ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Girl Death: ಬೆಸ್ಕಾಂ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕಿ ಬಲಿ, ವಿದ್ಯುತ್​ ತಗುಲಿ ಸಾವು

Girl Death: ದುರಂತಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಕಂಬದ ಬಳಿ ಶಾಕ್‌ಗೆ ಈಡಾಗಿ ಗಾಯಗೊಂಡಿದ್ದ ತನಿಷ್ಕಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಬೆಸ್ಕಾಂ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕಿ ಬಲಿ, ವಿದ್ಯುತ್​ ತಗುಲಿ ಸಾವು

ಮೃತ ಬಾಲಕಿ ತನಿಷ್ಕಾ

ಹರೀಶ್‌ ಕೇರ ಹರೀಶ್‌ ಕೇರ Jun 11, 2025 9:08 AM

ಆನೇಕಲ್‌: ಆಟವಾಡುತ್ತಿದ್ದಾಗ ವಿದ್ಯುತ್‌ ಶಾಕ್‌ (Electric shock) ತಗುಲಿ 11 ವರ್ಷದ ಬಾಲಕಿ (Girl Death) ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru news) ಹೊರವಲಯದ ಆನೇಕಲ್‌ (Anekal) ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್‌ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್‌ ಶಾಕ್‌ ತಗುಲಿದೆ. ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಪೋಷಕರ ಆಕ್ರಂದನ ಮುಗಿಲುಟ್ಟಿದ್ದು, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.‌ ಮೃತ ಬಾಲಕಿ ಸ್ಥಳೀಯ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದಳು. ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸುತ್ತಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ.

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ ಕೊಲೆ

ಬೆಂಗಳೂರು: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ (Rowdy Sheeter) ಒಬ್ಬನನ್ನು ಭೀಕರವಾಗಿ ಕೊಲೆ (Murder Case) ಮಾಡಲಾಗಿದೆ. ಬೆಂಗಳೂರಿನ ಕಾಡುಗೋಡಿಯ (Bengaluru Crime News) ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕಾಡುಗೋಡಿ ಠಾಣೆಯ ವ್ಯಾಪ್ತಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಪುನೀತ್ ಅಲಿಯಾಸ್ ನೇಪಾಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ. ಹಳೆಯ ದ್ವೇಷದಿಂದ ಈ ಕೃತ್ಯ ಎಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಡೆತ್‌ನೋಟ್‌ನಲ್ಲಿ ಮೂವರ ಹೆಸರು ಬರೆದು ಯುವಕ ಆತ್ಮಹತ್ಯೆ

ಬೆಳಗಾವಿ : ಡೆತ್ ನೋಟ್‌ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ಗುರುತಿಸಲಾಗಿದೆ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sonam Raghuwanshi Case: ಪತಿಯ ಕೊಲೆಗೆ 20 ಲಕ್ಷ ರೂ. ಆಮಿಷ ಒಡ್ಡಿದ್ದ ಸೋನಂ; ಮೇಘಾಲಯ ಹನಿಮೂನ್‌ ಹತ್ಯೆಯ ಭೀಕರ ರಹಸ್ಯ ಬಯಲು