ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಿ, ಬೇಸಿಗೆ ಎದುರಿಸಲು ಸಿದ್ದರಾಗಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ವಾಡಿಕೆ ಮಳೆಗಿಂತ ತುಸು ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಾಗಿದ್ದರೂ ಸಹ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಜಿಲ್ಲೆಯ ಕೆಲವೆಡೆ ಸಮಸ್ಯೆ ಎದು ರಾಗಲಿದೆ. ಅಂತಹ ಗ್ರಾಮಗಳು ಮತ್ತು ವಾರ್ಡ್ ಗಳನ್ನು ಗುರ್ತಿಸಿ ಮುನ್ನೆಚ್ಚರಿಗೆ ಕ್ರಮ ಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣಾ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಎಚ್ಚರವಹಿಸಿ,ಬೇಸಿಗೆಯನ್ನು ಸಮರ್ಥವಾಗಿ ಎದುರಿಸಲು ಸಿದ್ದರಾಗಿ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರ: ಈ ವರ್ಷ ವಾಡಿಕೆ ಮಳೆಗಿಂತ ತುಸು ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಾಗಿದ್ದರೂ ಸಹ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಜಿಲ್ಲೆಯ ಕೆಲವೆಡೆ ಸಮಸ್ಯೆ ಎದು ರಾಗಲಿದೆ. ಅಂತಹ ಗ್ರಾಮಗಳು ಮತ್ತು ವಾರ್ಡ್ ಗಳನ್ನು ಗುರ್ತಿಸಿ ಮುನ್ನೆಚ್ಚರಿಗೆ ಕ್ರಮ ಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣಾ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ವರ್ಷ ೭೩೬ ಮಿ.ಮೀ ವಾಡಿಕೆ ಮಳೆಗಿಂತ ೭೫೫.೩ ಮಿ.ಮೀ ಮಳೆ ಪ್ರಮಾಣ ತುಸು ಹೆಚ್ಚಾಗಿದ್ದರೂ ಕೂಡ ಬೇಸಿಗೆಯಲ್ಲಿ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗ ಲಿದೆ. ಅಂತಹ ಕಡೆ ಖಾಸಗಿ ಕೊಳವೆ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ಅಧಿಕಾರಿಗಳು ಈಗಿನಿಂದಲೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Chikkaballapur News: ಇ-ಖಾತೆ ಅಭಿಯಾನ ಸದ್ಬಳಕೆ ಮಾಡಿಕೊಳ್ಳಿ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮನವಿ
ಜಿಲ್ಲೆಯ 12 ಗ್ರಾಮ ಪಂಚಾಯ್ತಿಗಳ 14 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳ 26 ವಾರ್ಡ್ ಗಳಲ್ಲಿ ಈಗಾಗಲೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ 63 ಗ್ರಾಮ ಪಂಚಾಯ್ತಿಗಳ 154 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶದ ೨೭ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ ಅಂತಹ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅವಕಾಶ ಕಲ್ಪಿಸಿಕೊಂಡು ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಅಥವಾ ಖಾಸಗಿ ಕೊಳವೆ ಬಾವಿ ಮಾಲಿಕರ ಸಹ ಕಾರ ಪಡೆದು ನೀರು ಪೂರೈಸುವ ವ್ಯವಸ್ಥೆ ಆಗಬೇಕು. ಈಗಾಗಲೇ ನೀರು ಪೂರೈಸುತ್ತಿರು ವವರಿಗೆ ನಿಯಮಿತವಾಗಿ ಹಣ ಸಂದಾಯವಾಗುವಂತೆ ನಿಗಾ ವಹಿಸಲು ಸೂಚಿಸಿದರು.
ನೀರಿನ ಪರೀಕ್ಷೆ ಮಾಡಿಸಿ: ಗ್ರಾಮಗಳಿಗೆ ಮತ್ತು ನಗರದ ವಾರ್ಡ್ ಗಳಿಗೆ ನೀರು ಪೂರೈಸುವ ಜಲಮೂಲಗಳಲ್ಲಿ, ಸಂಗ್ರಹಣಾ ಸ್ಥಳ, ಕೇಂದ್ರಗಳಲ್ಲಿ ಹಾಗೂ ನೀರಿನ ತೊಟ್ಟಿಗಳಲ್ಲಿನ ನೀರನ್ನು ನಿಯಮಿತವಾಗಿ ಪರೀಕ್ಷೆ ಮಾಡಿಸಬೇಕು. ನೀರಿನ ಪೈಪುಗಳು ಹಾನಿಯಾಗಿ ದುರಸ್ತಿ ಅವಶ್ಯಕತೆ ಇದ್ದರೆ ಕೂಡಲೆ ದುರಸ್ತಿ ಆಗಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ, ಜನರ ಆರೊಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸ ಬೇಕು. ಡೆಂಘೀ ಪ್ರಕರಣಗಳನ್ನು ಆರಂಭಿಕ ಹಂತದಲ್ಲೆ ಹತೋಟಿಗೆ ತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ನಗರಾ ಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಾಧವಿ, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್ ಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ನಗರ ಆಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಜರಿದ್ದರು.