H.G. Sannaguddaiah Award: ಚ.ಹ.ರಘುನಾಥ, ರೂಪಾ ಹಾಸನಗೆ ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿ
H.G. Sannaguddaiah Award: ಲಲಿತ ಪ್ರಬಂಧವನ್ನೂ ಒಳಗೊಂಡಂತೆ ಗದ್ಯ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವ ರಘುನಾಥ ಚ.ಹ. ಹಾಗೂ ಕಾವ್ಯಕ್ಷೇತ್ರ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ರೂಪ ಹಾಸನ ಅವರಿಗೆ ಈ ವರ್ಷದ ಪ್ರೊ. ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ತುಮಕೂರು: ‘ಸುಧಾ’ ಮತ್ತು ‘ಮಯೂರ’ ಪತ್ರಿಕೆಗಳ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಹಾಗೂ ಕವಯಿತ್ರಿ ರೂಪ ಹಾಸನ ಅವರು ಪ್ರೊ. ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ. ದಿ.ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಅವರು ತುಮಕೂರು ಜಿಲ್ಲೆಗೆ ಸೇರಿದವರಾಗಿದ್ದು, ಲಲಿತಪ್ರಬಂಧ, ವಿಮರ್ಶೆ ಮತ್ತು ಕಾವ್ಯಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿದ್ದಾರೆ. ತುಮಕೂರು ವಲಯದಲ್ಲಿ ಪ್ರಗತಿಪರ ವಿಚಾರಧಾರೆಯ ವಿಸ್ತರಣೆಗೆ ಕಾರಣರಾಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಾನವು ಕಳೆದ ಎರಡು ವರ್ಷಗಳಿಂದ ಲಲಿತಪ್ರಬಂಧ, ಗದ್ಯ ಮತ್ತು ಕಾವ್ಯಕ್ಷೇತ್ರದ ತಲಾ ಒಬ್ಬರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ.
ಈ ವರ್ಷದ ಪ್ರಶಸ್ತಿಯನ್ನು ಲಲಿತ ಪ್ರಬಂಧವನ್ನೂ ಒಳಗೊಂಡಂತೆ ಗದ್ಯ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವ ರಘುನಾಥ ಚ.ಹ. ಹಾಗೂ ಕಾವ್ಯಕ್ಷೇತ್ರ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ರೂಪ ಹಾಸನ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆ. 21 ರಂದು ತುಮಕೂರು ವಿಶ್ವವಿದ್ಯಾನಿಲಯದ ನಡೆಯಲಿದೆ.
ವಿಮರ್ಶಕರಾದ ಡಾ.ಎಚ್.ಎಸ್.ರಾಘವೇಂದ್ರರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಧ್ಯಕ್ಷತೆ ವಹಿಸುವರು. ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಆಶಯ ನುಡಿ ಆಡಲಿದ್ದಾರೆ. ಪ್ರೊ. ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಬಸವಯ್ಯ, ಎಸ್. ನಾಗಣ್ಣ, ಶಾಂತಾ ಸಣ್ಣಗುಡ್ಡಯ್ಯ, ಡಾ. ಪ್ರಕಾಶ್ ಎಂ ಶೇಠ್, ಡಾ.ರೇಣುಕಪ್ರಸಾದ್ ಉಪಸ್ಥಿತರಿರುವರು.
ಈ ಸುದ್ದಿಯನ್ನೂ ಓದಿ | Sarvajna Jayanti: ತಮಿಳುನಾಡಿನಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಿಸಿದ ದಿನೇಶ್ ಗುಂಡೂರಾವ್ ಅಭಿಮಾನಿಗಳು
ಗುಂಜಾಳಗೆ ಬಸವ ಪುರಸ್ಕಾರ, ವಿವೇಕ್ ರೈಗೆ ಪಂಪ ಪ್ರಶಸ್ತಿ; 19 ಪುರಸ್ಕೃತರ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ರಾಜ್ಯ ಸರ್ಕಾರದ (Karnataka Government) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25 ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು (Karnataka State Awards) ಘೋಷಣೆ ಮಾಡಲಾಗಿದೆ. ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ 19 ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.
