ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cauvery Wildlife Sanctuary: ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು

Cauvery Wildlife Sanctuary: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಮೃತಪಟ್ಟಿವೆ. ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಕೊನೆಯುಸಿರೆಳೆದಿವೆ.

ಚಾಮರಾಜನಗರ: ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ (Cauvery Wildlife Sanctuary) ಎರಡು ಹುಲಿ ಮರಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಹಸಿವಿನಿಂದ ನಿತ್ರಾಣಗೊಂಡು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಮೃತಪಟ್ಟಿವೆ. ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಕೊನೆಯುಸಿರೆಳೆದಿವೆ. ತಾಯಿಯಿಂದ ಹುಲಿ ಮರಿಗಳು ಬೇರ್ಪಟ್ಟಿದ್ದವು ಎಂಬ ಮಾಹಿತಿಯಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನ ವೇಳೆ ಹುಲಿ ಮರಿಗಳ ಸಾವು ಬೆಳಕಿಗೆ ಬಂದಿದೆ. ಎರಡು ಮೂರು ದಿನಗಳ ವ್ಯತ್ಯಾಸದಲ್ಲಿ ಹುಲಿ ಮರಿಗಳು ಮೃತಪಟ್ಟಿವೆ. ತಾಯಿಯಿಂದ ಬೇರ್ಪಟ್ಟು ಹಸಿವಿನಿಂದ ನಿತ್ರಾಣಗೊಂಡು ಹುಲಿ ಮರಿಗಳು ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನೂ ಓದಿ | Kashmiri Pandit Murder: 35 ವರ್ಷಗಳ ಹಿಂದಿನ ಪ್ರಕರಣಕ್ಕೆ ಮತ್ತೆ ಜೀವ; ಕಾಶ್ಮೀರಿ ಪಂಡಿತ ಮಹಿಳೆಯ ಕೊಲೆ ಕೇಸ್‌ ರಿಓಪನ್‌

ಸೆಲ್ಫಿ ವೇಳೆ ಆನೆ ದಾಳಿ, ಪ್ರಾಣ ಉಳಿಸಿಕೊಂಡವನಿಗೆ ಅರಣ್ಯ ಇಲಾಖೆ ಬಂಧನ, 25 ಸಾವಿರ ರೂ ದಂಡ

elephant attack

ಮೈಸೂರು: ಬಂಡೀಪುರ ಅರಣ್ಯದೊಳಗೆ (Bandipur Forest) ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ (Elephant Attack) ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ (Forest department) ಶಾಕ್ ನೀಡಿದ್ದು, ಆತನನ್ನು ಬಂಧಿಸಿ 25 ಸಾವಿರ ರೂ ದಂಡ ಹೇರಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು 25,000 ರೂ ದಂಡ ವಿಧಿಸಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.

ಕಾಡಾನೆ ಜೊತೆಗೆ ಮಂಗಾಟ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್‌.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಆರೋಪಿ ಬಸವರಾಜು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, 'ಬಂಡೀಪುರ ಬಂಕಾಪುರ ದೇವಸ್ಥಾನಕ್ಕೆ ತೆರಳಿ ಮರಳುವಾಗ ಹೆದ್ದಾರಿಯಲ್ಲಿ ಆನೆ ಕಂಡು ಮೋಜು ಮಸ್ತಿಗಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಆನೆ ದಾಳಿಗೆ ಸಿಲುಕಿ ಬದುಕಿದ್ದೇ ಹೆಚ್ಚು ಅನಿಸಿದೆ. ಇಂತಹ ದುಸ್ಸಾಹಸವನ್ನು ಯಾರೂ ಮಾಡಬೇಡಿ, ಅರಣ್ಯದೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸಬೇಡಿ. ಶೌಚಕ್ಕೆ ಹೋಗುವುದು, ಪ್ರಾಣಿಗಳಿಗೆ ಆಹಾರ ನೀಡುವುದನ್ನು ಮಾಡಬೇಡಿ ಎಂದು ಆರೋಪಿ ಬಸವರಾಜ್ ವಿಡಿಯೊದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ?

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಕೆಕ್ಕನಹಳ್ಳ ಪ್ರದೇಶದ ಬಳಿ ಕಾಡಾನೆ ವಾಹನ ಅಡ್ಡಗಟ್ಟಿ ತರಕಾರಿ ತಿನ್ನುತ್ತಿದ್ದಾಗ ತಮಿಳುನಾಡಿನ ಮಧುಮಲೈಯಿಂದ ಬಂಡೀಪುರದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಪ್ರವಾಸಿಗ ಬಸವರಾಜು ಆನೆ ಛಾಯಾಚಿತ್ರ ತೆಗೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಕಾಡಾನೆ ಆತನ ಮೇಲೆ ದಾಳಿಗೆ ಮುಂದಾಗಿದೆ. ಘಟನೆಯಲ್ಲಿ ಬಸವರಾಜು ಕಾಡಾನೆ ತುಳಿತದಿಂದ ಬಚಾವ್‌ ಆಗಿದ್ದು, ರಸ್ತೆಯಲ್ಲಿ ಬಿದ್ದ ರಭಸಕ್ಕೆ ಕಾಲು, ಕೈ ಹಾಗೂ ಮುಖಕ್ಕೆ ತರಚಿದ ಗಾಯಗಳಾಗಿದೆ. ನಂತರ ಸಹಪಾಠಿಗಳು ಆತನನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಸಣ್ಣಪುಟ್ಟ ಗಾಯವಾದ ಹಿನ್ನೆಲೆ ನಂಜನಗೂಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.