ಗುಡಿಬಂಡೆಯ ವರ್ಲಕೊಂಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ವರ್ಲಕೊಂಡ ಬೆಟ್ಟದ ಸುತ್ತಮುತ್ತಲಿನಲ್ಲಿ ಚಿರತೆಗಳು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ಜನರು ಕೃಷಿ ಚಟುವಟಿಕೆಗಳನ್ನು, ನರೇಗಾ ಕಾಮಗಾರಿಗಳನ್ನು ಮಾಡುತ್ತಿರುತ್ತಾರೆ. ಜೊತೆಗೆ ಕೆಲವು ಕುಟುಂಬಗಳು ತಮ್ಮ ಜಮೀನುಗಳಲ್ಲಿಯೇ ವಾಸವಿದ್ದಾರೆ. ಕುರಿ,ಮೇಕೆ, ಜಾನುವಾರುಗಳನ್ನು ಸಹ ಸಾಕಿದ್ದಾರೆ. ಇದೀಗ ಚಿರತೆಗಳು ಡ್ರೋನ್ ಕ್ಯಾಮೆರಾದಲ್ಲಿ ಕಾಣಿಸಿದ್ದು, ನಮಗೆ ತುಂಬಾನೆ ಭಯವಾಗಿದೆ.


ಗುಡಿಬಂಡೆ: ತಾಲೂಕಿನ ವರ್ಲಕೊಂಡ ಗ್ರಾಮದ ವರಾಹಗಿರಿ ಬೆಟ್ಟದಲ್ಲಿ ಕಳೆದ ಮೂರು ದಿನ ಗಳಿಂದ ಮೂರು ಚಿರತೆಗಳು ಕಾಣಿಸಿಕೊಂಡಿದೆ. ಇದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ. ಭಯದಿಂದಲೇ ಕೃಷಿ ಚಟುವಟಿಕೆಗಳು ಸೇರಿದಂತೆ ಎಲ್ಲಾ ಕೆಲಸಗಳನ್ನು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಈ ಚಿರತೆ ಇರುವ ದೃಶ್ಯಗಳಹ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಹ ವೈರಲ್ ಆಗಿದ್ದು, ಜನರು ಮತ್ತಷ್ಟು ಭಯಭೀತರಾಗಿದ್ದಾರೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಚಿರತೆಯನ್ನು ಸೆರೆ ಹಿಡಿಯಬೇಕೆಂದು ಜನರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Chikkaballapur News: ರಾಶ್ಚೇರುವು ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆ
ಸ್ಥಳೀಯ ಮುಖಂಡ ರಾಜು ಮಾತನಾಡಿ, ವರ್ಲಕೊಂಡ ಬೆಟ್ಟದ ಸುತ್ತಮುತ್ತಲಿನಲ್ಲಿ ಚಿರತೆಗಳು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ಜನರು ಕೃಷಿ ಚಟುವಟಿಕೆಗಳನ್ನು, ನರೇಗಾ ಕಾಮಗಾರಿಗಳನ್ನು ಮಾಡುತ್ತಿರುತ್ತಾರೆ. ಜೊತೆಗೆ ಕೆಲವು ಕುಟುಂಬಗಳು ತಮ್ಮ ಜಮೀನುಗಳಲ್ಲಿಯೇ ವಾಸವಿದ್ದಾರೆ. ಕುರಿ,ಮೇಕೆ, ಜಾನುವಾರುಗಳನ್ನು ಸಹ ಸಾಕಿದ್ದಾರೆ. ಇದೀಗ ಚಿರತೆಗಳು ಡ್ರೋನ್ ಕ್ಯಾಮೆರಾದಲ್ಲಿ ಕಾಣಿಸಿದ್ದು, ನಮಗೆ ತುಂಬಾನೆ ಭಯವಾಗಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಹಿಡಿದು ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.