Ranji Trophy quarterfinal: ಮುಂಬೈ ತಂಡ ಸೇರಿದ ಸೂರ್ಯಕುಮಾರ್‌, ದುಬೆ

ಕೆಲ ದಿನಗಳ ಹಿಂದಷ್ಟೇ ಮುಕ್ತಾಯ ಕಂಡಿದ್ದ ಇಂಗ್ಲೆಂಡ್‌ ವಿರುದ್ಧದ ತವರಿನ ಟಿ20 ಸರಣಿಯಲ್ಲಿ ಭಾರತ ತಂಡ ಸರಣಿ ಗೆಲುವು ಸಾಧಿಸಿದ್ದರೂ, ಸೂರ್ಯಕುಮಾರ್‌ ಯಾದವ್‌(Suryakumar Yadav) ಸಂಪೂರ್ಣ ವಿಫಲರಾಗಿದ್ದರು. ಆಡಿದ ಐದು ಇನಿಂಗ್ಸ್‌ಗಳಿಂದ ಕೇವಲ 28 ರನ್‌(0,12,14,0 ಹಾಗೂ 2) ಕಲೆ ಹಾಕಿದ್ದರು. ಇದರಲ್ಲಿ 2 ಸೂನ್ಯ ಕೂಡ ಒಳಗೊಂಡಿತ್ತು.

Suryakumar Yadav (7)
Profile Abhilash BC Feb 4, 2025 12:34 PM

ಮುಂಬೈ: ರಣಜಿ ಟ್ರೋಫಿ 2024-25 ಕ್ವಾರ್ಟರ್‌ ಫೈನಲ್‌ಗಾಗಿ(Ranji Trophy quarterfinal) ಮುಂಬೈ ಕ್ರಿಕೆಟ್ ಅಸೋಸಿಯೇಷನ್ 18 ಸದಸ್ಯರ ತಂಡವನ್ನು ಹೆಸರಿಸಿದೆ. ಈ ತಂಡದಲ್ಲಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಕೂಡ ಸ್ಥಾನ ಪಡೆದಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮುಕ್ತಾಯ ಕಂಡಿದ್ದ ಇಂಗ್ಲೆಂಡ್‌ ವಿರುದ್ಧದ ತವರಿನ ಟಿ20 ಸರಣಿಯಲ್ಲಿ ಭಾರತ ತಂಡ ಸರಣಿ ಗೆಲುವು ಸಾಧಿಸಿದ್ದರೂ, ಸೂರ್ಯಕುಮಾರ್‌ ಯಾದವ್‌ ಸಂಪೂರ್ಣ ವಿಫಲರಾಗಿದ್ದರು. ಆಡಿದ ಐದು ಇನಿಂಗ್ಸ್‌ಗಳಿಂದ ಕೇವಲ 28 ರನ್‌(0,12,14,0 ಹಾಗೂ 2) ಕಲೆ ಹಾಕಿದ್ದರು. ಇದರಲ್ಲಿ 2 ಸೂನ್ಯ ಕೂಡ ಒಳಗೊಂಡಿತ್ತು.

ಮುಂಬೈ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ಹರಿಯಾಣ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 8ರಂದು ಆರಂಭಗೊಳ್ಳಲಿದೆ. ಶ್ರೇಯಸ್‌ ಅಯ್ಯರ್‌ ಇಂಗ್ಲೆಂಡ್‌ ಏಕದಿನ ಸರಣಿಯ ಭಾಗವಾಗಿರುವ ಕಾರಣ ಅವರು ಮುಂಬೈ ತಂಡದಿಂದ ಬಿಡುಗಡೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್​ರನ್ನು ಬದಲಿಯಾಗಿ ಆಯ್ಕೆ ಮಾಡಲಾಗಿದೆ. ರಹಾನೆ ತಂಡದ ನಾಯಕನಾಗಿದ್ದಾರೆ. ಸೂರ್ಯಕುಮಾರ್‌ ಜತೆಗೆ ಶಿವಂ ದುಬೆ ಕೂಡ ಮುಂಬೈ ತಂಡಕ್ಕೆ ಮರಳಿದ್ದಾರೆ.

