ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಮಾಟ, ಮಂತ್ರ ತೆಗೆಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಧರ್ಮಗುರು ಆರೆಸ್ಟ್

ಈ ವ್ಯಕ್ತಿ ಇದೇ ರೀತಿ ಮಾಟ ಮಂತ್ರ ನಿವಾರಿಸುವ ಉಸ್ತಾದ್ ಎಂಬ ಸೋಗಿನಲ್ಲಿ ಇನ್ನೂ ಹಲವರಿಗೆ ವಂಚಿಸಿರುವ ಹಾಗೂ ಕಿರುಕುಳ ನೀಡಿರುವ ಬಗ್ಗೆ ದೂರುಗಳಿವೆ ಎಂದು ತಿಳಿದು ಬಂದಿದೆ. ಹಣ ಪಡೆದು ವಂಚಿಸುತ್ತಿದ್ದುದಲ್ಲದೆ ಅವರಿಗೆ ದೈಹಿಕವಾಗಿಯೂ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಮಾಟ- ಮಂತ್ರ ತೆಗೆಸುವೆ ಎಂದು ಲೈಂಗಿಕ ಕಿರುಕುಳ, ಮುಸ್ಲಿಂ ಧರ್ಮಗುರು ಆರೆಸ್ಟ್

ಆರೋಪಿ ಕೂಳೂರು ಉಸ್ತಾದ್

ಹರೀಶ್‌ ಕೇರ ಹರೀಶ್‌ ಕೇರ Apr 7, 2025 12:19 PM

ಮಂಗಳೂರು: ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ (Black magic) ಮಾಡಿಸಿದ್ದಾರೆಂದು ನಂಬಿಸಿ, ತಾನಿದ್ದೆಡೆಗೆ ಕರೆಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ (ನೀಡಿರುವುದರ ಜೊತೆಗೆ 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ದಕ್ಷಿಣ ಕನ್ನಡದ (Dakshina kannada) ಮುಸ್ಲಿಂ ಧರ್ಮಗುರು ಒಬ್ಬಾತನನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಕೂಳೂರು ಉಸ್ತಾದ್‌ ಎಂದು ಕರೆಯಲಾಗುತ್ತಿದ್ದು, ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್‌ ಕರೀಮ್‌ ಎಂಬ ಹೆಸರಿನವನು. ಖಿನ್ನತೆಯ ಸಮಸ್ಯೆ ಪರಿಹಾರಕ್ಕಾಗಿ ಮಹಿಳೆ ಈ ಉಸ್ತಾದ್‌ ಬಳಿಗೆ ತೆರಳಿದ್ದರು.

2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದ್ದಾನೆ. ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದಾನೆ ಈ ಅಬ್ದುಲ್ ಕರೀಮ್. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಕೆಲವು ಬಾರಿ ಮಹಿಳೆಗೆ ಕುರ್‌ಆನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆ ಹೇಳಿದ್ದಾರೆ.

2022ರ ಫೆ. 10ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್‌ ಆಕೆಯಲ್ಲಿ ಕುರಾನ್‌ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿದ್ದಾರೆ.

ಈ ವ್ಯಕ್ತಿ ಇದೇ ರೀತಿ ಮಾಟ ಮಂತ್ರ ನಿವಾರಿಸುವ ಉಸ್ತಾದ್ ಎಂಬ ಸೋಗಿನಲ್ಲಿ ಇನ್ನೂ ಹಲವರಿಗೆ ವಂಚಿಸಿರುವ ಹಾಗೂ ಕಿರುಕುಳ ನೀಡಿರುವ ಬಗ್ಗೆ ದೂರುಗಳಿವೆ ಎಂದು ತಿಳಿದು ಬಂದಿದೆ. ಕುಟುಂಬಕ್ಕೆ ಮಾಟ ಮಂತ್ರದಿಂದ ಮುಕ್ತಿ ಸಿಗಲು ತಾನು ಹೇಳಿದಂತೆ ಮಾಡಬೇಕು ಎಂದು ಅವರನ್ನು ಮೌಢ್ಯದಲ್ಲಿ ಮುಳುಗಿಸಿ ಅವರನ್ನು ವಂಚಿಸುತ್ತಿದ್ದ ಈ ವ್ಯಕ್ತಿ ಅವರಿಗೆ ದೈಹಿಕವಾಗಿಯೂ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Vinay Somaiah death: ಆತ್ಮಹತ್ಯೆಗೆ ಮುನ್ನ ಪತ್ನಿಗೆ ಪತ್ರ ಬರೆದಿದ್ದ ವಿನಯ್, ಲೆಟರ್​ನಲ್ಲಿ ಏನಿದೆ?