Lakshmi Hebbalkar: ʼಮುಡಾ ಹಗರಣʼ ಹೆಸರಿನಲ್ಲಿ ಸಿಎಂಗೆ ಕಳಂಕ ತರಲು ವಿಪಕ್ಷಗಳಿಂದ ಯತ್ನ; ಲಕ್ಷ್ಮಿ ಹೆಬ್ಬಾಳಕರ್ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್‌ನವರಿಗೆ ಯಾವ ನೈತಿಕತೆಯೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Profile Vishwavani News Dec 5, 2024 6:00 PM
ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್‌ನವರಿಗೆ ಯಾವ ನೈತಿಕತೆಯೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ. ಹಾಸನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಿಎಂ ವಿರುದ್ಧ ಒಳಸಂಚು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಇಂತಹ ಮುಖ್ಯಮಂತ್ರಿಯವರಿಗೆ ಮುಡಾ ಹಗರಣದ ಹೆಸರಿನಲ್ಲಿ ಕಳಂಕ ತರಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಇದರ ಒಳಸಂಚೇನು ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಿಡಿಕಾರಿದರು.
ಈ ಸುದ್ದಿಯನ್ನೂ ಓದಿ | Proba-3 Satellites: ಇಸ್ರೋದ ಸಾಧನೆಗೆ ಮತ್ತೊಂದು ಗರಿ-ಪ್ರೋಬಾ-3 ನೌಕೆ ಯಶಸ್ವಿ ಉಡಾವಣೆ
ಮಹಿಳೆಯರಿಗೆ ಜೆಡಿಎಸ್ ಅಗೌರವ
ಬಿಜಿಪಿ, ಜೆಡಿಎಸ್‌ನವರಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಬಗ್ಗೆ ಮಾತಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಮುಖ್ಯಮಂತ್ರಿ ಸ್ಥಾನ ಎರಡುವರೆ ಸಾವಿರ ಕೋಟಿಗಳಿಗೆ ಮಾರಾಟವಾಗಿತ್ತೆಂದು ಅವರ ಪಕ್ಷದ ನಾಯಕರೇ ಆರೋಪ ಮಾಡಿದ್ದರು. ಇನ್ನು ಜೆಡಿಎಸ್‌ನವರು ಮೊದಲು ಹೆಣ್ಣು ಮಕ್ಕಳಿಗೆ ಗೌರವ ಕೊಡುವುದನ್ನು ಕಲಿಯಲಿ. ಯಾರು ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ: ಯಾರು ದುಶ್ಯಾಸನರು, ಎಷ್ಟು ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರ ಪಕ್ಷದ ಚಿನ್ಹೆ ತೆನೆ ಹೊತ್ತ ಮಹಿಳೆಗೇ ಅಗೌರವ ತೋರಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಎಂದೂ ಮಹಿಳೆಯರಿಗೆ ಅಗೌರವ ತೋರುವುದಿಲ್ಲ. ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ. ರಾಜ್ಯದಲ್ಲಿ 138 ಶಾಸಕ ಬಲದೊಂದಿಗೆ ಗಟ್ಟಿಯಾದ ಸರ್ಕಾರವಿದೆ. ಅಲ್ಪ ಬಹುಮತವಿದ್ದಿದ್ದರೆ ಬಿಜೆಪಿ ಇಷ್ಟೊತ್ತಿಗಾಗಲೆ ಏನೆಲ್ಲ ಕಿತಾಪತಿ ಮಾಡಲು ಪ್ರಯತ್ನಿಸುತ್ತಿತ್ತು. ನಮ್ಮ ಅರ್ಧಕ್ಕಿಂತ ಕಡಿಮೆ ಸ್ಥಾನವಿದ್ದರೂ ನಮ್ಮ ಶಾಸಕರಿಗೆ ಆಮಿಷಗಳನ್ನೊಡ್ಡಿ ಈಗಲೂ ಆಪರೇಷನ್ ಮಾಡಲು ಹುನ್ನಾರ ನಡೆಸುತ್ತಿದೆ ಎಂದು ಸಚಿವರು ಆರೋಪಿಸಿದರು.