ಮುಂಬೈ ತಂಡ

ಅಜಿಂಕ್ಯ ರಹಾನೆ (ನಾಯಕ), ಆಯುಷ್ ಮ್ಹಾತ್ರೆ, ಅಂಗ್ಕ್ರಿಶ್ ರಘುವಂಶಿ, ಅಮೋಘ್ ಭಟ್ಕಳ್, ಸೂರ್ಯಕುಮಾರ್ ಯಾದವ್, ಸಿದ್ಧೇಶ್ ಲಾಡ್, ಶಿವಂ ದುಬೆ, ಆಕಾಶ್ ಆನಂದ್ (ವಿ.ಕೀ), ಹಾರ್ದಿಕ್ ತಮೋರ್, ಸೂರ್ಯಾಂಶ್ ಶೆಡ್ಜ್, ಶಾರ್ದೂಲ್ ಠಾಕೂರ್, ಶಮ್ಸ್ ಮುಲಾನಿ, ತನುಷ್ ಎ ಕೋಟ್ಯಾನ್, , ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಅಥರ್ವ ಅಂಕೋಲೆಕರ್, ಹರ್ಷ ತನ್ನಾ.

ಇದನ್ನೂ ಓದಿ ರಣಜಿ ಕಮ್‌ಬ್ಯಾಕ್‌ನಲ್ಲಿ ಕೊಹ್ಲಿ 6ಕ್ಕೆ ಕ್ಲೀನ್‌ ಬೌಲ್ಡ್‌

ಸೂರ್ಯುಕುಮಾರ್‌ ಫಾರ್ಮ್‌ ಬಗ್ಗೆ ಅಶ್ವಿನ್‌ ಪ್ರಶ್ನೆ

ಸತತ ಬ್ಯಾಟಿಂಗ್‌ ವೈಫಲ್ಯ ಕಾಣುತ್ತಿರುವ ಸೂರ್ಯಕುಮಾರ್‌ ಫಾರ್ಮ್‌ ಬಗ್ಗೆ ಮಾಜಿ ಆಟಗಾರ ಆರ್‌. ಅಶ್ವಿನ್‌ ಪ್ರಶ್ನೆ ಮಾಡಿದ್ದಾರೆ. "ಸಮಸ್ಯೆ ಇರುವುದು ಸೂರ್ಯಕುಮಾರ್‌ ಅವರ ಬ್ಯಾಟಿಂಗ್‌ನಲ್ಲಿ. ಸಂಜು ಸ್ಯಾಮ್ಸನ್‌ ಹಾಗೂ ಸೂರ್ಯಕುಮಾರ್‌ ಒಂದೇ ತರಹದ ಎಸೆತಗಳಲ್ಲಿ, ಒಂದೇ ಶಾಟ್‌ಗೆ, ಒಂದೇ ಫೀಲ್ಡ್‌ ಸೆಟ್‌ಗೆ, ಒಂದೇ ತಪ್ಪಿನಿಂದ ಔಟ್‌ ಆಗಿದ್ದಾರೆ" ಎಂದು ಆರ್‌ ಅಶ್ವಿನ್‌ ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ದೂರಿದ್ದಾರೆ.

'ಒಂದು ಅಥವಾ ಎರಡು ಪಂದ್ಯಗಳಲ್ಲಿ ಇದು ನಡೆದರೆ, ಇದನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಆದರೆ, ಇಲ್ಲಿ ಒಂದೇ ರೀತಿಯಲ್ಲಿ ಪದೇಪದೆ ಔಟ್‌ ಆದ ಪ್ರಶ್ನೆಗೆ ನಮ್ಮ ಬ್ಯಾಟ್ಸ್‌ಮನ್‌ಗಳು ಉತ್ತರಿಸಬೇಕಾದ ಅಗತ್ಯವಿದೆ' ಎಂದು ಅಶ್ವಿನ್‌ ಪ್ರಶ್ನಿಸಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?