ರಾಷ್ಟ್ರೀಯ ಪ್ರಶಸ್ತಿ ವಿಭಾಗದಲ್ಲಿ ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ನಾಲ್ವರು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾ.ಎಸ್.ಆರ್. ಗುಂಜಾಳ ಅವರು 'ಬಸವ ರಾಷ್ಟ್ರೀಯ ಪುರಸ್ಕಾರ', ಬೆಂಗಳೂರಿನ ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟ್ರಸ್ಟ್ ಗೆ 'ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ', ಬಸಪ್ಪ ಎಚ್. ಭಜಂತ್ರಿಯವರು 'ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ' ಹಾಗೂ ಮುಂಬೈಯ ಬೇಗಂ ಪರ್ವೀನ್ ಸುಲ್ತಾನಾ ಅವರು 'ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಈ ನಾಲ್ಕು ಪ್ರಶಸ್ತಿಗಳು ತಲಾ 10 ಲಕ್ಷ ರೂ. ನಗದು, ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತವೆ.
ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕೆ.ರಾಜ್ ಕುಮಾರ್ ಅವರು 'ಸಂಗೊಳ್ಳಿ ರಾಯಣ್ಣ ಪ್ರಶಸ್ತಿ', ಡಾ.ಹೇಮಾ ಪಟ್ಟಣಶೆಟ್ಟಿಯವರು 'ಅಕ್ಕಮಹಾದೇವಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ, ನಾಟಕ ವಿಭಾಗದಲ್ಲಿ ಡಾ. ಬಿ.ಎ.ವಿವೇಕ ರೈಯವರು 'ಪಂಪ ಪ್ರಶಸ್ತಿ', ಸ. ರಘುನಾಥ ಅವರು 'ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ', ಡಾ. ವೈ.ಸಿ. ಭಾನುಮತಿಯವರು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಜೆ. ಲೋಕೇಶ್ ಅವರು ಬಿ.ವಿ. ಕಾರಂತ ಪ್ರಶಸ್ತಿ, ಕೆ. ನಾಗರತ್ನಮ್ಮ ಅವರು ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಎಲ್.ಹನುಮಂತಯ್ಯನವರು ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ ಎಂ.ಜೆ. ಕಮಲಾಕ್ಷಿಯವರು ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಎಂ. ರಾಮಮೂರ್ತಿಯವರು ಜಕಣಚಾರಿ ಪ್ರಶಸ್ತಿ, ನಿಂಗಪ್ಪ ಭಜಂತ್ರಿಯವರು ಜಾನಪದಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಗೀತ-ನೃತ್ಯ ವಿಭಾಗದಲ್ಲಿ ಅನಂತ ತೇರದಾಳ(ಹಿಂದೂಸ್ಥಾನಿ ಗಾಯನ)ಯವರು ಶ್ರೀನಿಜಗುಣ-ಪುರಂದರ ಪ್ರಶಸ್ತಿ, ಡಾ. ಎ.ವಿ. ಪ್ರಸನ್ನ(ಗಮಕ ವ್ಯಾಖ್ಯಾನ)ರವರು ಕುಮಾರವ್ಯಾಸ ಪ್ರಶಸ್ತಿ, ಪದ್ಮಿನಿ ರವಿ (ಭರತನಾಟ್ಯ)ಯವರು ಶಾಂತಲಾ ನಾಟ್ಯ ಪ್ರಶಸ್ತಿ, ಪ್ರೊ. ಎಸ್. ಮಲ್ಲಣ್ಣ(ಸುಗಮ ಸಂಗೀತ)ರವರು ಸಂತ ಶಿಶುನಾಳ ಶರೀಫ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ 15 ಪ್ರಶಸ್ತಿಗಳು ತಲಾ 5 ಲಕ್ಷ ರೂ. ನಗದು, ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟನೆ ತಿಳಿಸಿದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ:
ಬಸವ ರಾಷ್ಟ್ರೀಯ ಪುರಸ್ಕಾರ - ಡಾ. ಎಸ್. ಆರ್. ಗುಂಜಾಳ ಧಾರವಾಡ.
ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ - ಪಂಡಿತರತ್ನ ಎ.ಶಾಂತಿರಾಜ., ಶಾಸ್ತ್ರೀ ಟ್ರಸ್ಟ್ ಬೆಂಗಳೂರು
ಟಿ ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ - ಬಸಪ್ಪ ಎಚ್ ಭಜಂತ್ರಿ ಬಾಗಲಕೋಟ
ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ - ಬೇಗಂ ಪರ್ವೀನ್ ಸುಲ್ತಾನ್ ಮುಂಬಯಿ
ಪಂಪ ಪ್ರಶಸ್ತಿ - ಡಾ ಬಿ ಎ ವಿವೇಕ ರೈ ದಕ್ಷಿಣ ಕನ್ನಡ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ - ಕೆ ರಾಜಕುಮಾರ ಕೋಲಾರ
ಅಕ್ಕಮಹಾದೇವಿ ಪ್ರಶಸ್ತಿ - ಡಾ ಹೇಮಾ ಪಟ್ಟಣಶೆಟ್ಟಿ ಧಾರವಾಡ
ಪ್ರೋ. ಕೆ. ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ - ಸ.ರಘುನಾಥ್, ಕೋಲಾರ
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ - ಡಾ. ವೈ. ಸಿ. ಭಾನುಮತಿ, ಹಾಸನ
ಬಿ.ವಿ. ಕಾರಂತ ಪ್ರಶಸ್ತಿ - ಜೆ. ಲೋಕೇಶ್, ಬೆಂಗಳೂರು
ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ - ಕೆ. ನಾಗರತ್ನಮ್ಮ, ಮರಿಯಮ್ಮನಹಳ್ಳಿ ವಿಜಯನಗರ
ಡಾ.ಸಿದ್ಧಲಿಂಗಯ್ಯ ಸಾಹಿತ್ಯ ಪ್ರಶಸ್ತಿ - ಡಾ.ಎಲ್ ಹನುಮಂತಯ್ಯ ಬೆಂಗಳೂರು
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ - ಎಂ ಜೆ ಕಮಲಾಕ್ಷಿ, ಬೆಂಗಳೂರು
ಜಕಣಾಚಾರಿ ಪ್ರಶಸ್ತಿ - ಎಂ. ರಾಮಮೂರ್ತಿ, ಬೆಂಗಳೂರು
ಜಾನಪದ ಶ್ರೀ ಪ್ರಶಸ್ತಿ - ನಿಂಗಪ್ಪ ಭಜಂತ್ರಿ ಕಲ್ಬುರ್ಗಿ ಮತ್ತು ದೊಡ್ಡಗವಿಬಸಪ್ಪ, ಚಾಮರಾಜನಗರ
ನಿಜಗುಣ ಪುರಂದರ ಪ್ರಶಸ್ತಿ - ಅನಂತ ತೆರದಾಳ, ಬೆಳಗಾವಿ ( ಹಿಂದುಸ್ತಾನಿ ಗಾಯನ )
ಕುಮಾರವ್ಯಾಸ ಪ್ರಶಸ್ತಿ - ಡಾ.ಎ ವಿ ಪ್ರಸನ್ನ, ಹಾಸನ ( ಗಮಕ ವ್ಯಾಖ್ಯಾನ)
ಶಾಂತಲಾ ನಾಟ್ಯ ಪ್ರಶಸ್ತಿ - ಪದ್ಮಿನಿ ರವಿ, ಬೆಂಗಳೂರು ( ಭರತನಾಟ್ಯ)
ಸಂತ ಶಿಶುನಾಳ ಷರೀಫ್ ಪ್ರಶಸ್ತಿ - ಪ್ರೋ. ಮಲ್ಲಣ್ಣ, ಚಾಮರಾಜನಗರ ( ಸುಗಮ ಸಂಗೀತ )
ಇದನ್ನೂ ಓದಿ: KUWJ awards: ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ; ಯಾರಿಗೆ ಯಾವ ಪ್ರಶಸ್ತಿ?