Nikhil Kumaraswamy: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹೊಸ ಶಾಸಕರಿಂದ ಜೆಡಿಎಸ್ ಕಾರ್ಯಕರ್ತರಿಗೆ ಹಿಂಸೆ; ನಿಖಿಲ್ ಕುಮಾರಸ್ವಾಮಿ ಆರೋಪ
ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Vishwavani News
Dec 7, 2024 6:58 PM
ಬೆಂಗಳೂರು: ಚನ್ನಪಟ್ಟಣದಲ್ಲಿ ಉಪ ಚುನಾವಣೆ (Channapatna By Election) ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ.ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ,…— Nikhil Kumar (@Nikhil_Kumar_k) December 7, 2024
ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ | Pralhad Joshi: ದೇಶದಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ ಎಂದು ತಿಳಿಸಿರುವ ಅವರು, ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಮಾಡಿದ್ದಾರೆ.