ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mango, tomato sales: ಮಾವು, ಟೊಮೇಟೊ ಮಾರಾಟಕ್ಕೆ ವ್ಯವಸ್ಥೆ ಮಾಡಲು ವಿಶೇಷ ಸಮಿತಿ ರಚನೆಗೆ ಸರ್ಕಾರ ಆದೇಶ

Mango, tomato sales: ಕೋಲಾರ ಜಿಲ್ಲೆಯಲ್ಲಿ ಮಾವು ಮತ್ತು ಟೊಮೇಟೊ ಬೆಲೆ ವಿವಿಧ ಕಾರಣಗಳಿಂದ ಕುಸಿತದಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವುದರಿಂದ ಬೆಂಬಲ ಬೆಲೆ ನೀಡುವಂತೆ ಜಿಲ್ಲೆಯ ರೈತರು ಕೋರಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಮಾವು, ಟೊಮೇಟೊ ಮಾರಾಟಕ್ಕೆ ವ್ಯವಸ್ಥೆಗಾಗಿ ವಿಶೇಷ ಸಮಿತಿ ರಚನೆ

Profile Prabhakara R Jun 10, 2025 9:28 PM

ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ಮಾವು ಮತ್ತು ಟೊಮೇಟೊ (Mango, tomato sales) ಬೆಲೆ ಕುಸಿತದಿಂದ ಭಾರಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ನೀಡಲು ರೈತರು ಮನವಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮಾವು, ಟೊಮೇಟೊ ಸೇರಿ ಮಾರಾಟವಾಗುವುದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಶೇಷ ಸಮಿತಿ ರಚಿಸಲು ಸೂಚನೆ ನೀಡಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ನಿರ್ದೇಶನ ನೀಡಿದ್ದಾರೆ

ಕೋಲಾರ ಜಿಲ್ಲೆಯಲ್ಲಿ ಮಾವು ಮತ್ತು ಟೊಮೇಟೊ ಬೆಲೆ ವಿವಿಧ ಕಾರಣಗಳಿಂದ ಕುಸಿತದಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವುದರಿಂದ ಬೆಂಬಲ ಬೆಲೆ ನೀಡುವಂತೆ ಜಿಲ್ಲೆಯ ರೈತರು ಕೋರಿರುವುದಾಗಿ ಡಿಸಿ ಕೋರಿದ್ದಾರೆ. ಹೀಗಾಗಿ ರಾಜ್ಯದ ಪ್ರಮುಖ ಮಾವು ಮತ್ತಿತರ ಬೆಳೆಗಳ ಪರಿಮಾಣ ಹಾಗೂ ಲಭ್ಯತೆಗನುಗುಣವಾಗಿ ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣಾ ಘಟಕಗಳ ಸಾಮರ್ಥ್ಯದ ಮಾಹಿತಿಯನ್ನು ಪಡೆದು ಸಂಸ್ಕರಣೆದಾರರು, ಮಾರುಕಟ್ಟೆದಾರರೊಂದಿಗೆ ಸಮನ್ವಯ ಸಾಧಿಸಿ ರೈತರಿಂದ ನೇರವಾಗಿ ಸಂಸ್ಕರಣೆದಾರರು, ಮಾರುಕಟ್ಟೆದಾರರಿಗೆ ಉತ್ಪನ್ನಗಳು ಮಾರಾಟವಾಗುವುದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು.

