Champions Trophy: ರವೀಂದ್ರ ಜಡೇಜಾ ಸ್ಥಾನದ ಬಗ್ಗೆ ಎಸ್‌ ಬದ್ರಿನಾಥ್ ಆಕ್ಷೇಪ!

S Badrinath On Ravindra Jadeja's selection: ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಹಾಗೂ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾಗೆ ಸ್ಥಾನ ನೀಡಿದ ಬಗ್ಗೆ ತಮಿಳುನಾಡು ಮಾಜಿ ನಾಯಕ ಎಸ್‌ ಬದ್ರಿನಾಥ್‌ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

Ravindra Jadeja-S Badrinath
Profile Ramesh Kote Feb 6, 2025 4:28 PM

ನವದೆಹಲಿ: ಟೀಮ್ ಇಂಡಿಯಾದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭಾರತ ತಂಡದಲ್ಲಿ ಸ್ಥಾನ ನೀಡಿರುವುದು ನನಗೆ ಅಚ್ಚರಿಯನ್ನು ತಂದಿದೆ ಎಂದು ಮಾಜಿ ಕ್ರಿಕೆಟಿಗ ಎಸ್‌ ಬದ್ರಿನಾಥ್ ತಿಳಿಸಿದ್ದಾರೆ. 2023ರ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯದ ನಂತರ ರವೀಂದ್ರ ಜಡೇಜಾ 50 ಓವರ್‌ಗಳ ಸ್ವರೂಪಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆದಿದ್ದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರವೀಂದ್ರ ಜಡೇಜಾ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್‌ಗೆ ಸ್ಥಾನ ನೀಡಲಾಗಿತ್ತು. ಇವರಿಬ್ಬರು ಭಾರತ ತಂಡದ ಭವಿಷ್ಯದ ಸ್ಪಿನ್ ಆಲ್‌ರೌಂಡರ್‌ಗಳಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಇಂಗ್ಲೆಂಡ್ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಜಡೇಜಾ ಅವರನ್ನು ಆಯ್ಕೆ ಮಾಡಬಾರದಿತ್ತು ಎಂದು ಬದ್ರಿನಾಥ್ ಹೇಳಿದ್ದಾರೆ.

IND vs ENG 1st ODI: ವಿರಾಟ್‌ ಕೊಹ್ಲಿ ಆಡದೆ ಇರಲು ಕಾರಣ ತಿಳಿಸಿದ ರೋಹಿತ್‌ ಶರ್ಮಾ!

ಪ್ಲೇಯಿಂಗ್ XIನಲ್ಲಿ ಗೊಂದಲ: ಬದ್ರಿನಾಥ್

ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಸಂವಾದ ನಡೆಸಿರುವ ಮಾಜಿ ಕ್ರಿಕೆಟಿಗ ಬದ್ರಿನಾಥ್, ಇಂಗ್ಲೆಂಡ್ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಜಡೇಜಾಗೆ ಸ್ಥಾನ ಕಲ್ಪಿಸಿರುವುದರಿಂದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಗೊಂದಲ ಉಂಟು ಮಾಡಲಿದೆ ಎಂದು ಹೇಳಿದ್ದಾರೆ.

"ಪಂದ್ಯದಲ್ಲಿ ಕೇವಲ ಕೆಲವೇ ಆಟಗಾರರನ್ನು ಆಯ್ಕೆ ಮಾಡಬೇಕಾಗಿದ್ದು, ಸ್ವಲ್ಪ ಗೊಂದಲ ಮೂಡಲಿದೆ. ರವೀಂದ್ರ ಜಡೇಜಾ ಆಯ್ಕೆಯಾಗಿರುವುದು ನಿಜಕ್ಕೂ ನನಗೆ ಅಚ್ಚರಿ ತಂದಿದೆ. ನಾನು ಅವರ ಆಯ್ಕೆಯನ್ನು ನಿರೀಕ್ಷಿಸಿರಲಿಲ್ಲ. ಏಕೆಂದರೆ ಪ್ಲೇಯಿಂಗ್ XIನಲ್ಲಿ ಕೆಲವರಿಗೆ ಮಾತ್ರ ಜಾಗ ಸಿಗಲಿದೆ. ಭವಿಷ್ಯದಲ್ಲಿ ಹೆಚ್ಚು ಕಾಲ ತಂಡದೊಂದಿಗೆ ಇರಲು ಆಗದ ಆಟಗಾರನನ್ನು ಏಕೆ ಆಯ್ಕೆ ಮಾಡುತ್ತೀರಿ? ಇದರಿಂದ ತಂಡದಲ್ಲಿ ಸ್ವಲ್ಪ ಗೊಂದಲ ಮೂಡಲಿದೆ," ಎಂದು ಎಸ್ ಬದ್ರಿನಾಥ್ ಪ್ರಶ್ನೆ ಮಾಡಿದ್ದಾರೆ.

IND vs ENG: ಚಾಂಪಿಯನ್ಸ್‌ ಟ್ರೋಫಿಗೆ ವರುಣ್‌ ಚಕ್ರವರ್ತಿ? ರೋಹಿತ್‌ ಶರ್ಮಾ ಹೇಳಿದ್ದಿದು!

ಜಡೇಜಾಗೆ ಅಕ್ಷರ್ ಕಠಿಣ ಸ್ಪರ್ಧಿ

ಇತ್ತೀಚೆಗೆ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ರವೀಂದ್ರ ಜಡೇಜಾಗೆ ಅಕ್ಷರ್ ಪಟೇಲ್ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ಅಕ್ಷರ್ ಪಟೇಲ್, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ತಮ್ಮ ಆಲ್‌ರೌಂಡರ್ ಪ್ರದರ್ಶನದಿಂದ ಗಮನ ಸೆಳೆದು ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲು ನೆರವು ನೀಡಿದ್ದರು. ಆದರೆ ರವೀಂದ್ರ ಜಡೇಜಾ 7 ಪಂದ್ಯಗಳಿಂದ ಒಂದು ವಿಕೆಟ್ ಪಡೆದಿದ್ದರು. ಇನ್ನು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರವೀಂದ್ರ ಜಡೇಜಾ 16 ವಿಕೆಟ್ ಪಡೆದಿದ್ದರೂ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಎಡವಿದ್ದರು. ಇಂಗ್ಲೆಂಡ್ ವಿರುದ್ಧ ಇಂದು (ಫೆಬ್ರವರಿ 6) ನಡೆಯಲಿರುವ ಮೊದಲ ಏಕದಿನ ಪಂದ್ಯದ ಪ್ಲೇಯಿಂಗ್ XIನಲ್ಲಿ ಜಡೇಜಾ ಮತ್ತು ಅಕ್ಷರ್ ಪಟೇಲ್ ಇಬ್ಬರಿಗೂ ಸ್ಥಾನ ನೀಡಲಾಗಿದೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?