗಳು ಹೇಮಾ ಮದುವೆ ಅದ್ಧೂರಿಯಾಗಿಯೇ ನಡೆದಿತ್ತು.

ಮದುವೆಯಾದ 15 ದಿನಕ್ಕೆ ಅಳಿಯನ ಜತೆ ಅತ್ತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗುತ್ತಿದೆ. ಮೊಬೈಲ್‌ನಲ್ಲಿ ಅಶ್ಲೀಲ ಮೆಸೇಜ್, ಫೋಟೋ ನೋಡಿ ಮಗಳು ಶಾಕ್ ಆಗಿದ್ದಾಳೆ. ಗಂಡ ಹಾಗೂ ಮಲತಾಯಿಯ ಸರಸ ಕಂಡು ಮನೆಯವರು ಬೆಚ್ಚಿಬಿದ್ದಿದ್ದಾರೆ. ಇವರ ಅಕ್ರಮ ಸಂಬಂಧ ಬೆಳಕಿಗೆ ಬರುತ್ತಿದ್ದಂತೆ ಹಣ, ಆಭರಣ ಕದ್ದು ಅತ್ತೆ ಹಾಗೂ ಅಳಿಯ ಇಬ್ಬರೂ ಎಸ್ಕೇಪ್ ಆಗಿದ್ದಾರೆ.

ಗಣೇಶ್ ಹೆಂಡತಿ ಹೇಮಾಳನ್ನು ಚನ್ನಗಿರಿ ಬಸ್ ಸ್ಟಾಪ್‌ನಲ್ಲಿ ಬಿಟ್ಟು ಅತ್ತೆ ಜತೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೇ ನ್ಯಾಯ ಕೊಡಿಸುವ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಸಿಐಡಿ ರಿಲೀಫ್‌

ನನ್ನ ಮಲತಾಯಿ ಬಲವಂತವಾಗಿ ಮದುವೆ ಮಾಡಿಸಿದ್ದಾಳೆ. ಆಕೆ ಎರಡು ವರ್ಷದಿಂದ ಗಣೇಶ್ ಜತೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ನನ್ನ ಮದುವೆಯಾದ 15 ದಿನಕ್ಕೆ ಬಯಲಾಗಿದೆ. ಅವರಿಗೆ ಸಾಲ ನೀಡಿದವರು ನಮ್ಮನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಸಂತ್ರಸ್ತ ಯುವತಿ ಹೇಮಾ ಅಳಲು ತೋಡಿಕೊಂಡಿದ್ದಾಳೆ.

ಅಡುಗೆ ವಿಚಾರಕ್ಕೆ ತಗಾದೆ ತೆಗೆದು ತುರಿಮಣೆಯಿಂದ ಪತ್ನಿಯನ್ನು ಕೊಂದ ಪತಿ

ರಾಮನಗರ: ಅಡುಗೆ ಮಾಡುವ ವಿಚಾರಕ್ಕೆ ತಗಾದೆ ತೆಗೆದ ಪತಿಯೊಬ್ಬ (Husband) ಪತ್ನಿಯನ್ನು (Wife) ತುರಿಮಣೆಯಿಂದ ಹೊಡೆದು ಹತ್ಯೆ (Murder Case) ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಯಾದ ಮಹಿಳೆ. ರಂಗಯ್ಯ ಕೊಲೆ ಮಾಡಿದ ಆರೋಪಿ. ಹತ್ಯೆಯ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನ

ಕಲಬುರಗಿ: ಕಲಬುರಗಿಯಲ್ಲಿ ಇನ್ನೊಂದು ಬರ್ಬರ ಘಟನೆ ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಾರ್ವಜನಿಕರ ಎದುರೇ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಲಬುರಗಿ ಜಿಲ್ಲೆಯ ಅಫ್ಜಲ್‌ಪುಪುರ ತಾಲೂಕಿನ ಹವಳಗಾ ಬಳಿ ಘಟನೆ ನಡೆದಿದೆ. ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್‌ಗಳಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕತ್ತು ಕೊಯ್ದುಕೊಂಡ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಪರಿಚಿತ ವ್ಯಕ್ತಿಯ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ನಿನ್ನೆ ತಾನೆ ಕಲಬುರಗಿಯಲ್ಲಿ ಢಾಬಾ ಮಾಲಿಕ ಸೇರಿದಂತೆ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು.