ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self harming: ಮದ್ವೆ ಆಗದ ಬೇಸರದಲ್ಲಿ ಸಹೋದರರಿಬ್ಬರು ಆತ್ಮಹತ್ಯೆ

Borthers commits suicide: ಮದುವೆ ಆಗಿಲ್ಲ ಎಂದು ಇಬ್ಬರೂ ಸಹೋದರರು ಬಹಳ ದುಃಖಿತರಾಗಿದ್ದರು. ಇದರಿಂದ ಇಬ್ಬರೂ ಮದ್ಯದ ಚಟಕ್ಕೆ ಬಿದ್ದಿದ್ದರು. ಕುಡಿದ ನಶೆಯಲ್ಲಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಕ್ಕೇರಿಯ ಕೊಣಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ

ಮದ್ವೆ ಆಗದ ಬೇಸರದಲ್ಲಿ ಸಹೋದರರಿಬ್ಬರು ಆತ್ಮಹತ್ಯೆ

Profile Rakshita Karkera Jun 1, 2025 9:54 AM

ಸಂಕೇಶ್ವರ: ಜೀವನದಲ್ಲಿ ಜಿಗುಪ್ಸೆಗೊಂಡು ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗ ಶರಣಾಗಿರುವ(Self harming) ಘಟನೆ ಹುಕ್ಕೇರಿಯಲ್ಲಿ ನಡೆದಿದೆ. ಕೊಣಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಗಳನ್ನು ಸಂತೋಷ ರವೀಂದ್ರ ಗುಂಡೆ(55)ಮತ್ತು ಅಣ್ಣಾ ಸಾಹೇಬ ರವೀಂದ್ರ ಗುಂಡೆ(55)ಎಂದು ಗುರುತಿಸಲಾಗಿದೆ. ಮದುವೆ ಆಗಿಲ್ಲ ಎಂದು ಇಬ್ಬರೂ ಸಹೋದರರು ಬಹಳ ದುಃಖಿತರಾಗಿದ್ದರು. ಇದರಿಂದ ಇಬ್ಬರೂ ಮದ್ಯದ ಚಟಕ್ಕೆ ಬಿದ್ದಿದ್ದರು. ಕುಡಿದ ನಶೆಯಲ್ಲಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಷ ಪದಾರ್ಥ ಸೇವಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಇಬ್ಬರನ್ನೂ ತಕ್ಷಣ ಮಹಾರಾಷ್ಟ್ರದ ಗಡಹಿಂಗ್ಲಜ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸದ್ಯ ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Male Mahadeshwar hills: ಮಲೆ ಮಹದೇಶ್ವರ ದೇಗುಲದ ಗೋಪುರ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ (Micro Finance harassment) ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ (self harmed) ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ (coorg news) ನಡೆದಿದೆ. ಮಡಿಕೇರಿಯ (Madikeri) ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಕ್ರೋಫೈನಾನ್ಸ್‌ ಕಿರುಕುಳ ಇತ್ತೀಚೆಗೆ ರಾಜ್ಯದಲ್ಲಿ ಅಧಿಕವಾಗಿದ್ದು, ಹಲವಾರು ಸಾವುಗಳ ವರದಿಯಾಗಿದ್ದವು. ಇದನ್ನು ಗಮನಿಸಿದ್ದ ರಾಜ್ಯ ಸರಕಾರ ಮೈಕ್ರೋಫೈನಾನ್ಸ್‌ ವಿಧೇಯಕವನ್ನು ಮಂಡಿಸಿ ಅಂಗೀಕರಿಸಿತ್ತು. ಅದಕ್ಕೆ ರಾಜ್ಯಪಾಲರು ಕಳೆದ ಫೆಬ್ರವರಿಯಲ್ಲಿ ಅಂಕಿತ ಹಾಕಿದ್ದರು. ಈ ಸುಗ್ರೀವಾಜ್ಞೆಯು, ಕಿರುಕುಳ ನೀಡಿದವರಿಗೆ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂ.ಗಳವರೆಗೆ ವಿಸ್ತರಿಸಬಹುದಾದ ದಂಡವನ್ನು ವಿಧಿಸಲು ಅವಕಾಶ ಹೊಂದಿದೆ. ಈ ಸುಗ್ರೀವಾಜ್ಞೆಯ ಅಡಿಯಲ್ಲಿರುವ ಅಪರಾಧಗಳು ಜಾಮೀನು ರಹಿತವಾಗಿವೆ.