Babri Masjid Demolition: ಬಾಬ್ರಿ ಮಸೀದಿ ಧ್ವಂಸ ಸಮರ್ಥಿಸಿಕೊಂಡ ಶಿವಸೇನೆ; ಎಂವಿಎ ಒಕ್ಕೂಟದಿಂದ ಹೊರಬಂದ ಸಮಾಜವಾದಿ ಪಕ್ಷ

ಮಹಾರಾಷ್ಟ್ರ, Babri Masjid demolition: ಬಾಬರಿ ಮಸೀದಿಯ ಧ್ವಂಸ (Babri Masjid demolition) ಘಟನೆಗೆ 31 ವರ್ಷ. 1992 ರಲ್ಲಿ ಹಿಂದೂ ಕರಸೇವಕರು ಬಾಬರಿ ಮಸೀದಿ ಧ್ವಂಸ ಮಾಡಿದ್ದು ದೇಶಾದ್ಯಂತ ಕೋಮು ಹಿಂಸಾಚಾರವನ್ನು ಪ್ರಚೋದಿಸಿತು.

Profile Sushmitha Jain Dec 7, 2024 7:23 PM
ಮಹಾರಾಷ್ಟ್ರ, Babri Masjid demolition: ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಶಿವ ಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ ಸಮರ್ಥನೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಒಕ್ಕೂಟದಿಂದ ಸಮಾಜವಾದಿ ಪಕ್ಷ ಹೊರ ನಡೆದಿದೆ.
ಬಾಬ್ರಿ ಮಸೀದಿಯ ಧ್ವಂಸ (Babri Masjid demolition) ಘಟನೆಗೆ ಇದೀಗ 31 ವರ್ಷ. 1992ರಲ್ಲಿ ನಡೆದಿದ್ದ ಈ ಘಟನೆಯಲ್ಲಿ ಸುಮಾರು 2,000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದರು. ಬಾಬ್ರಿ ಮಸೀದಿ ಧ್ವಂಸಗೊಂಡು 31 ವರ್ಷಗಳಾಗಿದ್ದರೂ, ಈ ಘಟನೆಯನ್ನು ಸ್ವಾತಂತ್ರ್ಯದ ನಂತರ ಭಾರತದ ಕರಾಳ ದಿನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದು ದೇಶದ ರಾಜಕೀಯದ ದಿಶೆಯನ್ನೇ ಬದಲಾಯಿಸಿತ್ತು.
ಇದೀಗ ಇದೇ ವಿಷಯಕ್ಕೆ ಮಹಾರಾಷ್ಟ್ರ ಘಟಕ ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ ಅಘಾಡಿ (MVA) ಯಲ್ಲಿ ಬಿರುಕಿಗೆ ಕಾರಣವಾಗಿದೆ. ಹೌದು ಡಿಸೆಂಬರ್ 6 ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ದಿನವಾಗಿದ್ದು, ಬಾಬ್ರಿ ಮಸೀದಿ ಧ್ವಂಸಗೊಂಡಿದ್ದನ್ನು ಹೊಗಳಿದ ಶಿವಸೇನೆ (UTB) ಬಣ ಪತ್ರಿಕೆಯಲ್ಲಿ ಜಾಹಿರಾತನ್ನು ಪ್ರಕಟ ಮಾಡಿದೆ.
ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿಯಲ್ಲಿ ಭಿನ್ನಾಭಿಪ್ರಾಯ ಎದಿದ್ದು, ಶಿವಸೇನೆಯ ನಡೆಯನ್ನು ವಿರೋಧಿಸಿ ಪ್ರತಿಭಟಿಸಿದ ಸಮಾಜವಾದಿ ಪಕ್ಷ ಎಂವಿಎ ಮೈತ್ರಿಕೂಟವನ್ನು ತೊರೆದಿದೆ.
ಶಿವಸೇನೆ (UTB) ಪಕ್ಷದ ನಾಯಕ ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿರುವ ಹಿನ್ನೆಲೆ, ಸಮಾಜವಾದಿ ಪಕ್ಷದ (SP) ಮಹಾರಾಷ್ಟ್ರ ಘಟಕ ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ ಅಘಾಡಿ (MVA) ಯನ್ನು ತೊರೆದಿದ್ದು, ಈ ಕುರಿತು ಸಮಾಜವಾದಿ ಎಸ್‌ಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅಧಿಕೃತ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಸ್‌ಪಿ ಇಬ್ಬರು ಶಾಸಕರನ್ನು ಹೊಂದಿದ್ದು, ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅವರು ಅಝ್ಮಿ ಮುಂಬೈನ ಮನ್ಖುರ್ದ್-ಶಿವಾಜಿನಗರದ ಶಾಸಕರಾದರೆ, ಇನ್ನೊಬ್ಬರು ರೈಸ್ ಶೇಖ್ ಥಾಣೆ ಜಿಲ್ಲೆಯ ಭಿವಂಡಿ ಪೂರ್ವ ಕ್ಷೇತ್ರದ ಶಾಸಕರಾಗಿದ್ದಾರೆ.
“ನಾವು ಆಡಳಿತಾರೂಢ ಮಹಾಯುತಿ ಅಥವಾ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯ ಭಾಗವಲ್ಲ. ನಮ್ಮಿಬ್ಬರಿಗಾಗಿ ಪ್ರತ್ಯೇಕ ಜಾಗವನ್ನು ಮೀಸಲಿಡುವಂತೆ ಸ್ಪೀಕರ್ ಮತ್ತು ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯನ್ನು ಕೋರುತ್ತೇವೆ,” ಎಂದು ಅಝ್ಮಿ ಹೇಳಿದ್ದಾರೆ.
“ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಮಯದಲ್ಲಾಗಲಿ, ಪ್ರಚಾರದ ಸಮಯದಲ್ಲಾಗಲಿ ಎಂವಿಎ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ನಮ್ಮನ್ನು ಯಾವುದೇ ಸಭೆ, ರ್ಯಾಲಿಗಳಿಗೆ ಕರೆಯುತ್ತಿರಲಿಲ್ಲ” ಎಂದು ಅಝ್ಮಿ ತಿಳಿಸಿದ್ದಾರೆ.
https://twitter.com/NarvekarMilind_/status/1864756272572027013
“ಉದ್ದವ್ ಠಾಕ್ರೆಯವರು ಅವರ ಪಕ್ಷದ ಆಂತರಿಕ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಬಲ ಹಿಂದುತ್ವ ಪ್ರತಿಪಾದಿಸುವಂತೆ ಹೇಳಿದ್ದಾರಂತೆ. ಶಿವಸೇನೆಯವರು ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ನಾವು ಹೇಗೆ ಸಹಿಸಿಕೊಳ್ಳುವುದು?” ಎಂದು ಅಝ್ಮಿ ಪ್ರಶ್ನಿಸಿದ್ದಾರೆ.
ವರದಿಗಳ ಪ್ರಕಾರ, ಬಾಬ್ರಿ ಮಸೀದಿ ಧ್ವಂಸವನ್ನು ಸಮರ್ಥಿಸಿ, ಸಂಭ್ರಮಿಸಿ ಶಿವಸೇನೆ (ಯುಬಿಟಿ) ಎಂಎಲ್‌ಸಿ ಹಾಗೂ ಉದ್ದವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೇಕರ್ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್ ಎಸ್‌ಪಿ ನಾಯಕರನ್ನು ಕೆರಳಿಸಿದೆ. ಮಿಲಿಂದ್ ಹಂಚಿಕೊಂಡಿದ್ದ ಪೋಸ್ಟ್‌ನಲ್ಲಿ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ, ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಫೋಟೋಗಳಿವೆ.
“ಮಿಲಿಂದ್ ನಾರ್ವೇಕರ್ ಪೋಸ್ಟ್‌ನಿಂದ ನಮ್ಮ ಮನಸ್ಸಿಗೆ ನೋವಾಗಿದ್ದು, ಎಲ್ಲಾ ಸಮುದಾಯಗಳ ಏಕತೆ ಮತ್ತು ಗೌರವದ ಮೌಲ್ಯಗಳಿಗೆ ವಿರುದ್ಧವಾಗಿವೆ. ನಾವು ಸೌಹಾರ್ದತೆಯನ್ನು ಉತ್ತೇಜಿಸಲು ಇಲ್ಲಿದ್ದೇವೆ, ಜನರನ್ನು ವಿಭಜಿಸಲು ಅಲ್ಲ” ಎಂದು ಅಝ್ಮಿ ಹೇಳಿದ್ದಾರೆ.
ಈ ಸುದ್ದಿಯನ್ನು ಓದಿ: DK Shivakumar: ಕೋವಿಡ್ ಅಕ್ರಮ; ಹಣ ತಿಂದವರನ್ನು ಬಿಡುವುದಿಲ್ಲ ಎಂದ ಡಿಕೆಶಿ
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?