ನರೇಗಾ ಕೂಲಿಕಾರರಿಗೆ ಕೇಂದ್ರ ನೀಡಿದ ಹಣವನ್ನು ರಾಜ್ಯದವರು ನೀಡುವಂತೆ ಕಾಗೇರಿ ಆಗ್ರಹ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಅಡಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಕಳೆದ ಐದಾರು ತಿಂಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಕುರಿತು ನೌಕರರು ನೀಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯ ಸರ್ಕಾರವು ತಕ್ಷಣವೇ ಬಾಕಿ ವೇತನ ಬಿಡುಗಡೆಗೊಳಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ


ಶಿರಸಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಅಡಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಕಳೆದ ಐದಾರು ತಿಂಗಳಿಂದ ವೇತನ ವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಕುರಿತು ನೌಕರರು ನೀಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯ ಸರ್ಕಾರವು ತಕ್ಷಣವೇ ಬಾಕಿ ವೇತನ ಬಿಡುಗಡೆಗೊಳಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನೆಯಲ್ಲಿ, ಕೇಂದ್ರ ಸರ್ಕಾರದಿಂದ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಯಾಗಿರುವುದು ದೃಢಪಟ್ಟಿದೆ.
ಇದನ್ನೂ ಓದಿ: Vishweshwar Hegde Kageri Interview: ಶಾಸಕರ ಅಮಾನತು, ಕ್ಷೇತ್ರದ ಜನತೆಗೆ ಮಾಡಿದ ಅಪಮಾನ
ಆದರೆ, ಈ ಹಣವನ್ನು ರಾಜ್ಯ ಸರ್ಕಾರವು ನೌಕರರಿಗೆ ತಲುಪಿಸಬೇಕಾಗಿದ್ದು, ಕಳೆದ ಹಲವಾರು ತಿಂಗಳಿಂದ ಹಣ ಬಿಡುಗಡೆಯಾಗದೆ ನೌಕರರು ಆರ್ಥಿಕವಾಗಿ ತೊಂದರೆಗೊಳಗಾಗಿದ್ದಾರೆ. ತಮ್ಮ ಕುಟುಂಬ ನಿರ್ವಹಣೆಗೆ ಪರದಾಡುತ್ತಿರುವ ಈ ನೌಕರರಿಗೆ ವೇತನ ವಿಳಂಬದಿಂದಾಗಿ ದೈನಂದಿನ ಜೀವನ ನಡೆಸುವುದು ಅಸಾಧ್ಯವಾಗಿದೆ.
ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಈ ವಿಷಯದ ತುರ್ತು ಸ್ವರೂಪವನ್ನು ಅರಿತು, ಯಾವುದೇ ವಿಳಂಬವಿಲ್ಲದೆ ತಕ್ಷಣವೇ ನರೇಗಾ ಹೊರಗುತ್ತಿಗೆ ನೌಕರರ ಬಾಕಿ ವೇತನವನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ. ಯಾವುದೇ ರೀತಿಯ ತಾಂತ್ರಿಕ ಅಡಚಣೆ ಅಥವಾ ಆಡಳಿತಾತ್ಮಕ ವಿಳಂಬಗಳು ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಹರಿಸಿ ಸಮಸ್ಯೆಯನ್ನು ನಿವಾರಿಸಬೇಕು ಮತ್ತು ನೌಕರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.