Karnataka High Court: ಜಾತಿ ನಿಂದನೆ ಪ್ರಕರಣ, ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿಗೆ ಹೈಕೋರ್ಟ್ ರಿಲೀಫ್
Karnataka High court : ಜಾತಿ ನಿಂದನೆ, ದ್ವೇಷ ಸಾಧನೆ ಕುರಿತು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕ ಆರ್.ಮಂಜುನಾಥ್ ನೀಡಿದ್ದ ದೂರಿನ ಅನ್ವಯ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ನಿರಂಜನ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನಿರಂಜನ ವಾನಳ್ಳಿ

ಬೆಂಗಳೂರು: ಜಾತಿ ನಿಂದನೆ (Atrocity) ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (Bengaluru north University) ಕುಲಪತಿ (Vice Chancellor) ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಮಧ್ಯಂತರ ತಡೆ ನೀಡಿದೆ. ಈ ಕುರಿತಂತೆ ನಿರಂಜನ ವಾನಳ್ಳಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಸ್.ಸಮ್ಮಿತ್ ಮಂಡಿಸಿದ ವಾದ ಮನ್ನಿಸಿದ ನ್ಯಾಯಪೀಠ, ಪ್ರಕರಣದ ಮುಂದಿನ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿತು. 'ವಿಶ್ವವಿದ್ಯಾಲಯದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ನಾನು ನೀಡಿದ್ದ ದೂರುಗಳ ಹಿನ್ನೆಲೆಯಲ್ಲಿ, ಕುಲಪತಿ ನಿರಂಜನ ವಾನಳ್ಳಿ ಅವರು ನನ್ನ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ' ಎಂದು ಆರೋಪಿಸಿ, ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕ ಆರ್.ಮಂಜುನಾಥ್ ನೀಡಿದ್ದ ದೂರಿನ ಅನ್ವಯ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ನಿರಂಜನ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಶಿಕ್ಷಣವೇ ಶ್ರೇಷ್ಠ ದಾನ: ಎಸ್ ಆರ್ ಶ್ರೀನಿವಾಸ್
ಗುಬ್ಬಿ: ಜಾಗತಿಕ ಯುಗದಲ್ಲಿ ಎಲ್ಲಾ ರಂಗದಲ್ಲೂ ಅಂಕ ಗಳಿಕೆಯೇ ಮಾನದಂಡವಾಗಿದೆ. ಆ ಕಾರಣ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿ ಸರ್ಕಾರ, ಪೋಷಕರು, ಸಮುದಾಯ ಎಲ್ಲರೂ ಒತ್ತು ನೀಡಿ ದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ದಾನ ಶ್ರೇಷ್ಠ ದಾನ ಎನಿಸಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಕಸಬ ಹೋಬಳಿ ಲಕ್ಕೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಎಲ್ ಕೆಜಿ ಯುಕೆಜಿ ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಇಲಾಖೆಗೆ ಸರ್ಕಾರ 33 ಸಾವಿರ ಕೋಟಿ ರೂಗಳನ್ನು ಮೀಸಲಿಟ್ಟು ಅಭಿವೃದ್ದಿ ಮಾಡುತ್ತಿದೆ. ಎಲ್ಲಾ ರೀತಿಯ ಸವಲತ್ತು, ಬಿಸಿಯೂಟ, ಹಾಲು ಮೊಟ್ಟೆ ಇನ್ನಿತರ ಪೌಷ್ಟಿಕ ಆಹಾರ ನೀಡುತ್ತಿದೆ. ಎಲ್ಲವೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ. ಅನುತ್ಪಾದಕ ಇಲಾಖೆ ಎನ್ನುವ ಶಿಕ್ಷಣ ಇಲಾಖೆ ಮಾನವ ಸಂಪನ್ಮೂಲ ವೃದ್ಧಿ ಮಾಡುತ್ತದೆ ಎಂಬುದು ಸರ್ಕಾರಕ್ಕೆ ತಿಳಿದ ಹಿನ್ನಲೆ ವ್ಯಯ ಮಾಡಲಾಗಿದೆ ಎಂದರು.
ಇದನ್ನೂ ಓದಿ: Kannada New Movie: ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