ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

H D Kumaraswamy: ಸಿಎಂ ಅನುಕೂಲಕ್ಕೆ ತಕ್ಕಂತೆ ಲೋಕಾಯುಕ್ತ ವರದಿ; ಹೆಚ್.ಡಿ.ಕುಮಾರಸ್ವಾಮಿ ಟೀಕೆ

ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟ ಬಂದಂತೆ, ಅನುಕೂಲ ಆಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು‌ ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ

ಮುಡಾ‌ ಹಗರಣದಲ್ಲಿ ಅಕ್ರಮ ನಡೆದಿದೆ; ದಾಖಲೆಗಳು ಸತ್ಯ ಹೇಳುತ್ತಿವೆ

Profile Ashok Nayak Feb 24, 2025 10:07 PM

ಸತ್ಯ ಹೇಳಿದ್ದಕ್ಕೆ ನನ್ನ ಮೇಲೆ ರಾಜಕೀಯ ಸೇಡು ಎಂದ ಕೇಂದ್ರ ಸಚಿವರು

ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ; ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವರ ಆಗ್ರಹ

ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲ

ಮೈಸೂರು: ಮುಡಾ‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋ ಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟ ಬಂದಂತೆ, ಅನುಕೂಲ ಆಗು ವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು‌ ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ. ಈ‌ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಎಸ್ ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ ಐಟಿಗೆ ನೇಮಕ ಮಾಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ಇದನ್ನೂ ಓದಿ: Kumbhamela at mysore: ಇಂದಿನಿಂದ 13ನೇ ದಕ್ಷಿಣದ ಕುಂಭಮೇಳ

40 ವರ್ಷದ ಹಿಂದೆ ನಾನು ಇದೇ ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. 14 ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿ ಕೊಳ್ಳಿ.. ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ. ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ನಲವತ್ತು ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಮೂಲ ದಾಖಲೆಗಳೆ ಇಲ್ಲ ಎಂದು ಸರ್ಕಾರವೇ ಹೇಳುತ್ತಿದೆ. ಆದರೆ, ಈಗ ಮೂಲ ಮಾಲೀ ಕರು ಹುಟ್ಟಿಕೊಂಡಿದ್ದಾರೆ!! ಅವರು ಯಾರು? ಎಲ್ಲಿಂದ ಬಂದರು? ಯಾರು ಕರೆದು ಕೊಂಡು ಬಂದರು ಎನ್ನುವ ಮಾಹಿತಿ ನನಗಿದೆ ಎಂದ ಅವರು; ಇಂಟರ್ ನ್ಯಾಷನಲ್ ಸರ್ವೇ ಮಾಡಿಸಲಿ. ನಾನೇನು ಹೆದರುವ ವ್ಯಕ್ತಿ ಅಲ್ಲ. ಸಿಎಂ ಸಿದ್ದರಾಮಯ್ಯ‌ ಸತ್ಯ‌ ಹರಿಶ್ಚಂದ್ರರೇ? ಹಿನಕಲ್‌ ಸಾಕಮ್ಮನ ಜಮೀನು ವಿವಾದ ಯಾವುದು? ಅದಕ್ಕೂ ಸಿದ್ದರಾ ಮಯ್ಯ ಅವರಿಗೂ ಏನು ಸಂಬಂಧ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಕನ್ನಡಿಗರಿಗೆ ರಕ್ಷಣೆ ಇಲ್ಲ: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು; ಈ ಸರ್ಕಾರ ಯಾರಿಗೆ ರಕ್ಷಣೆ ಕೊಡುತ್ತದೆ? ಮಂತ್ರಿಗಳೊಬ್ಬರು ಮರಾಠಿಯಲ್ಲೇ ಭಾಷಣ ಮಾಡಿದ್ದಾರೆ. 2006-07ರಲ್ಲಿ ನಾನು ಸಿಎಂ ಆಗಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಬಳಿ ನಿಯೋಗ ಹೋಗಿದ್ದರು. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ಮಾಡಿದರು. ಆದರೆ‌, ನಾನು‌ ಅದಕ್ಕೆ ಅವಕಾಶ ಕೊಡಲಿಲ್ಲ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಮಾಡಿ, ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದೆ. ಈ ಸರ್ಕಾರದ ಆಡಳಿತದಲ್ಲಿ ಬೆಳಗಾವಿ ಪರಿಸ್ಥಿತಿ ಅಯೋಮಯವಾಗಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರಿಗೆ ರಾಜಕೀಯ ವೈರಾಗ್ಯ ಬಂದ ಹಾಗಿದೆ. ರಾಜೀ ನಾಮೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜಕೀಯದಲ್ಲಿ ಮರ್ಯಾದಸ್ಥರು ಇರುವುದು ಒಳ್ಳೆಯದಲ್ಲ ಎಂದು‌ ಅವರಿಗೆ ಅನಿಸಿರಬೇಕು. 136 ಕ್ಷೇತ್ರಗಳನ್ನು ಗೆದ್ದಿರುವ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಯಾವ ವಿಚಾರದಲ್ಲಿಯೂ ಇವರಿಗೆ ನಿಯಂತ್ರಣ ಇಲ್ಲ. ಆದರೂ, ಸಚಿವ ಮಹದೇವಪ್ಪ ಅವರು ಸಿಎಂ ರೆಕಾರ್ಡ್ ಮಾಡಬೇಕು ಎನ್ನುತ್ತಾರೆ. ಮಹದೇವಪ್ಪ ಅವರೇ.. ಎಷ್ಟು ವರ್ಷ ಆಡಳಿತ ನಡೆಸಿದಿರಿ ಎನ್ನುವುದು ಮುಖ್ಯವಲ್ಲ. ಅಧಿಕಾರ ನಡೆಸಿದ ಸಂದರ್ಭದಲ್ಲಿ ಈ ನಾಡಿನ ಜನರ ಎಷ್ಟು ಸಮಸ್ಯೆ ಬಗೆಹರಿಸಿದಿರಿ ಎನ್ನುವುದು ಮುಖ್ಯ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಬೆಲೆ ಏರಿಸಿ ಗ್ಯಾರಂಟಿ ಕೊಡೋದಾದ್ರೆ ನಾನು ₹10,000 ಕೊಡುತ್ತೇನೆ: ನನಗೆ ಒಮ್ಮೆ 20 ತಿಂಗಳು, ಇನ್ನೊಮ್ಮೆ 14 ತಿಂಗಳು ಜನಪರ ಆಡಳಿತ ನಡೆಸಿದ ಬಗ್ಗೆ ತೃಪ್ತಿ ಇದೆ. ನೀವು ಗ್ಯಾರಂಟಿ ಎಂದು ಮಾಡಿದ್ದೀರಿ. ನಿಮ್ಮ ಮನೆ ಹಣದಿಂದ ಯೋಜನೆ ಮಾಡಿದ್ದೀರಾ? ಗ್ಯಾರೆಂಟಿ‌ ಯೋಜನೆಗೆ ಯಾರಪ್ಪನ‌ ದುಡ್ಡು ಬಳಕೆ ಮಾಡುತ್ತಿದ್ದೀರಿ? ಮೆಟ್ರೋ ದರ‌, ಬಸ್ ಪ್ರಯಾಣ ದರ, ಮದ್ಯದ ದರ, ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಏರಿಕೆ ಮಾಡಿ ಗ್ಯಾರಂಟಿ ಕೊಡಲಿಕ್ಕೆ ನೀವೇ ಬೇಕಾ? ಈ ರೀತಿ ಗ್ಯಾರಂಟಿ ಕೊಡುವುದಿದ್ದರೆ ನಾನು ತಿಂಗಳಿಗೆ ₹10,000 ಗ್ಯಾರಂಟಿ ಕೊಡುತ್ತೇನೆ ಎಂದು ಟಾಂಗ್ ಕೊಟ್ಟರು.

