ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kodi Mutt Swamiji: ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

Kodi Mutt Swamiji: ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದ ದುಃಖ ಬರಲಿದೆ. ರಾಜ್ಯ, ದೇಶಕ್ಕೂ ಅದು ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು.

ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

ಹರೀಶ್‌ ಕೇರ ಹರೀಶ್‌ ಕೇರ Jun 23, 2025 7:57 AM

ಹಾಸನ: ತಮ್ಮ ರಾಜಕೀಯ ಭವಿಷ್ಯವಾಚನಗಳಿಂದಾಗಿ ಸದಾ ಸುದ್ದಿಯಲ್ಲಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddramaiah) ಅವರ ಸ್ಥಾನಮಾನದ ಬಗ್ಗೆ ಕಾಲಜ್ಞಾನ (kodimath sree prediction) ನುಡಿದಿದ್ದಾರೆ. ಕರ್ನಾಟಕದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣಗಳು ಗೋಚರಿಸಲಿವೆ. ಆದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು. ಇನ್ನು ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು.

ಈ ಹಿಂದೆ ಎರಡು ಮೂರು ಪ್ರಧಾನ ಮಂತ್ರಿಗಳು ಕೊಲೆ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದೆ. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎದ್ದಿದೆ. ಅದು ಕೂಡ ಆಗಲಿದೆ ಎಂದು ತಿಳಿಸಿದರು. ವಿಶ್ವದಲ್ಲಿ ನಡೆಯುತ್ತಿರುವ ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟವಾಗಿದೆ. ಈ ದ್ವೇಷ, ಅಸೂಯೆಗಳ ಮಧ್ಯದಲ್ಲಿ ಒಂದಿಬ್ಬರು ಬಲಿಯಾಗುತ್ತಾರೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದರು.

ಕೊರೋನಾ ವಿಶ್ವದಲ್ಲಿ ಮತ್ತೊಂದು ರೂಪ ತಾಳಲಿದೆ. ಅಕಾಲದಲ್ಲಿ ಮಳೆ ಬಂದರೆ, ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ. ಆದರೆ ಜಲಸ್ಪೋಟದ ಜೊತೆಗೆ ವಾಯು, ಭೂ ಪ್ರಳಯವಾಗುತ್ತದೆ ಎಂಬುದಾಗಿ ಭವಿಷ್ಯ ನುಡಿದರು.

ಇದನ್ನೂ ಓದಿ: Kodi Mutt Swamiji: ದೇಶದಲ್ಲಿ ಮೇಘ ಸ್ಫೋಟ, ನಿರೀಕ್ಷೆಗೆ ಮೀರಿ ನೋವು ಕಾಡಲಿದೆ: ಕೋಡಿಮಠ ಶ್ರೀ ಭವಿಷ್ಯ!