Road Accident: ಅಥಣಿಯಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ತಂದೆ-ಮಗಳ ದುರ್ಮರಣ
Road Accident: ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಭೀಕರ ಅಪಘಾತ ನಡೆದಿದ್ದು, ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.


ಬೆಳಗಾವಿ: ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತಂದೆ ಹಾಗೂ ಮಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ನಡೆದಿದೆ. ಮೃತರನ್ನು ರಾಮು ಕರ್ಣಿ (28) ಹಾಗೂ ಮಗಳು ಜಾಹ್ನವಿ ಕರ್ಣಿ (11) ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ರಾಮು ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅನಂತಪುರ ಗ್ರಾಮದ ಸೋದರ ಸಂಬಂಧಿ ಮದುವೆಗೆ ಇವರು ಬಂದಿದ್ದರು. ಬೈಕ್ನ ಹಿಂಬದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ದುರಂತ ಸಂಭವಿಸಿದ್ದು, ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಈ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು
ಸಿಂಧನೂರು: ಮಂಗಳೂರಿನ ಸುರತ್ಕಲ್ ರಸ್ತೆಯ ಬಳಿ ಭೀಕರ ಕಾರು ಅಪಘಾತ (Car Accident) ಸಂಭವಿಸಿದ್ದು, ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ (50) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಕಾರಟಗಿಯ ಪ್ರದೀಪ್ ಕೋಲ್ಕರ್ ಮತ್ತು ಮತ್ತೊಬ್ಬ ಗಾಯಾಳು ಗಂಗಾವತಿಯ ರಂಘುನಾಥ ಎಂಬುವವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ಬದಿ ಕಾರು ನಿಲ್ಲಿಸಿ, ಡಿವೈಡರ್ ದಾಟುವ ಸಮಯದಲ್ಲಿ ವೇಗವಾಗಿ ಬಂದ ಕಾರು ಬಡಿದು ದೀಪುಗೌಡ ಕೊನೆಯುಸಿರೆಳೆದಿದ್ದಾರೆ.
ಈ ಸುದ್ದಿಯನ್ನೂ ಓದಿ | Physical abuse: ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ಸಿಂಧನೂರಿನ ದೀಪುಗೌಡ, ಕಾರಟಗಿಯ ಪ್ರದೀಪ್ ಕೋಲ್ಕರ್ ಮತ್ತು ಗಂಗಾವತಿಯ ಸಮರ್ಥ ಮೋಟಾರ್ಸ್ ಮಾಲೀಕ ರಂಘುನಾಥ ಅವರು, ರಸ್ತೆ ಬದಿ ಕಾರು ನಿಲ್ಲಿಸಿ ವಿಭಜಕ ದಾಟುವ ವೇಳೆ ಅಪಘಾತ ನಡೆದಿದೆ. ಭಾನುವಾರ ಬೆಳಗ್ಗೆ ದೀಪುಗೌಡರ ಮೃತದೇಹವನ್ನು ಸಿಂಧನೂರಿಗೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪಘಾತದ ಸುದ್ದಿ ತಿಳಿಯುತಿದ್ದಂತೆ ದೀಪುಗೌಡರ ಸಂಬಂಧಿಕರು, ಸ್ನೇಹಿತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೀಪುಗೌಡ ಮತ್ತು ಶಾಸಕ ಹಂಪನಗೌಡ ಬಾದರ್ಲಿ ಅವರ ನಿವಾಸದಲ್ಲಿ ಸೇರಿದ್ದಾರೆ.
ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್ಮನ್ಗೆ ಹಿಗ್ಗಾಮುಗ್ಗಾ ಥಳಿತ!
ಬೆಳಗಾವಿ: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋಗಿದ್ದ ಲೈನ್ಮನ್ನನ್ನು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ದುಪಧಾಳ ಗ್ರಾಮದಲ್ಲಿ ನಡೆದಿದೆ. 17,146 ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ವಸೂಲಿಗೆಂದು ಲೈನ್ಮನ್ ಪ್ರಮೋದ ಮಾಳಗಿ ಹೋಗಿದ್ದರು. ಆದರೆ, ಖಾದಿರಸಾಬ ಪಠಾಣ ಎಂಬ ಗ್ರಾಹಕ ಬಿಲ್ ಪಾವತಿಸಲು ನಿರಾಕರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಲೈನ್ಮನ್ ಮೇಲೆ ಹಲ್ಲೆ ಗ್ರಾಹಕ ನಡೆಸಿದ್ದಾರೆ ಎನ್ನಲಾಗಿದೆ. ಗೋಕಾಕ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲೈನ್ಮನ್ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.