ರಾಜ್ಯ ಮಟ್ಟದಲ್ಲಿ ತೋಟಗಾರಿಕೆ ಇಲಾಖೆ ನಿರ್ದೇಶಕರು, ಸಣ್ಣ, ಮಧ್ಯಮ ಕೈಗಾರಿಕೆಗಳ ನಿರ್ದೇಶಕರು, ಎಪಿಎಂಸಿ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರನ್ನೊಳಗೊಂಡಂತೆ ಸಮಿತಿಯನ್ನು ರಚಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕರು, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅವರುಗಳನ್ನೊಳಗೊಂಡ ಸಮಿತಿಗಳನ್ನು ರಚಿಸಲು ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯದ ಮಾವಿನ ಹಣ್ಣಿಗೆ ನಿಷೇಧ; ಆದೇಶ ಹಿಂಪಡೆಯಲು ಮುಖ್ಯ ಕಾರ್ಯದರ್ಶಿ ಪತ್ರ

ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳ ಆಮದನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವುದು ಕಳವಳಕಾರಿ ವಿಚಾರವಾಗಿದೆ. ನೆರೆ ರಾಜ್ಯಗಳಿಂದ ಮಾವು ಪೂರೈಕೆ ತಡೆಗೆ ತಮಿಳುನಾಡು ಮತ್ತು ಕರ್ನಾಟಕದ ಗಡಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು‌ ನಿಯೋಜಿಸಿರುವು ನಮ್ಮ ಗಮನಕ್ಕೆ ಬಂದಿದೆ.

ಈ ದಿಢೀರ್ ಮತ್ತು ಏಕಪಕ್ಷೀಯ ನಿರ್ಬಂಧವು ಕರ್ನಾಟಕದ ಮಾವಿನ ರೈತರಿಗೆ, ವಿಶೇಷವಾಗಿ ಹೆಚ್ಚಿನ ಪ್ರಮಾಣದಲ್ಲಿ ತೋತಾಪುರಿ ಮಾವಿನ ಹಣ್ಣುಗಳನ್ನು ಬೆಳೆಯುವ ಮತ್ತು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಚಿತ್ತೂರು ಮೂಲದ ಸಂಸ್ಕರಣಾ ಘಟಕಗಳನ್ನು ಹೆಚ್ಚು ಅವಲಂಬಿಸಿರುವ ಗಡಿ ಜಿಲ್ಲೆಗಳ ರೈತರಿಗೆ ಭಾರಿ ತೊಂದರೆಯನ್ನುಂಟುಮಾಡಿದೆ. ದೀರ್ಘಕಾಲದಿಂದ ನಡೆಯುತ್ತಿರುವ ಅಂತಾರಾಜ್ಯ ವ್ಯಾಪಾರಕ್ಕೆ ಅಡಚಣೆ ಆಗಿರುವುದರಿಂದ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ.

ರೈತರಿಗೆ ಆರ್ಥಿಕ ಸಂಕಷ್ಟವನ್ನುಂಟುಮಾಡುವುದರ ಜೊತೆಗೆ, ಇಂತಹ ಕ್ರಮವು ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವವನ್ನು ಹಾಳು ಮಾಡುತ್ತದೆ ಮತ್ತು ಪ್ರತೀಕಾರದ ಭಾವನೆಗಳನ್ನು ಪ್ರಚೋದಿಸುವ ಅಪಾಯಗಳನ್ನುಂಟು ಮಾಡುತ್ತದೆ. ಇದರಿಂದ ಕರ್ನಾಟಕದ ರೈತರು, ಆಂಧ್ರಪ್ರದೇಶದಿಂದ ಬರುವ ತರಕಾರಿಗಳ ಪೂರೈಕೆಗೆ ವಿರೋಧಿಸುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಪ್ರಯತ್ನಿಸಬೇಕು.

ಈ ಸುದ್ದಿಯನ್ನೂ ಓದಿ | Caste census: ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಈ ವಿಷಯದಲ್ಲಿ ತಕ್ಷಣ ತಮ್ಮ ಆದೇಶವನ್ನು ರದ್ದುಗೊಳಿಸಲು ಚಿತ್ತೂರು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇನೆ. ಆಂಧ್ರಪ್ರದೇಶ ಸರ್ಕಾರವು ಈ ವಿಷಯದಲ್ಲಿ ರೈತರ ಹಿದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಭಾವಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.