#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mahakumbh 2025 : ಮಹಾಕುಂಭ ಮೇಳಕ್ಕೆ ಕುಟುಂಬ ಸಮೇತ ಗೌತಮ್‌ ಅದಾನಿ ವಿಸಿಟ್‌; ತ್ರಿವೇಣಿ ಸಂಗಮದಲ್ಲಿ ಪ್ರಾರ್ಥನೆ

ಉದ್ಯಮಿ ಗೌತಮ್‌ ಅದಾನಿ ಅವರು ಮಂಗಳವಾರ ತಮ್ಮ ಕುಟುಂಬದೊಂದಿಗೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಮಾತನಾಡಿ ಉತ್ತರ ಪ್ರದೇಶ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಧನ್ಯಾವಾದ ತಿಳಿಸಿದರು.

ಕುಂಭಮೇಳದಲ್ಲಿ ಪ್ರಸಾದ ತಯಾರಿಸಿದ ಗೌತಮ್‌ ಅದಾನಿ

Gautam Adani

Profile Vishakha Bhat Jan 21, 2025 4:46 PM

ಲಖನೌ: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ (Mahakumbh) ನಡೆಯುತ್ತಿದ್ದು, ಕೋಟ್ಯಾಂತರ ಜನ ಪಾಲ್ಗೊಳ್ಳುತ್ತಿದ್ದಾರೆ. ಜ. 13 ರಿಂದ ಫೆ 26 ರ ವರೆಗೆ ನಡೆಯಲಿರುವ ಮಹಾಕುಂಭ ಮೇಳಕ್ಕೆ ದೇಶ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಸದ್ಯ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್‌ ಅದಾನಿ (Gautam Adani) ಹಾಗೂ ಅವರ ಕುಟುಂಬ ಮಂಗಳವಾರ ಮಹಾಕುಂಭ ಮೇಳದಲ್ಲಿ ಭಾಗವಹಿಸಿದೆ. ಅದಾನಿ, ಅವರ ಪತ್ನಿ, ಅದಾನಿ ಫೌಂಡೇಶನ್‌ನ ಅಧ್ಯಕ್ಷರಾದ ಪ್ರೀತಿ ಅದಾನಿ ಹಾಗೂ ಮಗ ಅದಾನಿ ಪೋರ್ಟ್ಸ್ ಮತ್ತು SEZ ಲಿಮಿಟೆಡ್‌ನ (APSEZ) ವ್ಯವಸ್ಥಾಪಕ ನಿರ್ದೇಶಕ ಕರಣ್ ಅದಾನಿ ಕೂಡ ಗಂಗಾ ನದಿಯ ತ್ರಿವೇಣಿ ಸಂಗಮದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಗೌತಮ್‌ ಅದಾನಿ ಅವರು ಕುಂಭ ಮೇಳದಲ್ಲಿ ಇಸ್ಕಾನ್ ದೇವಸ್ಥಾನದ ಶಿಬಿರಕ್ಕೆ ಭೇಟಿ ನೀಡಿ ಮಹಾಪ್ರಸಾದ ಮಾಡಲು ಸಹಾಯ ಮಾಡಿದ್ದಾರೆ. ಜನವರಿ 13 ರಂದು ಪ್ರಾರಂಭವಾದ ಮಹಾ ಕುಂಭಮೇಳದಲ್ಲಿ ಭಕ್ತರಿಗೆ ಊಟ ಬಡಿಸಲು ಅದಾನಿ ಗ್ರೂಪ್ ಮತ್ತು ಇಸ್ಕಾನ್ ಅಥವಾ ಇಂಟರ್‌ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ ಕೈ ಜೋಡಿಸಿದೆ. ಈ ಪ್ರಸಾದ ವಿತರಣಾ ಕಾರ್ಯ ಕೊನೆ ದಿನದ ವರೆಗೂ ಇರಲಿದೆ.



ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅದಾನಿ, ಸುಮಾರು 40 ಕೋಟಿ ಭಕ್ತರನ್ನು ಸೆಳೆಯುವ ನಿರೀಕ್ಷೆಯಿರುವ ಮಹಾಕುಂಭ ಮೇಳವನ್ನು ಆಯೋಜಿಸಿದ್ದಕ್ಕಾಗಿ ಉತ್ತರ ಪ್ರದೇಶ ಆಡಳಿತ, ನೈರ್ಮಲ್ಯ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ. ಪ್ರಯಾಗ್‌ರಾಜ್‌ ಮಹಾ ಕುಂಭದಲ್ಲಿ ನನ್ನ ಅನುಭವ ಅದ್ಭುತವಾಗಿದೆ. ಮಾತೆ ಗಂಗೆಯ ಆಶೀರ್ವಾದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ ಎಂದು ಅವರು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ : Google : ಮಹಾಕುಂಭ ಮೇಳಕ್ಕೆ ಗೂಗಲ್‌ನಲ್ಲಿ ಗುಲಾಬಿ ದಳಗಳ ಸುರಿಮಳೆ​: ನೆಟ್ಟಿಗರಿಂದ ಮೆಚ್ಚುಗೆ

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಮಹಾಕುಂಭವು "ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಯ ಮಹಾನ್ ಯಾಗ" ಎಂದು ಹೇಳಿದರು.ಈ ಮಹಾಯಜ್ಞದಲ್ಲಿ ಕುಂಭಮೇಳಕ್ಕೆ ಬರುವ ಭಕ್ತರಿಗೆ ಪ್ರತಿಷ್ಠಿತ ಸಂಸ್ಥೆ ಗೀತಾ ಪ್ರೆಸ್ ಸಹಯೋಗದಲ್ಲಿ ಒಂದು ಕೋಟಿ ಆರತಿ ಸಂಗ್ರಹ ಪ್ರತಿಗಳನ್ನು ಉಚಿತವಾಗಿ ನೀಡುತ್ತಿರುವುದು ನಮಗೆ ಅಪಾರ ಸಂತಸ ತಂದಿದೆ ಎಂದು ಹೇಳಿದ್ದಾರೆ.