ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ST Somashekhar: ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಉಚ್ಛಾಟನೆ

ಎಸ್‌ಟಿಎಸ್‌ (ST Somashekhar) ಹಾಗೂ ಹೆಬ್ಬಾರ್‌ (Shivaram Hebbar) ಇಬ್ಬರೂ ನಿರಂತರವಾಗಿ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇಬ್ಬರೂ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ನೀಡಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್‌ ಆಡಳಿತದ ಪರವಾಗಿಯೂ ಹೇಳಿಕೆಗಳನ್ನು ನೀಡಿದ್ದರು. ಇದನ್ನೆಲ್ಲ ಹೈಕಮಾಂಡ್‌ ಪರಿಗಣಿಸಿದೆ.

ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಉಚ್ಛಾಟನೆ

ಶಿವರಾಮ ಹೆಬ್ಬಾರ್‌, ಎಸ್‌ಟಿ ಸೋಮಶೇಖರ್

ಹರೀಶ್‌ ಕೇರ ಹರೀಶ್‌ ಕೇರ May 27, 2025 1:28 PM

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ (ST Somashekhar) ಶಿವರಾಮ್ ಹೆಬ್ಬಾರ್ (Shivaram Hebbar) ಅವರನ್ನು ಭಾರತೀಯ ಜನತಾ ಪಕ್ಷದಿಂದ (BJP) ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷ ಉಚ್ಚಾಟನೆ (Expelled) ಮಾಡಿ ಬಿಜೆಪಿ ಹೈಕಮಾಂಡ್ (BJP High command) ಆದೇಶ ಹೊರಡಿಸಿದೆ. ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಉಚ್ಛಾಟನೆಯ ಬೆನ್ನಿನಲ್ಲಿಯೇ, ಎಸ್‌ಟಿಎಸ್‌ ಹಾಗೂ ಹೆಬ್ಬಾರ್‌ ಅವರ ಉಚ್ಛಾಟನೆ ಯಾವಾಗ ಎಂದು ಪಕ್ಷದೊಳಗೇ ಪ್ರಶ್ನೆಗಳು ಎದ್ದಿದ್ದವು. ಪಕ್ಷದ ಹೈಕಮಾಂಡ್‌ ಈ ಬಗ್ಗೆ ಇದೀಗ ಕ್ರಮ ತೆಗೆದುಕೊಂಡಿದ್ದು, ಉಚ್ಛಾಟನೆಯ ನೋಟೀಸ್‌ ಕಳುಹಿಸಿದೆ.

ಈ ತಿಂಗ ಆರಂಭದಲ್ಲಿ ಈ ಕುರಿತು ಮಾತನಾಡಿದ್ದ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು.

ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕ್ಷೇತ್ರಕ್ಕೆ ತೆರಳಿ ವರದಿ ಸಿದ್ಧಪಡಿಸಿದ್ದೇನೆ. ಪಕ್ಷದ ಕಾರ್ಯಕರ್ತರ ಮತ್ತು ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ದಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್‌ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡ್ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ ಎಂದಿದ್ದರು.

ಎಸ್‌ಟಿಎಸ್‌ ಹಾಗೂ ಹೆಬ್ಬಾರ್‌ ಇಬ್ಬರೂ ನಿರಂತರವಾಗಿ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇಬ್ಬರೂ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ನೀಡಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್‌ ಆಡಳಿತದ ಪರವಾಗಿಯೂ ಹೇಳಿಕೆಗಳನ್ನು ನೀಡಿದ್ದರು. ಇದನ್ನೆಲ್ಲ ಹೈಕಮಾಂಡ್‌ ಪರಿಗಣಿಸಿದೆ.

ಇದನ್ನೂ ಓದಿ: BY Vijayendra: ಜಾತಿ ಗಣತಿ; ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ಸಿಗರಿಗೂ ಆಶ್ಚರ್ಯ ಎಂದ ವಿಜಯೇಂದ್ರ