#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿಗೆ ಸಮನ್ಸ್!

Rahul Gandhi Summons: ಭಾರತೀಯ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಲಖನೌದ ನ್ಯಾಯಾಲಯ ಸಮನ್ಸ್‌ ನೀಡಿದೆ.

ಭಾರತೀಯ ಸೇನೆಯ ವಿರುದ್ಧ ಹೇಳಿಕೆ: ರಾಹುಲ್‌ ಗಾಂಧಿಗೆ ಸಮನ್ಸ್‌!

Rahul Gandhi

Profile Ramesh Kote Feb 11, 2025 11:13 PM

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವೊಂದು ಸಮನ್ಸ್ ಜಾರಿ ಮಾಡಿದೆ. 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಲಖನೌ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಲಖನೌದ ಸಂಸದ ಶಾಸಕರ ನ್ಯಾಯಾಲಯವು ರಾಹುಲ್ ಗಾಂಧಿಗೆ ಈ ನೋಟಿಸ್ ಕಳುಹಿಸಿದೆ. ಕಳೆದ ವರ್ಷ ಮಾರ್ಚ್ ಕೊನೆಯ ವಾರದಲ್ಲಿ ರಾಹುಲ್ ಗಾಂಧಿ ಎಂಪಿ ಶಾಸಕರ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ. ಬಾರ್ಡರ್ ರೋಡ್ ಆರ್ಗನೈಸೇಷನ್ (ಬಿಆರ್‌ಒ) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ್‌ ರಾಹುಲ್ ಗಾಂಧಿ ವಿರುದ್ಧ ಈ ಪ್ರಕರಣವನ್ನು ದಾಖಲಿಸಿದ್ದರು. 2022ರ ಡಿಸೆಂಬರ್ 16ರಂದು ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಭಾರತೀಯ ಸೇನೆಯ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿದೆ.

Rahul Gandhi: ಮಹಾರಾಷ್ಟ್ರದಲ್ಲಿ ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ; ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ವಿಷಯ ಏನಿದು ಪ್ರಕರಣ?

"2022ರ ಡಿಸೆಂಬರ್ 9 ರಂದು ಚೀನಾ ಸೈನಿಕರು ಭಾರತೀಯ ಸೈನಿಕರನ್ನು ಥಳಿಸಿದ ಬಗ್ಗೆ ಯಾರೂ ಏನನ್ನೂ ಕೇಳುವುದಿಲ್ಲ ಏಕೆ?' ಎಂದು ಪತ್ರಕರ್ತರಿಗೆ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು. 2022ರ ಡಿಸೆಂಬರ್ 12 ರಂದು ಭಾರತೀಯ ಸೇನೆಯು ರಾಹುಲ್ ಗಾಂಧಿಯವರ ಹೇಳಿಕೆಯನ್ನು ನಿರಾಕರಿಸಿತು. "ಚೀನಾದ ಸೇನೆಯು ಅರುಣಾಚಲ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿತ್ತು, ಅದಕ್ಕೆ ಭಾರತೀಯ ಸೇನೆಯು ಸೂಕ್ತ ಉತ್ತರ ನೀಡಿತು ಮತ್ತು ಚೀನಾದ ಸೇನೆಯು ಹಿಂತಿರುಗಿತ್ತು," ಎಂದು ಸೇನೆಯು ಅಧಿಕೃತ ಹೇಳಿಕೆಯಲ್ಲಿ ಈ ರೀತಿ ತಿಳಿಸಿತ್ತು.

Rahul Gandhi: ಚೀನಾ ಅತಿಕ್ರಮಣಕ್ಕೆ ಮೇಕ್‌ ಇನ್ ಇಂಡಿಯಾ ಕಾರಣ; ಸಂಸತ್‌ ಭಾಷಣದಲ್ಲಿ ಮೋದಿಯನ್ನು ಕುಟುಕಿದ ರಾಹುಲ್‌ ಗಾಂಧಿ!

ಉದಯ್ ಶಂಕರ್ ಶ್ರೀವಾಸ್ತವ ಅವರ ಪ್ರಕಾರ, ಅವರು ಸೈನ್ಯವನ್ನು ಗೌರವಿಸುತ್ತಾರೆ ಮತ್ತು ರಾಹುಲ್ ಗಾಂಧಿ ಸೈನ್ಯವನ್ನು ಗೇಲಿ ಮಾಡುವ ಮೂಲಕ ಅದರ ಮಾನಹಾನಿ ಮಾಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನಂತರ, ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಮಾರ್ಚ್ 24 ರಂದು ಸಮನ್ಸ್ ಜಾರಿ ಮಾಡಿತು. ಮಾರ್ಚ್ 24 ರಂದು ಎಸಿಜೆಎಂ ನ್ಯಾಯಾಲಯವು ಅವರನ್ನು ಆರೋಪಿಯನ್ನಾಗಿ ಮಾಡಿ ಸಮನ್ಸ್ ಜಾರಿ ಮಾಡಿತ್ತು.

ರಾಹುಲ್ ಗಾಂಧಿ ವಿರುದ್ಧ ಬಾರ್ಡರ್ ರೋಡ್ ಆರ್ಗನೈಸೇಶನ್‌ನ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.