Murder Case: ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!
Murder Case: ಉಡುಪಿ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಮಾಡಿದ್ದ ಪತಿ, ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಪತ್ನಿಯನ್ನು ಸಿಟ್ಟಿನಿಂದ ಗುರುವಾರ ರಾತ್ರಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.


ಬ್ರಹ್ಮಾವರ: ಹೆಚ್ಚಾಗಿ ಮೊಬೈಲ್ ಬಳಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೊಬ್ಬ ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ (Murder Case) ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರೇಖಾ ಕೊಲೆಯಾದ ಮಹಿಳೆ. ಪತಿ ಗಣೇಶ್ ಪೂಜಾರಿ ಕೊಲೆ ಮಾಡಿದ ಆರೋಪಿ.
ಆರೋಪಿ ಗಣೇಶ್ ಪೂಜಾರಿ ವಿಪರೀತ ಮದ್ಯ ವ್ಯಸನ ಚಟವುಳ್ಳವನಾಗಿದ್ದ. ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಮದ್ಯ ಸೇವನೆ ಮಾಡಿ ಗುರುವಾರ ರಾತ್ರಿ ಮನೆಯಲ್ಲಿ ಆಕೆಯನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಣೇಶ್ ಪೂಜಾರಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸೀಮಂತ ನಿಗದಿಪಡಿಸಿ ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

ಮಂಗಳೂರು: ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ (Pregnant) ಹಾಗೂ ಆಕೆಯ ಗಂಡನ ಮೃತದೇಹ ಪತ್ತೆಯಾಗಿವೆ. ಪತ್ನಿಯನ್ನು (Wife) ಕೊಲೆ ಮಾಡಿ ಪತಿ (Husband) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಈ ದುರಂತ ಘಟನೆ ದಕ್ಷಿಣ ಕನ್ನಡದ (Dakshina Kannada) ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ ಅವರ ಪತ್ನಿ ಜಯಂತಿ (45) ಮೃತರು. ಕಳೆದ ಕೆಲವು ವರ್ಷಗಳಿಂದ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಪತ್ನಿಯ ಮನೆಯಲ್ಲೇ ಸಂಸಾರ ನಡೆಸುತ್ತಿದ್ದರು.
ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ತಿಮ್ಮಪ್ಪ ರಾಮ ಮೂಲ್ಯ ಅವರ ಮನೆಯಿಂದ ಯಾರೂ ಹೊರಬಾರದಿದ್ದುದನ್ನು ಗಮನಿಸಿ ಮನೆಗೆ ಹೋಗಿ ನೋಡಿದಾಗ ಮನೆಯ ಬಾಗಿಲು ತೆರೆದೇ ಇತ್ತು. ಒಳ ನೋಡಿದಾಗ ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣು ಬಿಗಿದುಕೊಂಡಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿದ್ದು, ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಮತ್ತು ತಿಮ್ಮಪ್ಪರ ಸಹೋದರ ವಿಶ್ವನಾಥ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗುಂಡಿಯ ನಿವಾಸಿ ಜಯಂತಿ ಮತ್ತು ಮಿತ್ತಮಜಲು ನಿವಾಸಿ ತಿಮ್ಮಪ್ಪ ಮದುವೆಯಾಗಿ 15 ವರ್ಷಗಳಾಗಿತ್ತು, 15 ವರ್ಷದ ನಂತರ ಜಯಂತಿ ಗರ್ಭಿಣಿಯಾಗಿದ್ದರು. ಜುಲೈ 2ರಂದು ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದನ್ನೂ ಓದಿ: Murder Case: ಮದುವೆಯಾಗುವ ಸಲುವಾಗಿ ಗೋವಾಗೆ ಪ್ರಯಾಣ; ಮಾರ್ಗ ಮಧ್ಯದಲ್ಲೇ ಗೆಳತಿಯ ಕತ್ತು ಸೀಳಿ ಕೊಲೆಗೈದ ಪ್ರೇಮಿ!