ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆ :ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಕಾರ್ಯಕ್ರಮವು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಸುವ ಮೂಲಕ ಆಚರಣೆ ಮಾಡಬೇಕಾಗಿದ್ದು, ಈ  ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ  ಪಿ. ಎನ್. ರವೀಂದ್ರ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆ

ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು.

Profile Ashok Nayak Jun 3, 2025 10:12 PM

ಚಿಕ್ಕಬಳ್ಳಾಪುರ : ಜೂನ್ ೨೧ ರಂದು ೧೧ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಕಾರ್ಯಕ್ರಮವು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಸುವ ಮೂಲಕ ಆಚರಣೆ ಮಾಡಬೇಕಾಗಿದ್ದು, ಈ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ  ಪಿ. ಎನ್. ರವೀಂದ್ರ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ  ಮಂಗಳವಾರ ನಡೆದ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಇದನ್ನೂ ಓದಿ: Chikkanayakanahalli News: ಸಂಪೂರ್ಣ ಅಧಿಕಾರ ನಿಮ್ಮ ಕೈಯಲ್ಲಿದೆ, ಪಕ್ಷಾತೀತವಾಗಿ ಪಂಚಾಯಿತಿಗಳ ಅಭಿವೃದ್ಧಿಗೆ ಒತ್ತು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು

ಈ ವರ್ಷ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಈ ಬಾರಿಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ, ಸಾರ್ವಜನಿಕರು  ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು ಹಾಗೂ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು.

ಜೂನ್ 21ರ  ಬೆಳಿಗ್ಗೆ ೭ ಗಂಟೆಗೆ ಯೋಗ ಕಾರ್ಯಕ್ರಮ ಪ್ರಾರಂಭವಾಗಿಲಿದ್ದು, ಸದರಿ ಕಾರ್ಯ ಕ್ರಮಗಳನ್ನು ಯಶಸ್ವಿಯಾಗಿ ಹಾಗೂ ಸಮರ್ಪಕವಾಗಿ ಆಯೋಜಿಸುವ ಸಂಬಂಧ ಅಗತ್ಯ ಪೂರ್ವಸಿದ್ದತೆಗಳನ್ನು ಕೈಗೊಳ್ಳುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಪಹಾರ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆಗೆ ವ್ಯವಸ್ಥೆ, ವಿದ್ಯುತ್ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ಸಂಬAಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಆಯುಷ್ ಇಲಾಖೆಯ ಅಧಿಕಾರಿಗಳು ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯಕ್ರಮಕ್ಕೆ ೧೦೦೦ ಕ್ಕಿಂತಲೂ ಹೆಚ್ಚಿನ ಜನರನ್ನು ಸೇರಿಸುವ  ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಹಾಗೂ ಇತರ ಇಲಾಖೆಯವರು ಸಹಕಾರ ನೀಡಲು ಸಂಬAಧಪಟ್ಟವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಂ.ಎಲ್ ಸಂದರರಾಜ, ಜಿಲ್ಲಾ ಯೋಗ ನೋಡಲ್ ಅಧಿಕಾರಿ ಡಾ. ದಿವ್ಯ ಲಕ್ಷ್ಮಿ, ವೈದ್ಯಾಧಿಕಾರಿ ಡಾ. ಅವಿನಾಶ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಕೃಷ್ಣಪ್ರಸಾದ್, ಪತಾಂಜಲಿ ಯೋಗ ಸಂಸ್ಥೆಯ ಜಿ ಗೋವಿಂದ, ಆಯುಷ್ ಇಲಾಖೆ ಸಿಬ್ಬಂದಿ ಜಿ.ಆರ್ ವಿಜಯ್ ಕುಮಾರ್, ಯೋಗ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.