ವಿಪಕ್ಷದವರ ನಡೆ ಖಂಡಿಸಿ
ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರದಲ್ಲಿರಲಿ, ಕೇಂದ್ರದಲ್ಲಿ ಅಧಿಕಾರದಲ್ಲಿರಲಿ, ವ್ಯವಸ್ಥೆಯನ್ನು ಬಳಸಿಕೊಂಡು ವಿರೋಧ ಪಕ್ಷದವರಿಗೆ ಕಿರುಕುಳ ನೀಡುವುದೇ ದಂಧೆಯಾಗಿದೆ. ಈಗ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾದ ಸಿಬಿಐ, ಇಡಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಹಾಗಾಗಿ, ನಾವು ಒಗ್ಗಟ್ಟಿನಿಂದ ಸರ್ಕಾರವನ್ನು ಸಮರ್ಥಿಸಿಕೊಳ್ಳುವ, ಬಿಜೆಪಿಯವರನ್ನು ಖಂಡಿಸುವ ಕೆಲಸ ಮಾಡಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಚಿವರು ಸಲಹೆ ನೀಡಿದರು.
ಬಿಜೆಪಿ ಒಳಜಗಳ ಹಾದಿರಂಪ ಬೀದಿರಂಪ
ಬಿಜೆಪಿಯವರು ನೂರು ಬಾರಿ ಸುಳ್ಳನ್ನು ಹೇಳಿ ಅದೇ ಸತ್ಯ ಎನ್ನುವಂತೆ ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ಮೊದಲ ಸುಳ್ಳಿನಲ್ಲೇ ಅದನ್ನು ಖಂಡಿಸುವ, ಸುಳ್ಳೆಂದು ಸಾಬೀತುಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ. ಬಿಜೆಪಿಗೆ ಈಗ ರಾಜ್ಯದಲ್ಲಿ ಶಕ್ತಿ ಇಲ್ಲವಾಗಿದೆ, ಮಾತನಾಡಲು ಯಾವುದೇ ವಿಷಯಗಳು ಇಲ್ಲವಾಗಿದೆ. ತನ್ನ ಒಳಜಗಳದಿಂದಾಗಿ ಜನರಿಗೆ, ಕಾರ್ಯಕರ್ತರಿಗೆ ಮುಖ ತೋರಿಸಲಾಗದಂತಹ ಸ್ಥಿತಿ ಬಿಜೆಪಿ ನಾಯಕರಿಗಾಗಿದೆ. ಆದರೂ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರು ಎಷ್ಟೇ ಕಿರುಕುಳ ಕೊಟ್ಟರೂ ಜಗ್ಗದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಸಾರಥ್ಯದ ನಮ್ಮ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗುವಂತ ಆಡಳಿತವನ್ನು ನೀಡುತ್ತಿದೆ. ಇಡೀ ರಾಜ್ಯದ ಜನರು ನಮ್ಮ ಪಕ್ಷದೊಂದಿಗಿದ್ದಾರೆ, ನಮ್ಮ ಸರ್ಕಾರದೊಂದಿಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನುಡಿದಂತೆ ನಡೆದಿದ್ದೇವೆ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ, ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಹಾಗಿದೆ, ತ್ಯಾಗ, ಬಲಿದಾನಗಳಿಂದಲೇ ಕಟ್ಟಲ್ಪಟ್ಟಿರುವ ಪಕ್ಷ ನಮ್ಮದು. ಕೊಟ್ಟ ಮಾತಿನಿಂದ ಎಂದಿಗೂ ಹಿಂದೆ ಸರಿಯುವ ಪಕ್ಷ ನಮ್ಮದಲ್ಲ, ಬಿಜೆಪಿಯವರ ಹಾಗೆ ಸುಳ್ಳು ಹೇಳಿ ಎಂದೂ ಅಧಿಕಾರಕ್ಕೆ ಬಂದಿಲ್ಲ. ನಾವು ಕಾಂಗ್ರೆಸಿಗರು ಸದಾ ಬಡವರ ಪರವಾಗಿದ್ದೇವೆ. ನಮಗೆ ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ರೈತರ, ಕಾರ್ಮಿಕರ, ಮಹಿಳೆಯರ ಸಬಲೀಕರಣವೇ ಮುಖ್ಯವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಈ ಸುದ್ದಿಯನ್ನೂ ಓದಿ | PDO Exam: ಡಿ.7, 8ರಂದು ಪಿಡಿಒ ನೇಮಕಾತಿ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು, ಮಾಜಿ ಸಚಿವರು ಮತ್ತು ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಮುಖಂಡರು ಪಾಲ್ಗೊಂಡಿದ್ದರು.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?