Karnataka Weather: ಇಂದು ಬೆಂಗಳೂರು, ಕೋಲಾರ, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka Weather Update: ರಾಜ್ಯದ ಬಹುತೇಕ ಕಡೆಗಳಲ್ಲಿ ಬುಧವಾರ (ಮೇ 7) ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಮಳೆ ಸುರಿಯಲಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರು ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ಬುಧವಾರ (ಮೇ 7) ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಮಳೆ ಸುರಿಯಲಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರು ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ (ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ). ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರಲಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ತಿಳಿಸಿದೆ.
ಎಲ್ಲೆಲ್ಲಿ ಮಳೆ ಸುರಿಯಲಿದೆ?
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಅಥವಾ 2 ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ 1 ಅಥವಾ 2 ಸ್ಥಳಗಳಲ್ಲಿ ಹಗುರ ಮಳೆ ಸುರಿಯಲಿದೆ. ಉಡುಪಿ ಜಿಲ್ಲೆಗೆ ಮಳೆ ಮುನ್ನೆಚ್ಚರಿಕೆ ಇಲ್ಲ. ಇಲ್ಲಿ ಒಣ ಹವೆ ಮುಂದುವರಿಯಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆ ಸುರಿಯಲಿದೆ. ಕೋಲಾರ, ಚಿತ್ರದುರ್ಗ, ರಾಮನಗರ, ಬೆಂಗಳೂರು (ನಗರ, ಗ್ರಾಮೀಣ), ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.
ಈ ಸುದ್ದಿಯನ್ನೂ ಓದಿ: Dinesh Gundu Rao: ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗೇಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ದಿನೇಶ್ ಗುಂಡೂರಾವ್
ಎಚ್ಚರಿಕೆ ವಹಿಸಿ
ಗುಡುಗು ಸಹಿತ ಸಹಿತ ಸುರಿಯುವ ಮಳೆಯಿಂದಾಗಿ ಕೃಷಿಗೆ, ದುರ್ಬಲ ಮನೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಜತೆಗೆ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ವಿದ್ಯುತ್ ಸಂಪರ್ಕದಿಂದ ದೂರ ಇರುವಂತೆಯೂ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮೇ 8ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕ ಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತ
ಸದ್ಯ ದಕ್ಷಿಣ ತೆಲಂಗಾಣ ಮತ್ತು ನೆರೆಹೊರೆಗಳಲ್ಲಿ ಈಗ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ವಾಯು ಚಂಡಮಾರುತ ಕಂಡು ಬಂದಿದೆ. ಇದು ತಮಿಳುನಾಡು ಮತ್ತು ತೆಲಂಗಾಣದ ಕೆಲವು ಕಡೆಗಳಲ್ಲಿ ಮಳೆ ಸುರಿಸುವ ಸಾಧ್ಯತೆ ಇದೆ.