ಜಾತಿಗಣತಿ; ಚನ್ನಗಿರಿ ಶಾಸಕರ ಹೇಳಿಕೆ ಉಲ್ಲೇಖಿಸಿದ HDK

ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಮ್ಮ ಮನೆಗೆ ಬಂದು ಯಾರೂ ಜಾತಿಗಣತಿ ಮಾಡಿಲ್ಲ ಎಂದು ಚನ್ನಗಿರಿ ಕಾಂಗ್ರೆಸ್ ಎಂಎಲ್ ಎ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಹೇಳಿರುವ ಮಾತಿದು. ಧೈರ್ಯವಿದ್ದರೆ ಜಾತಿ ಗಣತಿ ವರದಿ ಬಿಡುಗಡೆ ಮಾಡಿ. ಆಮೇಲೆ ಏನು ನಡೆಯು ತ್ತದೆ ಎನ್ನುವುದನ್ನು ನೋಡಿ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ಬಹಳ ದಿನಗಳಿಂದ ಜಾತಿ ಗಣತಿ ವರದಿ ಗುಮ್ಮ ಬಿಡಲಾಗುತ್ತಿದೆ. ವರದಿ ಕೈ ಸರ್ಕಾರದ ಕೈ ಸೇರಿದೆ. ಬಿಡುಗಡೆ ಮಾಡುವುದು ಬಿಟ್ಟು ಮಾಧ್ಯಮಗಳ ಮೂಲಕ ಬಿಡುಗಡೆ ಏಕೆ ಸೋರಿಕೆ ಮಾಡಲಾಗುತ್ತಿದೆ. ಜಾತಿಗಣತಿ ವರದಿ ಇಟ್ಟುಕೊಂಡು ಪೂಜೆ ಮಾಡುತ್ತಿದ್ದೀರಾ ಹೇಗೆ? ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಯಾವುದನ್ನು ಕಾಂಗ್ರೆಸ್ ನವರಿಂದ ಸರಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ಕರ್ನಾಟಕ ಲೋಕಸೇವಾ ಆಯೋಗವನ್ನು ಹಾಳು ಮಾಡಿದಿರಿ. ಕೇವಲ ಒಬ್ಬ ಹೆಣ್ಣು ಮಗಳಿಗಾಗಿ 370 ಮಕ್ಕಳ ಕುಟುಂಬಗಳನ್ನು ಬೀದಿಗೆ ತಂದಿ ನಿಲ್ಲಿಸಿದಿರಿ. ಕೆಪಿಎಸ್‌ಸಿ ಈವತ್ತು ಏನಾಗಿದೆ? ಬೇವಿನಮರ‌ ನೆಟ್ಟು‌ ಮಾವಿನ ಹಣ್ಣು ಕೇಳಿದರೆ ಸಿಗುತ್ತಾ? ಕೆಪಿಎಸ್‌ ಸಿ ಭ್ರಷ್ಟ ಕೂಪವಾಗಿದೆ ಎಂದು ಆರೋಪ ಮಾಡಿದರು.

ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು

ಮೂಟೆಗಟ್ಟಲೆ ಕಲ್ಲು ತಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ?

ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆ ಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟ ವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ನೀವು ಹೋಗುತ್ತೀರಿ. ನಿಮ್ಮ ಒಳ್ಳೆಯ ಉದ್ದೇಶವನ್ನು ದುರುಪಯೋಗ ಮಾಡಿಕೊಂಡು ಅವರು‌ ಭದ್ರವಾಗುತ್ತಾ ಹೋಗುತ್ತಿದ್ದಾರೆ. ಎರಡೂ ಪಕ್ಷದ ನಾಯಕರಿಗೆ ನಾನು ಮನವಿ ಮಾಡಿಕೊಳ್ಳುವೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಿ. ಶಾಂತಿ, ನೆಮ್ಮದಿ ಹಾಳು ಮಾಡುವ ಇಂಥ ಗಲಭೆಕೋರ ಶಕ್ತಿಗಳನ್ನು ಮಟ್ಟ ಹಾಕಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.

ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ ಹಾಕಬೇಕು. ಎಷ್ಟು ದಿನ ಅಂತ ಇಂತಹವರನ್ನು ಸಹಿಸಿಕೊಳ್ತೀರಿ. ಯಾರನ್ನೋ ಓಲೈಸಲು ಸರ್ಕಾರ ಇರುವುದಲ್ಲ. ಎಲ್ಲರ ಸರ್ಕಾರ ಎಂಬುದನ್ನು ಕಾಂಗ್ರೆಸ್ ಮರೆಯಬಾರದು. ಕಾನೂನು‌ ಬಾಹಿರ ಚಟುವಟಿಕೆ ನಡೆಸುವವನು‌ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾ ರದ ಕರ್ತವ್ಯ. ಮೂಟೆಗಟ್ಟಲೆ ಕಲ್ಲು ತಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯರಾದ ಯದುವೀರ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಮಹೇಶ್ ಸೇರಿದಂತೆ ಅನೇಕ ಗಣ್ಯರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.