ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BK Hariprasad: ಕಾಂಗ್ರೆಸ್‌ ಅಧ್ಯಕ್ಷರಾಗಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದರೆ ಡಿಕೆಶಿ ಕ್ಷಮೆ ಕೇಳಲಿ: ಬಿಕೆ ಹರಿಪ್ರಸಾದ್

DK Shivakumar: ಕಾಂಗ್ರೆಸ್ ಅಧ್ಯಕ್ಷರಾಗಿ ಅವರು ಡಿಕೆ ಶಿವಕುಮಾರ್‌ ಆ ರೀತಿ ಹೇಳುವ ಹಾಗೆ ಇಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ. ಯಾಕೆಂದರೆ, ಮಹಾತ್ಮ ಗಾಂಧಿಯವರನ್ನು ಕೊಂದಂಥ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ ಎಂದರು.

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಲಿ: ಬಿಕೆ ಹರಿಪ್ರಸಾದ್

ಬಿಕೆ ಹರಿಪ್ರಸಾದ್

ಹರೀಶ್‌ ಕೇರ ಹರೀಶ್‌ ಕೇರ Aug 25, 2025 1:27 PM

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿಧಾನಸಭೆಯಲ್ಲಿ ಆರ್​​ಎಸ್​ಎಸ್ (RSS) ಗೀತೆ ಹಾಡಿದ್ದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಆಗ್ರಹಿಸಿದ್ದಾರೆ.

ಆರ್​ಎಸ್​​ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಡೆಪ್ಯುಟಿ ಮುಖ್ಯಮಂತ್ರಿಗಳಾಗಿ ಸಂಘದ ಪ್ರಾರ್ಥನೆ ಮಾಡಿದರೆ ನಮ್ಮದೇನೂ ಅಭ್ಯಂತರವಿಲ್ಲ. ಯಾಕೆಂದರೆ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ, ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ. ಅದರಲ್ಲಿ ಆರ್​ಎಸ್​ಎಸ್​ನವರೂ ಇದ್ದಾರೆ, ಜಮಾಅತ್ ಇಸ್ಲಾಮಿ ಅವರೂ ಇದ್ದಾರೆ, ಎಲ್ಲರೂ ಇದ್ದಾರೆ. ತಾಲಿಬಾನಿಗಳೂ ಇದ್ದಾರೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಅವರು (ಡಿಕೆಶಿ) ಆ ರೀತಿ ಹೇಳುವ ಹಾಗೆ ಇಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ. ಯಾಕೆಂದರೆ, ಮಹಾತ್ಮ ಗಾಂಧಿಯವರನ್ನು ಕೊಂದಂಥ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ ಎಂದರು.

ಡಿಕೆ ಶಿವಕುಮಾರ್​​ಗೆ ಹಲವು ಮುಖಗಳಿವೆ. ಅವರು ಕೃಷಿಕರು ಎಂದು ಹೇಳಿಕೊಳ್ಳುತ್ತಾರೆ. ಆಮೇಲೆ ಒಮ್ಮೊಮ್ಮೆ ಕ್ವಾರಿ ಮಾಲೀಕ, ಎಜುಕೇಷನಿಸ್ಟ್, ಉದ್ಯಮಿ ಎಂದೆಲ್ಲ ಹೇಳಿಕೊಳ್ಳುತ್ತಾರೆ. ಹೀಗಾಗಿ ಯಾರಿಗೆ ಸಂದೇಶ ಕೊಡಬೇಕು ಎಂಬುದನ್ನು ಅವರು ಗಮನದಲ್ಲಿ ಇಟ್ಟುಕೊಂಡಿದ್ದಾರೆ ನಮಗೆ ಗೊತ್ತಿಲ್ಲ. ಯಾರನ್ನು ಮೆಚ್ಚಿಸುವುದಕ್ಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಉಪ ಮುಖ್ಯಮಂತ್ರಿಯಾಗಿ ಹಾಗೆ ಮಾಡಿದ್ದರೆ ನಮ್ಮದೇನೂ ಅಭ್ಯಂತರ ಇಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ ಎಂದು ಹರಿಪ್ರಸಾದ್ ಹೇಳಿದರು.

ಇದನ್ನೂ ಓದಿ: DK Shivakumar: ನೂತನ ಹೆಬ್ಬಾಳ ಫ್ಲೈಓವರ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ರೋಡ್‌ಕಿಂಗ್‌ ಸವಾರಿ