Ayodhya: ಅಯೋಧ್ಯೆಯ ರಾಮಲಲ್ಲಾನಿಗೆ ಒಂದು ವರ್ಷದ ಸಂಭ್ರಮ;ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತ್ತು ಭಾರತ!

ಒಂದು ವರ್ಷದ ಹಿಂದೆ ಭಾರತ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗಿತ್ತು. 2024 ರ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ವಿಶ್ವಾದ್ಯಂತ ಹಲವು ದೇಶಗಳಿಂದ ಆಗಮಿಸಿದ್ದ ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ನೇತ್ರೋಲನ ನೆರವೇರಿಸಲಾಗಿತ್ತು. ಕೋಟ್ಯಂತರ ರಾಮ ಭಕ್ತರು ಭಕ್ತಿಯ ಪರಾಕಾಷ್ಠೆಯನ್ನು ಮೆರೆದಿದ್ದರು. ರಾಮಲಲ್ಲಾನನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದರು.

Ayodhya
Profile Deekshith Nair Jan 22, 2025 11:15 AM

ಲಖನೌ: ಸರಿಯಾಗಿ ಒಂದು ವರ್ಷದ ಹಿಂದೆ ಭಾರತ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಸುದೀರ್ಘ ಹೋರಾಟದ ಪ್ರತಿಫಲವಾಗಿ ಮರ್ಯದಾ ಪುರುಷೋತ್ತಮ ಶ್ರೀರಾಮನ ಜನಸ್ಥಳವಾದ ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾ(Ramlalla) ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಿತ್ತು.2024 ರ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ(Narendra Modi), ಸಿಎಂ ಯೋಗಿ ಆದಿತ್ಯನಾಥ್(Yogi Adithyanath) ಸೇರಿದಂತೆ ವಿಶ್ವಾದ್ಯಂತ ಹಲವು ದೇಶಗಳಿಂದ ಆಗಮಿಸಿದ್ದ ಗಣ್ಯರ ಸಮ್ಮುಖದಲ್ಲಿ ಹಿಂದೂಗಳ ಆರಾಧ್ಯ ದೈವ ರಾಮನ ನೇತ್ರೋಲನ ನೆರವೇರಿಸಲಾಗಿತ್ತು. ಕೋಟ್ಯಂತರ ರಾಮ ಭಕ್ತರು ಭಕ್ತಿಯ ಪರಾಕಾಷ್ಠೆಯನ್ನು ಮೆರೆದಿದ್ದರು. ರಾಮಲಲ್ಲಾನನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದರು.

ಆದರೆ ಈ ವರ್ಷ ಜನವರಿ 11 ರಂದೇ ರಾಮಮಂದಿರ ಉದ್ಘಾಟನೆಯ ಪ್ರಥಮ ವಾರ್ಷಿಕೋತ್ಸವ ನೆರವೇರಿಸಲಾಯಿತು. ಅದಕ್ಕೆ ಕಾರಣವೂ ಇತ್ತು. ಹಿಂದೂ ಚಾಂದ್ರಮಾನ ಪಂಚಾಗದ ಆಧಾರದ ಮೇಲೆ ಕಳೆದ ವರ್ಷ ಕೂರ್ಮ ದ್ವಾದಶಿಯಂದು ಅಯೋಧ್ಯಾ ರಾಮಮಂದಿರವನ್ನು ಉದ್ಘಾಟಿಸಲಾಗಿತ್ತು. ಈ ವರ್ಷ ಜನವರಿ 11 ರಂದು ಅದೇ ತಿಥಿಯಂದು ವಾರ್ಷಿಕೋತ್ಸವ ಆಚರಿಸಲಾಯಿತು.



ರಾಮಲಲ್ಲಾ ದರ್ಶನಕ್ಕೆ ಈಗಾಗಲೇ ಭಾರತಾದ್ಯಂತ ಭಕ್ತರು ಬರುತ್ತಿದ್ದಾರೆ. ಇಡೀ ಅಯೋಧ್ಯೆಯು ಈಗ ಪ್ರಮುಖ ತೀರ್ಥಕ್ಷೇತ್ರವಾಗಿ ಮಾರ್ಪಟ್ಟಿದೆ. ಆದರೆ ಮಂದಿರ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಈ ವರ್ಷ ಮಂದಿರ ನಿರ್ಮಾಣ ಕಾರ್ಯ ಮುಗಿಯುವ ನಿರೀಕ್ಷೆಯಿದೆ.

500 ವರ್ಷಗಳ ಕಾಯುವಿಕೆಗೆ ಸಿಕ್ಕ ಜಯ!

ಸರಿಯಾಗಿ ಒಂದು ಒಂದು ವರ್ಷದ ಹಿಂದೆ ರಾಮನ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಯಿತು. ಬಾಲರಾಮನ ಪ್ರಾಣ
ಪ್ರತಿಷ್ಠಾಪನೆಯಾದ ದಿನ ಕೋಟ್ಯಂತರ ಹಿಂದೂಗಳು ಸಂಭ್ರಮಪಟ್ಟರು. ತಮ್ಮ ಆರಾಧ್ಯ ದೈವವನ್ನು ಕಂಡು ಕಣ್ತುಂಬಿಕೊಂಡರು. ರಾಮ ಮಂದಿರ ಸ್ಥಾಪನೆಯ ಹಿಂದೆ 500 ವರ್ಷಗಳ ಸುದೀರ್ಘ ಹೋರಾಟವಿದೆ ಎಂಬುದು ಹಲವರಿಗೆ ಗೊತ್ತಿದೆ. ರಾಮ ಜನ್ಮಭೂಮಿಯಲ್ಲಿಯೇ ರಾಮಮಂದಿರ ಉದ್ಘಾಟನೆ ಆಗಬೇಕೆಂದು ಲಕ್ಷಾಂತರ ಕರ ಸೇವಕರು ಹೋರಾಟ ನಡೆಸಿದ್ದರು. ಅವರೆಲ್ಲರ ಹೋರಾಟ, ಪ್ರಾಣ ತ್ಯಾಗ ಅಷ್ಟೇ ಅಲ್ಲದೆ ಕಾನೂನು ಹೋರಾಟದ ಬಳಿಕ ರಾಮಮಂದಿರದ ಕನಸು ಸಾಕಾರಗೊಂಡಿದೆ. ಕಳೆದ ವರ್ಷ ರಾಮಮಂದಿರ ನಿರ್ಮಾಣದ ಕನಸು ನನಸಾಯಿತು. ಮುಂದಿನ ದಿನಗಳಲ್ಲಿ ರಾಮರಾಜ್ಯದ ಕನಸು ಕೂಡ ನನಸಾಗಲಿದ ಎಂಬುದು ದೇಶದ ಜನರ ಆಶಯವಾಗಿದೆ.

ಈ ಸುದ್ದಿಯನ್ನೂ ಓದಿ:Arodhya Rama Mandir: ಅಯೋಧ್ಯೆ ರಾಮಮಂದಿರ ಈಗ ಉತ್ತರ ಪ್ರದೇಶದ ನಂ 1 ಪ್ರವಾಸಿ ತಾಣ!

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?